ಪಟ್ಟಣದ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ಸಿಜೇರಿಯನ್ ಬಂದ ಮಾಡಿದ್ದು, ಇದನ್ನು ಪುನರಾರಂಭ ಮಾಡಬೇಕೆಂದು, ಕನ್ನಡ ಪರ – ಸಂಘಟನೆಗಳಿಂದ ಪ್ರತಿಭಟನೆ.

ಚಿಕ್ಕೋಡಿ ನ.25

ಪಟ್ಟಣದಲ್ಲಿ ನೂತನವಾಗಿ ಆರಂಭ ಗೊಂಡ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ಈಗಾಗಲೇ ಹಲವಾರು ಸಹಜ ಹೆರಿಗೆಗಳು ಹಾಗೂ ಸಿಜೇರಿಯನ್ ಗಳು ಆಗಿವೆ, ಆದರೆ ಬೆಳಗಾವಿ ಜಿಲ್ಲಾ ಆರೋಗ್ಯ ಅಧಿಕಾರಿಗಳ ಸೂಚನೆಯ ಮೇರೆಗೆ ಸಿಜೇರಿಯನ್ ಬಂದ ಮಾಡಿದ ಬಗ್ಗೆ ತಿಳಿದು ಬಂದ ಕಾರಣ, ಕರ್ನಾಟಕ ರಕ್ಷಣಾ ವೇದಿಕೆಯ ಚಿಕ್ಕೋಡಿ ತಾಲೂಕಾ ಅಧ್ಯಕ್ಷರಾದ ಸಂಜು ಬಡಿಗೇರ ಮತ್ತು ಜಯ ಕರ್ನಾಟಕ ಸಂಘಟನೆಯ ಮುಖಂಡರಾದ ಅಶ್ಪಾಕ್ ಸಯ್ಯದ ಇವರ ನೇತೃತ್ವದಲ್ಲಿ, ತಾಯಿ ಮಕ್ಕಳ ಆಸ್ಪತ್ರೆಯ ಎದುರಿಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ, ಈ ಸಂಧರ್ಭದಲ್ಲಿ ಸಮಾಜ ಸೇವಕ ಚಂದ್ರಕಾಂತ ಹುಕ್ಕೇರಿ ಮಾತನಾಡಿ, ಪ್ರಕಾಶ ಹುಕ್ಕೇರಿ ಮತ್ತು ಗಣೇಶ ಹುಕ್ಕೇರಿ ಇವರ ಪ್ರಯತ್ನದಿಂದ ಸುಮಾರು 28 ಕೋಟಿಗಿಂತಲೂ ಹೆಚ್ಚು ಖರ್ಚು ಮಾಡಿ, ಕಟ್ಟಸಲಾದ ಈ ಆಸ್ಪತ್ರೆಯು ಬಡ ಜನರಿಗಾಗಿ ಸಮರ್ಪಕ ಕಾರ್ಯ ಮಾಡುತ್ತಿತ್ತು,

ಆದರೆ ತಮ್ಮ ಖಾಸಗಿ ಆಸ್ಪತ್ರೆಯ ವ್ಯವಹಾರ ಕುಂಠಿತ ವಾಗಬಾರದು ಎಂಬ ವಿಚಾರದಿಂದ, ಮೇಲಾಧಿಕಾರಿಗಳು ಈ ನೂತನ ಆಸ್ಪತ್ರೆಯಲ್ಲಿ ಸಿಜೇರಿಯನ್ ಮಾಡುವುದನ್ನು ಸ್ಥಗಿತ ಗೊಳಿಸಿದ್ದು ಕಂಡು ಬಂದಿದೆ, ಇದನ್ನು ನಾವು ತೀವ್ರವಾಗಿ ಖಂಡಸುತ್ತೇವೆ, ಕೂಡಲೇ ಇಲ್ಲಿ ಪುಣ: ಸಿಜೇರಿಯನ್ ಮಾಡುವುದನ್ನು ಆರಂಭಿಸ ಬೇಕು ಮತ್ತು ಜಿಲ್ಲೆಯಲ್ಲಿರುವ ಸರಕಾರಿ ಆಸ್ಪತ್ರೆಗಳ ಹಿತ ದೃಷ್ಟಿಯಿಂದ, ಬೆಳಗಾವಿ ಜಿಲ್ಲಾ ಆರೋಗ್ಯಾಧಿಕಾರಿಯನ್ನು ಬೇರೆಡೆಗೆ ವರ್ಗಾಯಿಸ ಬೇಕೆಂದು ಹೇಳಿದರು, ಸಂಜು ಬಡಿಗೇರ ಮಾತನಾಡಿ, ಸರಕಾರ ದವರು ಬಡ ಜನರಿಗೆ ಸಹಾಯವಾಗಲಿ ಎಂದು ಇಷ್ಟೊಂದು ಸಾರ್ವಜನಿಕರ ಹಣವನ್ನು ವೆಚ್ಚ ಮಾಡಿ, ಈ ಆಸ್ಪತ್ರೆಯನ್ನು ನಿರ್ಮಾಣ ಮಾಡಿದ್ದಾರೆ, ಆದರೆ ಕೆಲವು ಆರೋಗ್ಯ ಇಲಾಖೆಯ ಅಧಿಕಾರಿಗಳ ತಂತ್ರ ಕುತಂತ್ರದಿಂದ ಆಸ್ಪತ್ರೆಯನ್ನು ಬಂದ ಮಾಡುವ ಷಡ್ಯಂತ್ರ ನಡೆದಿದೆ, ಇದಕ್ಕೆ ನಾವು ಆಸ್ಪದ ಕೊಡುವುದಿಲ್ಲ, ಕೂಡಲೇ ಪೂರ್ಣ ಪ್ರಮಾಣದ ಸಿಬ್ಬಂದಿ ನೇಮಕ ಮಾಡಿ ಸಿಜೇರಿಯನ್ ಆರಂಭ ಮಾಡಬೇಕು, ಬಡ ಜನರಿಗೆ ಅನುಕೂಲ ವಾಗಬೇಕು, ಇದಕ್ಕೆ ತಪ್ಪಿದಲ್ಲಿ ರಸ್ತೆಗಿಳಿದು ಜಿಲ್ಲಾ ಆರೋಗ್ಯಾಧಿಕಾರಿಯ ವಿರುದ್ಧ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಸರಕಾರಕ್ಕೆ ಎಚ್ಚರಿಕೆ ನೀಡಿದರು, ಚಿಕ್ಕೋಡಿ ಉಪ ವಿಭಾಗೀಯ ದಂಡಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿ, ಆರೋಗ್ಯ ಇಲಾಖೆಯ ದುಷ್ಟ-ಭ್ರಷ್ಟ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು. ಈ ಸಂಧರ್ಭದಲ್ಲಿ ಬಸವರಾಜ ಸಾಜನೆ, ಅಮೂಲ ನಾವಿ, ರಫೀಕ್ ಪಠಾಣ, ಖಾನಪ್ಪಾ ಬಾಡಕರ, ಸಚೀನ ದೊಡ್ಡಮನಿ, ಮಾಳು ಕರೆಣ್ಣವರ, ಸಂಜು ಕರೆಣ್ಣವರ, ಸಿದ್ರಾಮ್ ಕರಗಾಂವೆ, ಅಪ್ಪಾಸಾಹೇಬ ಹಿರೇಕೋಡಿ, ರಾಹುಲ್ ವಾಳಕೆ, ವಿಜಯ ಬ್ಯಾಳೆ, ಪ್ರಮೋದ್ ಪಾಟೀಲ್, ಸಚಿನ್ ಬುರುಡ, ಗಜಾನನ ಖಾಪೆ, ಪ್ರವೀನ ಝಳಕೆ, ರಾಖೇಶ ಹುಕ್ಕೇರಿ ಹಾಗೂ ಕನ್ನಡಪರ ಹೋರಾಟಗಾರರು ಉಪಸ್ಥಿತರಿದ್ದರು.

ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಎಂ.ಎಂ. ಶರ್ಮಾ ಬೆಳಗಾವಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button