ಅಖಿಲ ಕರ್ನಾಟಕ ರಾಜ್ಯ ಕಿಸಾನ್ ಜಾಗೃತಿ ಸಂಘದ – ಪದಗ್ರಹಣ ಸಮಾರಂಭ.

ಕೂಡ್ಲಿಗಿ ಡಿ.02

ಅಖಿಲ ಕರ್ನಾಟಕ ರಾಜ್ಯ ಕಿಸಾನ್ ಜಾಗೃತಿ ಸಂಘದ ಜಿಲ್ಲಾ ಘಟಕದ ವತಿಯಿಂದ ಕೂಡ್ಲಿಗಿ ತಾಲೂಕ, ಮತ್ತು ಕೊಟ್ಟೂರು ತಾಲೂಕ ಪದಾಧಿಕಾರಿಗಳ ಪದಗ್ರಹಣ ಮತ್ತು ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜರುಗಿತು. ರಾಜ್ಯಾಧ್ಯಕ್ಷರಾದ ಎಮ್ ಪ್ರಕಾಶ್ ತಿಮ್ಮಲಾಪುರವರು ಮಾತನಾಡಿ ತಾಲೂಕಿನಲ್ಲಿ ರೈತರು ರೇಷ್ಮೆ ಇಲಾಖೆಯಿಂದ ಅನೇಕ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ, ಅತಿವೃಷ್ಟಿಯಿಂದ ಬೆಳೆ ಹಾನಿ. ರೈತ ನಿರಾಶ್ರಿತರ ವಸತಿ ಮುಂತಾದ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ ಇನ್ನೂ ಅನೇಕ ಮೂಲಭೂತ ಸೌಕರ್ಯಗಳ ಬಗ್ಗೆ ರೈತರ ಸಮಸ್ಯೆಗಳ ಬಗ್ಗೆ ಪರಿಹಾರಕ್ಕೆ ಹೋರಾಟ ರೂಪಿಸುವ ಕುರಿತು ಮಾತನಾಡಿದರು.ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ದಾಸರ ವೆಂಕಟೇಶ್ ರವರು ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ನೂತನವಾಗಿ ಆಯ್ಕೆಯಾದ ಸಂಘದ ಪದಾಧಿಕಾರಿಗಳಿಗೆ ಆದೇಶ ಪ್ರಮಾಣ ಪತ್ರವನ್ನು ವಿತರಿಸಿದರು.ಕೂಡ್ಲಿಗಿ ತಾಲೂಕು ಕರ್ನಾಟಕ ರಾಜ್ಯ ಕಿಸಾನ್ ಜಾಗೃತಿ ಸಂಘದ ಅಧ್ಯಕ್ಷರಾಗಿಯ ಸು.ಫ್. ಕೆ, ಗೌರವ ಅಧ್ಯಕ್ಷ ದೊಡ್ಡಣ್ಣ, ಪ್ರಧಾನ ಕಾರ್ಯದರ್ಶಿ ಕಾಸಿಂಸಾಬ್. ಉಪಾಧ್ಯಕ್ಷರಾಗಿ ಎಂ.ಮರುಳು ಸಿದ್ದಪ್ಪ, ಸಹ ಕಾರ್ಯದರ್ಶಿ ಆರ್.ರಮೇಶ್, ಸಂಘಟನಾ ಕಾರ್ಯದರ್ಶಿಯಾಗಿ ದಾದಾಪೀರ್ ಅವರನ್ನು ಆಯ್ಕೆ ಮಾಡಲಾಯಿತು.ಕೊಟ್ಟೂರು ತಾಲೂಕ ಗೌರವ ಅಧ್ಯಕ್ಷರಾಗಿ ಗೋಣೆಪ್ಪ, ಉಪಾಧ್ಯಕ್ಷರಾಗಿ ರಾಜಶೇಖರ್.ಎಸ್, ಸಂಘಟನಾ ಕಾರ್ಯದರ್ಶಿಯಾಗಿ ಎಂ.ಪ್ರಕಾಶ್ ಇವರನ್ನು ಆಯ್ಕೆ ಮಾಡಲಾಯಿತು.

ಹೋಬಳಿ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಕೆ.ಎಸ್.ವೀರೇಶ್.ಕೆ.ಹೊಸಹಳ್ಳಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button