ಹಾಸ್ಟೇಲ್ ಮತ್ತು ವಸತಿ ಶಾಲಾ ಹೊರ ಗುತ್ತಿಗೆ ನೌಕರರ ಹಾಗೂ ಅತಿಥಿ ಶಿಕ್ಷಕ ನೌಕರರು – ಬೆಳಗಾವಿ ಚಲೋ.

ಚಿಕ್ಕಮಗಳೂರು. ಡಿ.09

ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೇಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಹಾಗೂ ಅತಿಥಿ ಶಿಕ್ಷಕರ ನೌಕರರ ಸಭೆಯು ಚಿಕ್ಕಮಗಳೂರು ಪ್ರವಾಸಿ ಮಂದಿರದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ರಾಜ್ಯ ಜಂಟಿ ಕಾರ್ಯದರ್ಶಿ ಹಾಗೂ ಜಿಲ್ಲಾಧ್ಯಕ್ಷರಾದ ಶಿವಮೂರ್ತಿ ಎಸ್ ಅಧ್ಯಕ್ಷತೆ ವಹಿಸಿದ್ದರು. ಈ ಸಭೆಗೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ ಹನುಮೇಗೌಡ ರವರು ಸಂಘದ ಸಾಧನೆಯ ಬಗ್ಗೆ ಹೊರಗುತ್ತಿಗೆ ನೌಕರರಿಗೆ ಮತ್ತು ಅತಿಥಿ ಶಿಕ್ಷಕರಿಗೆ ತಿಳಿಸಿದರು. ಹಾಗೂ ಇದೇ ತಿಂಗಳ 18 ರಂದು ಬೆಳಗಾವಿಯಲ್ಲಿ ಅನಿರ್ದಿಷ್ಟ ಮುಷ್ಕರ ಹಮ್ಮಿಕೊಂಡಿದ್ದು. ರಾಜ್ಯದಿಂದ ಸುಮಾರು 5000 ಕ್ಕೂ ಹೆಚ್ಚು ಹೊರಗುತ್ತಿಗೆ ನೌಕರರು ಮತ್ತು ಅತಿಥಿ ಶಿಕ್ಷಕರು ಭಾಗವಹಿಸಿ ಸರ್ಕಾರ ದಿಂದ ನ್ಯಾಯಯುತವಾಗಿ ಸಮಾಜ ಕಲ್ಯಾಣ ಇಲಾಖೆಯ ಡಾ, ಭಾರತ ರತ್ನ ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯಲ್ಲಿ ಹತ್ತಾರು ವರ್ಷಗಳಿಂದ ಕಡಿಮೆ ವೇತನ ಪಡೆದು ಕೆಲಸ ಮಾಡುತ್ತಿದ್ದು ಸದ್ಯಕ್ಕೆ 8 ರಿಂದ 8.500 ವೇತನ ಸಿಗುತ್ತಿದ್ದು ಇ.ಪಿ.ಎಫ್ ಇ.ಎಸ್.ಐ ಯಾವುದು ಸಿಗುತ್ತಿಲ್ಲ ಏಜೆನ್ಸಿ ಹಾಗೂ ಸರ್ಕಾರ ಕನಿಷ್ಠ ವೇತನವನ್ನೂ ನೀಡುತ್ತಿಲ್ಲ ಇತರೆ ವಸತಿ ಶಾಲಾ ಶಿಕ್ಷಕರಿಗೆ ಹೆಚ್ಚು ವೇತನ ನೀಡುತ್ತಿದ್ದು. ನಮ್ಮಗಳಿಗೆ ಈ ರೀತಿ ಮಾಡುತ್ತಿರುವುದನ್ನು ಖಂಡಿಸಿ ಬೆಳಗಾವಿ ಹೋರಾಟದಲ್ಲಿ ಭಾಗವಹಿಸುವುದಾಗಿ ಅತಿಥಿ ಶಿಕ್ಷಕರು ತಿಳಿಸಿದರು. ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ಪಂಗಡಗಳ ಇಲಾಖೆ, ಅಲ್ಪಸಂಖ್ಯಾತ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ ಕಳೆದ 15-20 ವರ್ಷಗಳಿಂದ ಕಡಿಮೆ ಸಂಬಳಕ್ಕೆ ದುಡಿಯುತ್ತಾ ಬಂದಿದ್ದು. ಮಹಿಳೆಯರು ದಲಿತರು ಹೆಚ್ಚಿನದಾಗಿ ಈ ಕೆಲಸದ ಮಾಡುತ್ತಾ ಬಂದಿದ್ದು ಕಡೆ ಗಣಿಸುತ್ತಿರುವುದನ್ನು ಖಂಡಿಸಿದರು.

ನೇರವಾಗಿ ಇಲಾಖೆಯಿಂದ ವೇತನ ಕೊಡುವುದು, ಹತ್ತು ವರ್ಷ ಸೇವೆ ಸಲ್ಲಿಸಿರುವವರನ್ನು ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮದ ಅಡಿಯಲ್ಲಿ ಎಲ್ಲರನ್ನೂ ತರುವುದು, ಕನಿಷ್ಠ ವೇತನ ಮಾಸಿಕ 31,000 ಕೊಡುವುದು, ಸೇವಾ ಭದ್ರತೆ, ಸಮಾನ ಕೆಲಸಕ್ಕೆ ಸಮಾನ ವೇತನ, ಬೀದರ್ ಜಿಲ್ಲೆಯ ಮಾದರಿಯಲ್ಲಿ ಜಿಲ್ಲಾ ಕಾರ್ಮಿಕ ಸಂಸ್ಥೆಗಳ ವಿವಿಧೋದ್ದೇಶ ಸಹಕಾರ ಸಂಘವನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ವಿಸ್ತರಿಸುವುದು, ನಿವೃತ್ತಿ ನಂತರ 10 ಲಕ್ಷ ಪರಿಹಾರ ಕೊಡುವುದು, ಏಳು ಜನ ಇರುವ ವಸತಿ ಶಾಲೆಗಳಲ್ಲಿ ಹೆಚ್ಚುವರಿ ನಾಲಕ್ಕು ಜನರನ್ನು ನೇಮಕ ಮಾಡುವಂತೆ, ಹೀಗೆ ಹಲವಾರು ಬೇಡಿಕೆಗಳನ್ನು ಇಟ್ಟು ಕೊಂಡು ಸಂಘ ಪ್ರತಿಭಟನೆ ಮಾಡುತ್ತಿದ್ದು ಎಲ್ಲಾ ಹೊರಗುತ್ತಿಗೆ ನೌಕರರು ಪ್ರತಿಭಟನೆಯಲ್ಲಿ ಭಾಗವಹಿಸ ಬೇಕು ಸರ್ಕಾರ ನಮ್ಮ ಬೇಡಿಕೆಗಳನ್ನು ಸರ್ಕಾರ ನಮ್ಮಗಳ ಬೇಡಿಕೆಗಳನ್ನು ಈಡೇರಿಸುವವರೆಗೂ ಪ್ರತಿಭಟನೆ ಮಾಡಲಾಗುವುದು ಎಂದು ತಿಳಿಸಿದರು. ಚಿಕ್ಕಮಗಳೂರು, ಕಡೂರು, ತರೀಕೆರೆ, ಎನ್ಆರ್ ಪುರ, ಶೃಂಗೇರಿ, ಕೊಪ್ಪ ಇತರ ತಾಲೂಕಿನ ಹೊರಗುತ್ತಿಗೆ ನೌಕರರು ಹಾಗೂ ಅತಿಥಿ ಶಿಕ್ಷಕರು ಹಾಜರಿದ್ದರು.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button