ಕಾಮಗಾರಿ ಮುಗಿದರೂ ಉದ್ಘಾಟನೆ ಭಾಗ್ಯ ಕಾಣದ – ಇಂದಿರಾ ಕ್ಯಾಂಟೀನ್.
ರೋಣ ನ.26

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸಿನ ಯೋಜನೆಯಾದ ಇಂದಿರಾ ಕ್ಯಾಂಟೀನ್ ಐತಿಹಾಸಿಕ ರೋಣ ಪಟ್ಟಣದಲ್ಲಿ ಆರಂಭ ಗೊಳ್ಳಲು ಮುಹೂರ್ತ ಇನ್ನೂ ಕೂಡಿ ಬಂದಿಲ್ಲ.ಆಟೊ, ಟ್ಯಾಕ್ಸಿ ಚಾಲಕರು, ಬೀದಿಬದಿ ವ್ಯಾಪಾರಿಗಳು, ಕೂಲಿ ಕಾರ್ಮಿಕರು, ನಿರ್ಗತಿಕರಿಗೆ ಊಟ, ತಿಂಡಿ ಅತೀ ಕಡಿಮೆ ವೆಚ್ಚದಲ್ಲಿ ಲಭ್ಯವಾಗಲೆಂಬ ಉದ್ದೇಶದಿಂದ 2017 ರ ಆ. 16 ರಂದು ಇಂದಿರಾ ಕ್ಯಾಂಟೀನ್ಗಳನ್ನು ರಾಜ್ಯದಲ್ಲಿ ಆರಂಭಿಸಲಾಯಿತು.ಆದರೆ ರೋಣದ ಜನತೆಗೆ ಇನ್ನೂ ಈ ಯೋಜನೆ ಮರೀಚಿಕೆ ಆಗಿಯೇ ಉಳಿದಿದೆ.

ರೋಣ ಪಟ್ಟಣದ ಮುಖ್ಯ ರಸ್ತೆ ಮುಲ್ಲನಬಾವಿ ಕ್ರಾಸ್ ಮುಂಭಾಗದಲ್ಲಿ ನಿರ್ಮಾಣ ವಾಗಿರುವ ರಾಜ್ಯ ಸರ್ಕಾರದ ಮಹತ್ವ ಪೂರ್ಣ ಯೋಜನೆ ಇಂದಿರಾ ಕ್ಯಾಂಟೀನ್ ಇನ್ನೂ ಉದ್ಘಾಟನೆ ಗೊಂಡಿಲ್ಲ. ಅಧಿಕಾರಿಗಳು ಹಾಗೂ ಜನ ಪ್ರತಿ ನಿಧಿಗಳು ಈ ಬಗ್ಗೆ ತಲೆ ಕೆಡಿಸಿಕೊಳ್ಳದೆ ಇರೋದ್ರಿಂದ ಕೈಗೆ ಬಂದ ತುತ್ತು ಬಾಯಿಗೆ ಬರುತ್ತಿಲ್ಲ ಎಂಬಂತಾಗಿದೆ. ಬಡವರು ಮತ್ತು ಕಾರ್ಮಿಕರಿಗಾಗಿ ಇಂದಿನ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ಇಂದಿರಾ ಕ್ಯಾಂಟೀನ್ ರೋಣ ಪಟ್ಟಣದಲ್ಲಿ ಕಟ್ಟಡ ನಿರ್ಮಾಣ ಮಾಡಲಾಗಿದೆ ಯಾದ್ರೂ ಇನ್ನೂ ಉದ್ಘಾಟನೆ ಗೊಂಡಿಲ್ಲ. ಪ್ರತಿ ಕ್ಯಾಂಟೀನ್ ನಿಂದ ಒಂದು ಅವಧಿಗೆ ಗರಿಷ್ಠ 250 ಜನರಿಗೆ 5 ರೂ.ಗೆ ಉಪಹಾರ, 10 ರೂ.ಗೆ ಊಟ ದೊರೆಯಲಿದೆ. ಆದರೆ, ಜನ ಪ್ರತಿನಿಧಿಗಳ ನಿರ್ಲಕ್ಷ್ಯ ಹಾಗೂ ಅಧಿಕಾರಿಗಳ ಬೇಜವಾಬ್ದಾರಿಯಿಂದ ಇಂದಿರಾ ಕ್ಯಾಂಟಿನ್ ಉದ್ಘಾಟನೆ ಆಗುತ್ತಿಲ್ಲ. ಕ್ಯಾಂಟೀನ್ ಕಾಮಗಾರಿ ಪೂರ್ಣವಾಗಿದ್ದು, ಆದರೆ ಉದ್ಘಾಟನೆ ಮಾಡಲು ಅಧಿಕಾರಿಗಳು ಹಿಂದೇಟು ಹಾಕುತ್ತಿರುವುದು ಯಾಕೆ? ಎಂಬುದು ಗೊತ್ತಾಗುತ್ತಿಲ್ಲ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಎಸ್.ವಿ. ಸಂಕನಗೌಡ್ರ ರೋಣ.