ತಾಲೂಕ ಗ್ರಾಮ ಪಂಚಾಯಿತಿಗಳಲ್ಲಿ ಕರ ವಸೂಲಾತಿ – ಮಾಸಾಚರಣೆ ಅಭಿಯಾನ.
ಕೊಟ್ಟೂರು ಡಿ.01

ತಾಲೂಕ ವ್ಯಾಪ್ತಿಯ ಗ್ರಾಮ ಪಂಚಾಯತಿಯ ಹಳ್ಳಿಗಳಲ್ಲಿ ಶುಕ್ರವಾರ ದಿಂದ ಕರ ವಿಸೂಲಾತಿ ಮಾಸಾಚರಣೆಯ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಕರ ವಸೂಲಿಗೆ ಸಂಬಂಧಿಸಿದಂತೆ ತಾಲೂಕಿನ ನೋಡಲ್ ಅಧಿಕಾರಿಗಳಾದ ಜಿಲ್ಲಾ ಪಂಚಾಯತಿಯ ಸಹಾಯಕ ಕಾರ್ಯದರ್ಶಿಗಳು ಮೌನೇಶ್ ಅವರು ಹ್ಯಾಳ್ಳ್ಯಾ ಗ್ರಾಮ ಪಂಚಾಯತ್ ಗೆ ಭೇಟಿ ನೀಡಿ ಕರ ವಸೂಲಿ ಪರಿಶೀಲನೆ ನಡೆಸಿದರು. ಬಳಿಕ ಬಸ್ ನಿಲ್ದಾಣದಲ್ಲಿ ನಿರ್ಮಿಸಿರುವ ಪುಸ್ತಕ ಗೂಡನ್ನು ವೀಕ್ಷಿಸಿ ಪ್ರಶಂಷೆ ವ್ಯಕ್ತ ಪಡಿಸಿದರು. ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಿ.ಆನಂದಕುಮಾರ್ ಅವರು ತೂಲಹಳ್ಳಿ, ಉಜ್ಜಿನಿ, ಕಾಳಾಪುರ ಗ್ರಾಮ ಪಂಚಾಯತ್ ಗೆ ಭೇಟಿ ನೀಡಿ ತೆರಿಗೆ ಸಂಗ್ರಹದ ಮೇಲ್ವಿಚಾರಣೆ ನಡೆಸಿದರು. ಗ್ರಾಮದಲ್ಲಿ ತೆರಿಗೆ ವಸೂಲಾತಿ ಮಾಡುವ ಅಭಿಯಾನದಲ್ಲಿ ಭಾಗಿಯಾಗಿ ಮನೆ ಮನೆಗೆ ತೆರಳಿ ಕರ ವಸೂಲಾತಿ ಮಾಡುವುದನ್ನು ಪರಿಶೀಲನೆ ಮಾಡಿ ಪ್ರತಿ ಶುಕ್ರವಾರ ಮತ್ತು ಶನಿವಾರ ಸದರಿ ಅಭಿಯಾನ ಮಾಡುವ ಮೂಲಕ ನಿಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ ಸಂಪೂರ್ಣ ಕರ ವಸೂಲಿ ಮಾಡುವುದು ಕಡ್ಡಾಯವಾಗಿದೆ ಎಂದು ಗ್ರಾಮ ಪಂಚಾಯತಿ ಸಿಬ್ಬಂದಿಗೆ ಸೂಚಿಸಿದರು.

ಸಹಾಯಕ ನಿರ್ದೇಶಕರು (ಗ್ರಾ.ಉ) ಹೆಚ್. ವಿಜಯಕುಮಾರ್ ಅವರು ಅಲಬೂರು, ಅಂಬಳಿ, ಕೋಗಳಿ ಗ್ರಾಮ ಪಂಚಾಯತ್ ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ವ್ಯವಸ್ಥಾಪಕರಾದ ಪುಷ್ಪಲತಾ, ಇದ್ದರು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾ. ಪಂ. ಸಿಬ್ಬಂದಿಗಳು ಹಾಜರಿದ್ದರು. ತಾಲೂಕಿನಾದ್ಯಂತ ಶುಕ್ರವಾರ 5.91 ಲಕ್ಷ ರೂ. ಸಂಗ್ರಹವಾಗಿದೆ.ಶನಿವಾರ 6.31 ಲಕ್ಷ ರೂ.ತೆರಿಗೆ ಸಂಗ್ರಹಣೆಯಾಗಿದೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಪ್ರದೀಪ್.ಕುಮಾರ್.ಸಿ.ಕೊಟ್ಟೂರು