ತನಗಾಗಿ ಬಯಸುವುದು ಜೀವಗುಣ ಎಲ್ಲರಿಗಾಗಿ – ಬಯಸುವುದು ದೇವಗುಣ.

ನರೇಗಲ್ ನ. 26

ಆರೋಗ್ಯ ಪೂರ್ಣ ಸಮಾಜ ನಿರ್ಮಾಣಕ್ಕೆ ಆದರ್ಶ ಚಿಂತನೆಗಳ ಅವಶ್ಯಕತೆಯಿದೆ. ಧರ್ಮ ಸಂಸ್ಕೃತಿ ಮತ್ತು ಆಧ್ಯಾತ್ಮ ಚಿಂತನೆಗಳ ಅರಿವು ಅಗತ್ಯ. ತನಗಾಗಿ ಬಯಸುವುದು ಮನುಷ್ಯನ ಗುಣವಾದರೆ ಎಲ್ಲರಿಗಾಗಿ ಬಯಸುವುದು ದೇವಗುಣ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ, ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.ಅವರು ಭಾನುವಾರ ಶ್ರೀ ಹಿರೇಮಠದ ಸಭಾ ಭವನದಲ್ಲಿ ಜರುಗಿದ ಪುರಾಣ ಪ್ರವಚನ ಮಂಗಲ ಹಾಗೂ ಸದ್ದರ್ಮ ಧಾಮ ಉದ್ಘಾಟನಾ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು. ಬಹು ಜನ್ಮದ ಪುಣ್ಯ ಫಲದಿಂದಾಗಿ ಮಾನವರಾಗಿ ಸಂಜನಿಸಿ ಬಂದಿದ್ದೇವೆ. ಅರಿವುಳ್ಳ ಜನ್ಮದಲ್ಲಿ ಬಂದ ಬಳಿಕ ಸ್ವಲ್ಪಾದರೂ ಶಿವಜ್ಞಾನ ಪ್ರಾಪ್ತಿಗಾಗಿ ಮತ್ತು ಗುರು ಕಾರುಣ್ಯಕ್ಕಾಗಿ ಶ್ರಮಿಸ ಬೇಕಾಗುತ್ತದೆ. ಅಧಿಕಾರದ ಅಂತಸ್ತು ಮೇಲೇರಿದಂತೆ ನೀತಿಯ ಅಂತಸ್ತು ಮೇಲೇರಬೇಕು. ಮನುಷ್ಯನ ಬುದ್ದಿ ಶಕ್ತಿ ಬೆಳೆದಷ್ಟು ಭಾವನೆಗಳು ಇಂದು ಬೆಳೆಯುತ್ತಿಲ್ಲ. ಮಾತು ಮನ ಕೃತಿ ಒಂದಾದಾಗ ಬದುಕು ಸದೃಢ ಗೊಳ್ಳುತ್ತದೆ. ಬೆಳೆಯುವ ಯುವ ಜನಾಂಗದಲ್ಲಿ ಸಂಸ್ಕಾರ ಸದ್ವಿಚಾರಗಳನ್ನು ಬೆಳೆಸುವ ಕೆಲಸ ವಾಗಬೇಕಾಗಿದೆ ಎಂದರು. ನೇತೃತ್ವ ವಹಿಸಿದ ಮಲ್ಲಿಕಾರ್ಜುನ ಶಿವಾಚಾರ್ಯರು ಮಾತನಾಡಿ ಜ್ಞಾನ ಕ್ರಿಯಾತ್ಮಕವಾದ ಧರ್ಮ ಪಾಲನೆಯಿಂದ ಜಗದಲ್ಲಿ ಶಾಂತಿ ನೆಲೆಸಲು ಸಾಧ್ಯ. ಜಾತಿ ಧರ್ಮಗಳ ಸಂಘರ್ಷದಲ್ಲಿ ಆದರ್ಶ ಮೌಲ್ಯಗಳು ನಾಶಗೊಳ್ಳ ಬಾರದು. ಶ್ರೀ ಜಗದ್ಗುರು ರೇಣುಕಾಚಾರ್ಯರು ಬೋಧಿಸಿದ ಆದರ್ಶ ಮೌಲ್ಯಗಳನ್ನು ಉಳಿಸಿ ಬೆಳೆಸುವ ಸಂಕಲ್ಪ ಎಲ್ಲರದು ಆಗಲೆಂದರು. ಸಮ್ಮುಖ ವಹಿಸಿದ ಅಬ್ಬಿಗೇರಿ-ಸಿದ್ಧರಬೆಟ್ಟದ ವೀರಭದ್ರ ಶಿವಾಚಾರ್ಯರು ಮಾತನಾಡಿ ಸಂಪತ್ತು ಬೆಳೆದಂತೆ ಸಭ್ಯತೆ ಸಂಸ್ಕೃತಿ ಮರೆಯ ಬಾರದು. ದೇವರು ಧರ್ಮ ಗುರುವನ್ನು ಆಶ್ರಯಿಸಿ ಆದರ್ಶ ಬದುಕು ಕಟ್ಟಿ ಕೊಳ್ಳಬೇಕೆಂದರು. ಸಂಗೊಳ್ಳಿ ಹಿರೇಮಠದ ಗುರುಲಿಂಗ ಶಿವಾಚಾರ್ಯರು ಉಪಸ್ಥಿತರಿದ್ದರು.

ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಎಸ್.ವಿ. ಸಂಕನಗೌಡ್ರ.ರೋಣ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button