ಆಟೋ ಚಾಲಕರಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ.
ಕೊಟ್ಟೂರು ನ. 29

ಪಟ್ಟಣದ ಗಾಂಧಿ ಸರ್ಕಲ್ ನಲ್ಲಿ ಶುಕ್ರವಾರ ಶ್ರೀ ಗುರು ಕೊಟ್ಟೂರೇಶ್ವರ ಆಟೋ ಚಾಲಕರ ಸಂಘ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಕನ್ನಡ ತಾಯಿ ಭುವನೇಶ್ವರಿ ಹಾಗೂ ನಟ ಪುನೀತ್ ರಾಜಕುಮಾರ್ ರವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಆಚರಣೆ ಮಾಡಲಾಯಿತು. ನಂತರ ಬರುವ ಭಕ್ತಾದಿಳಿಗೆ ಪ್ರಸಾದ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಆಟೋ ಅಧ್ಯಕ್ಷರಾದ ಕೆ.ವಿರೇಶ್ ಉಪಾಧ್ಯಕ್ಷ ತೇಜು,ಅಜ್ಜಯ್ಯ, ಕೆ.ಮಂಜು, ಶಿವಯ್ಯ, ಬಾಂಡ್ ರವಿ, ಚಂದ್ರಪ್ಪ, ಭಾರತ್. ಸುನಿಲ್, ಮಣಿ, ಮುಂತಾದವರು ಉಪಸ್ಥಿತರಿದ್ದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಪ್ರದೀಪ್.ಕುಮಾರ್.ಸಿ.ಕೊಟ್ಟೂರು

