ಬಿಲ್ ತಡೆಗೆ ರೈತ ಸಂಘದ ಮುಖಂಡರಿಂದ ಲೋಕೋಪಯೋಗಿ ಇಲಾಖೆಗೆ – ಮನವಿ ಸಲ್ಲಿಕೆ.
ಮಾನ್ವಿ ಡಿ.05

ಕಲ್ಯಾಣ ಕರ್ನಾಟಕ ಅಭಿವೃದ್ಧಿಯಾಗ ಬೇಕು ಎಂದು ಸರಕಾರ ಮಾನ್ವಿ ತಾಲೂಕಿನ ಕರಡಿಗುಡ್ಡ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸಲುವಾಗಿ ಸಿ.ಸಿ ರಸ್ತೆ ಕಾಮಗಾರಿಗೆ 50. ಲಕ್ಷ ₹ ಅನುದಾನ ನೀಡಿದೆ. ಆದರೆ ಮಾನ್ವಿ ಲೋಕೋಪಯೋಗಿ ಇಲಾಖೆ ಅಭಿಯಂತರರು ಹಾಗೂ ಗುತ್ತಿಗೆದಾರ ಮೋಹನ ಸೇರಿಕೊಂಡು 50 ಲಕ್ಷ ವೆಚ್ಚದ ಕಾಮಗಾರಿ ಕಳಪೆಯಾಗಿದ್ದು, ಬಿಲ್ ತಡೆಯಿಡಿಯ ಬೇಕು ಎಂದು ಕರ್ನಾಟಕ ರೈತ ಸಂಘ ಹಾಗು ಹಸಿರು ಸೇನೆ ತಾಲೂಕಾಧ್ಯಕ್ಷ ಹೊಳೆಯಪ್ಪ ಉಟಕನೂರು ಒತ್ತಾಯಿಸಿದ್ದಾರೆ.
2023-24 ನೇ. ಸಾಲಿನ ಕೆ.ಕೆ.ಆರ್.ಡಿ.ಬಿ ಯೋಜನೆಯ 50 ಲಕ್ಷ ₹ ಅನುದಾನವನ್ನು ಕರಡಿಗುಡ್ಡ ಗ್ರಾಮದ ರಸ್ತೆ ಹದಗೆಟ್ಟ ಹಿನ್ನೆಲೆಯಲ್ಲಿ ಶಾಸಕ ಹಂಪಯ್ಯ ನಾಯಕರು ಅನುದಾನ ನೀಡಿದ್ದರು. ಆದರೆ ಮಾನ್ವಿ ಲೋಕೋಪಯೋಗಿ ಅಭಿಯಂತರ ಮಕ್ಸೂದ್, ಎಇಇ ಸಾಮುವೇಲಪ್ಪ ಗುತ್ತಿಗೆದಾರ ಮೋಹನ ಸೇರಿ ಕೊಂಡು ಕಳಪೆ ಕಾಮಗಾರಿ ಮಾಡಿದ್ದಾರೆಂದ ಲೋಕೋಪಯೋಗಿ ಇಲಾಖೆಗೆ ಸಲ್ಲಿಸಿದ ಮನವಿಯಲ್ಲಿ ಆರೋಪಿಸಿದ್ದಾರೆ.
ಮಾನ್ವಿ ಲೋಕೋಪಯೋಗಿ ಅಭಿಯಂತರರು ಹಾಗೂ ಗುತ್ತಿಗೆದಾರ ಮೋಹನ ಅವರು ಮಾಡಿದ ಸಿ.ಸಿ ರಸ್ತೆ ಕಾಮಗಾರಿಯನ್ನು ಉನ್ನತ ಮಟ್ಟದ ಅಧಿಕಾರಿಗಳು ತನಿಖೆ ಮಾಡಿ ಗುತ್ತಿಗೆದಾರ ಮೋಹನ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಹಾಗೆಯೇ ಯಾವುದೇ ಕಾರಣಕ್ಕೂ ಬಿಲ್ ಮಾಡಬಾರದು,ಒಂದು ವೇಳೆ ಬಿಲ್ ಪಾವತಿ ಮಾಡಿದ್ದೇ ಆದಲ್ಲಿ ಮಾನ್ವಿ ಲೋಕೋಪಯೋಗಿ ಇಲಾಖೆ ಮುಂದೆ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನೆಲ್: ಹುಸೇನ್.ಭಾಷಾ.ನಕ್ಕುಂದಿ.ಮಾನ್ವಿ