ಸಫಾಯಿ ಕರ್ಮಚಾರಿಗಳು ಸಂಘಟಿತರಾಗ ಬೇಕು – ತರೀಕೆರೆ.ಎನ್ ವೆಂಕಟೇಶ್.

ಚಿಕ್ಕಮಗಳೂರು ಡಿ. 03

ಆಸ್ಪತ್ರೆಯಲ್ಲಿ ಸ್ವಚ್ಛತೆ ಕೆಲಸ ಮಾಡುವ ಸಪಾಯಿ ಕರ್ಮಚಾರಿಗಳು ಸಂಘಟಿತರಾಗ ಬೇಕು ಎಂದು ಸಪಾಯಿ ಕರ್ಮಚಾರಿಗಳ ಜಾಗೃತಿ ಸಮಿತಿ ಸದಸ್ಯರಾದ ತರೀಕೆರೆ.ಎನ್ ವೆಂಕಟೇಶ್ ಹೇಳಿದರು. ಅವರು ಸೋಮವಾರ ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಯಲ್ಲಿ ಏರ್ಪಡಿಸಿದ್ದ ಸಪಾಯಿ ಕರ್ಮಚಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸಪಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಸವಲತ್ತುಗಳನ್ನು ಪಡೆದು ಕೊಳ್ಳಬೇಕು ತಮ್ಮ ಕುಂದು ಕೊರತೆಗಳನ್ನು ಸಂಘಟಿತರಾಗಿ ಬಗೆಹರಿಸಿ ಕೊಳ್ಳಬೇಕು ಎಂದು ಹೇಳಿದರು. ಜಿಲ್ಲಾ ಸಪಾಯಿ ಕರ್ಮಚಾರಿ ಜಾಗೃತಿ ಸಮಿತಿ ಸದಸ್ಯರಾದ ಬಾಳೆ ಹೊನ್ನೂರಿನ ಎಂ.ವಿ ಭವಾನಿ ರವರು ಮಾತನಾಡಿ, ತಮ್ಮ ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಿ ಅವರು ಉನ್ನತ ಉದ್ಯೋಗ ಸ್ಥಾನಮಾನ ಪಡೆಯಬೇಕು, ಎಲ್ಲರೂ ಒಗ್ಗಟ್ಟಾಗಿರ ಬೇಕು ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಸಪಾಯಿ ಕರ್ಮಚಾರಿಗಳ ಸಂಘದ ಅಧ್ಯಕ್ಷರಾಗಿ ಕಿರಣ್ ಕುಮಾರ್, ಉಪಾಧ್ಯಕ್ಷರಾಗಿ ಯುವರಾಜ, ಪ್ರಧಾನ ಕಾರ್ಯದರ್ಶಿಯಾಗಿ ಕಲಾವತಿ, ಸಹ ಕಾರ್ಯದರ್ಶಿಯಾಗಿ ನಾಗಲಕ್ಷ್ಮಿ, ಖಜಾಂಚಿಯಾಗಿ ಲತಾ, ಕಾರ್ಯನಿರ್ವಾಹಕ ಸಮಿತಿ ಸದಸ್ಯರಾಗಿ ಗುರುವಮ್ಮ, ಕಮಲ, ಗೀತಾ ಟಿ, ಗಾಯಿತ್ರಿ ರವರನ್ನು ಸರ್ವಾನು ಮತದಿಂದ ಆಯ್ಕೆ ಮಾಡಲಾಯಿತು. ಕರ್ನಾಟಕ ದಲಿತ ಸಂಘರ್ಷ ಸಮಿತಿಯ ತಾಲೂಕ ಸಂಘಟನಾ ಸಂಚಾಲಕರಾದ ಸುನಿಲ್ ಉಪಸ್ಥಿತರಿದ್ದರು.

ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನೆಲ್:ಎನ್. ವೆಂಕಟೇಶ್.ತರೀಕೆರೆ.ಚಿಕ್ಕಮಗಳೂರು

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button