ನೆಹರು ಮಕ್ಕಳನ್ನು ಪ್ರೀತಿಸುತ್ತಿದ್ದರು – ಅಂತೋನಿರಾಜ್.
ತರೀಕೆರೆ ನವೆಂಬರ್.17

ಬ್ರಿಟಿಷರ ವಿರುದ್ಧ ಸ್ವತಂತ್ರಕ್ಕಾಗಿ ಹೋರಾಟ ಮಾಡಿದವರು ಜವಹರಲಾಲ್ ನೆಹರು ರವರು ಎಂದು ಚಿಕ್ಕಮಗಳೂರಿನ ಡಯಟ್ ನ ಉಪನ್ಯಾಸಕರಾದ ಅಂತೋನಿ ರಾಜ್ ರವರು ಹೇಳಿದರು. ಅವರು ಪಟ್ಟಣದ ಡಾ. ಬಿಆರ್ ಅಂಬೇಡ್ಕರ್ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ಮಕ್ಕಳ ದಿನಾಚರಣೆಯನ್ನು ಉದ್ಘಾಟನೆ ಮಾಡಿ ಮಾತನಾಡಿದರು. ಜವಹರಲಾಲ್ ನೆಹರು ಸ್ವತಂತ್ರ ಭಾರತಕ್ಕೆ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ,ಅವರು ಮಕ್ಕಳನ್ನು ಹೆಚ್ಚಾಗಿ ಪ್ರೀತಿಸುತ್ತಿದ್ದರು ಆದ್ದರಿಂದ ಎಲ್ಲರೂ ಅವರನ್ನು ಚಾಚಾ ನೆಹರು ಎಂದು ಕರೆಯುತ್ತಿದ್ದರು . ಅವರ ಜೀವನ ನಮಗೆ ಮಾದರಿ ಯಾಗಬೇಕಾಗಿದೆ. ಅವರ ವ್ಯಕ್ತಿತ್ವವನ್ನು ನಮ್ಮ ಜೀವನದಲ್ಲಿ ಅಳವಡಿಸಿ ಕೊಳ್ಳೋಣ ಎಂದು ಹೇಳಿದರು. ಮುಖ್ಯ ಅತಿಥಿಗಳಾದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕರಾದ ತರೀಕೆರೆ ಎನ್ ವೆಂಕಟೇಶ್ ಮಾತನಾಡಿ ಜವಹರಲಾಲ್ ನೆಹರು ರವರು ಸ್ವಾತಂತ್ರ ಹೋರಾಟಗಾರರಾಗಿ ನಂತರ ಸ್ವತಂತ್ರ ಭಾರತದ ಪ್ರಧಾನ ಮಂತ್ರಿಯಾಗಿ ಬ್ರಿಟಿಷರಿಂದ ಶೋಷಣೆಗೆ ಒಳಗಾದ ಭಾರತವನ್ನು ಸಮೃದ್ಧ ಭಾರತ ನಿರ್ಮಾಣ ಮಾಡಿದ್ದಾರೆ. ಪಂಚವಾರ್ಷಿಕ ಯೋಜನೆಗಳನ್ನು ಜಾರಿಗೆ ತಂದು ದೇಶದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ನೆಹರು ರವರು ಮಕ್ಕಳನ್ನು ಪ್ರೀತಿಸುತ್ತಿದ್ದರಿಂದ ಅವರ ಜನ್ಮ ದಿನವನ್ನು ಮಕ್ಕಳ ದಿನಾಚರಣೆ ಎಂದು ಸರ್ಕಾರ ಘೋಷಣೆ ಮಾಡಿದೆ. ಆದ್ದರಿಂದ ರಾಜ್ಯಾದ್ಯಂತ ಇಂದು ಮಕ್ಕಳ ದಿನಾಚರಣೆ ಆಚರಿಸಲಾಗುತ್ತಿದೆ. ಈ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲರೂ ಸಹ ಉನ್ನತ ವ್ಯಾಸಂಗ ಪಡೆದು ಉನ್ನತ ಸ್ಥಾನಮಾನ ಪಡೆಯಬೇಕು ಎಂದು ಹೇಳಿದರು. ಕ ದ ಸಂ ಸ. ತಾಲೂಕು ಸಂಚಾಲಕರಾದ ಎನ್ ಹೆಚ್ ಬಸವರಾಜ್ ಮಾತನಾಡಿ ಸರ್ಕಾರಿ ಶಾಲೆಯಲ್ಲಿ ಓದಿದ ಮಕ್ಕಳು ದೇಶದ ಭವಿಷ್ಯ ರೂಪಿಸಿದ್ದಾರೆ. ಉನ್ನತ ಸ್ಥಾನಮಾನ ಪಡೆದಿದ್ದಾರೆ. ಅವರಂತೆ ಮಹಾನ್ ಸಾಧಕರಾಗಬೇಕೆಂದು ಮಕ್ಕಳಿಗೆ ಹೇಳಿದರು. ವಿದ್ಯಾರ್ಥಿ ಜಗದೀಶ್ ಪ್ರಾರ್ಥಿಸಿ, ಶಾಲಾ ಮುಖ್ಯ ಶಿಕ್ಷಕರಾದ ಮೆಹರುನ್ನಿಸಾ ರವರು ಸ್ವಾಗತಿಸಿ ವಂದಿಸಿದರು.
ಜಿಲ್ಲಾ ವರದಿಗಾರರು:ಎನ್.ವೆಂಕಟೇಶ್.ತರೀಕೆರೆ