ಪ್ರತ್ಯೇಕ ಚಿಕ್ಕೋಡಿ ಜಿಲ್ಲೆಯಾಗಿ ನಡೆದ ಧರಣಿ ಸತ್ಯಾಗ್ರಹ 7 ನೇ. ದಿನಕ್ಕೆ ಕಾಲಿಟ್ಟಿದೆ, ಇನ್ನೂ ವರೆಗೆ ಯಾವೊಬ್ಬ ಜನ ಪ್ರತಿನಿಧಿಗಳೂ ಸಹ ವೇದಿಕೆ ಕಡೆಗೆ ಸುಳಿಯದೇ – ಇರುವುದು ವಿಷಾದಕರ ಸಂಗತಿಯಾಗಿದೆ.
ಬೆಳಗಾವಿ ಡಿ.15

ಆರೋಗ್ಯ ಇಲಾಖೆಯ ಅಧಿಕಾರಿಗಳಿಂದ, ಧರಣಿ ನಿರತರ ಹೋರಾಟಗಾರರನ್ನು ಆರೋಗ್ಯ ತಪಾಸಣೆ ಮಾಡಲಾಯಿತು. ಕೇರೂರ ಗ್ರಾಮದ ಯುವಕರು ಚಿಕ್ಕೋಡಿ ಜಿಲ್ಲೆಯ ಹೋರಾಟಕ್ಕೆ ಬೆಂಬಲಿಸಿ ಜಿಲ್ಲಾ ಹೋರಾಟಗಾರರಿಗೆ ಶಕ್ತಿ ತುಂಬಿದರು. ಯುವ ಹೋರಾಟಗಾರ ಪ್ರತಾಪಸಿಂಹ ಪಾಟೀಲ ಮಾತನಾಡಿ ಚಿಕ್ಕೋಡಿ ಜಿಲ್ಲೆ ಆಗುವುದರಿಂದ, ಆಡಳಿತದಲ್ಲಿ ಸುಧಾರಣೆ ಆಗುತ್ತದೆ, ಉದ್ಯಮಗಳು ಸ್ಥಾಪನೆ ಗೊಳ್ಳುತ್ತವೆ, ಇದರಿಂದ ಯುವಕರಿಗೆ ಉದ್ಯೋಗಗಳು ಸಿಗಲಿವೆ, ದೂರದ ಬೆಳಗಾವಿಗೆ ಕೆಲಸ ಕಾರ್ಯಕ್ಕಾಗಿ ಅಲೆದಾಡುವುದು ತಪ್ಪಲಿದೆ ಎಂದು ಹೇಳಿದರು. ಈ ಸಂಧರ್ಭದಲ್ಲಿ ಸಿದ್ದು ಕಾಂಬಳೆ, ಯಾಶೀನ ಜಮಾದಾರ, ಕೇದಾರಿ ಹುಬ್ಬಳ್ಳಿ, ಚಂದ್ರಕಾಂತ ಹುಕ್ಕೇರಿ, ಸಂಜು ಬಡಿಗೇರ, ಅಪ್ಪಾಸಾಹೇಬ ಹಿರೆಕೋಡಿ, ಚಿದಾನಂದ ಶಿರೋಳೆ, ಅಮೂಲ ನಾವಿ, ವಿಜಯ ಬ್ಯಾಳೆ, ಮಾಳು ಕರೆಣ್ಣವರ, ಸಂತೋಷ ಪೂಜೇರಿ, ಪ್ರಮೋದ್ ಪಾಟೀಲ, ಸುರೇಶ ಜಿಡ್ಡಿಮನಿ, ಆನಂದ ಮಗದುಮ್ ಹಾಗೂ ಇತರ ಹೋರಾಟಗಾರರು ಉಪಸ್ಥಿತರಿದ್ದರು.
ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಎಂ.ಎಂ ಶರ್ಮಾ ಬೆಳಗಾವಿ