ಕೇಂದ್ರದ ಗೃಹ ಸಚಿವ ಅಮಿತ್ ಷಾ ಹೇಳಿಕೆ ವಿರುದ್ಧ – ಸುಳ್ಯ ದಂಡಾಧಿಕಾರಿಗಳ ಮೂಲಕ ರಾಷ್ಟ್ರಪತಿಗೆ ಮನವಿ.
ಸುಳ್ಯ ಡಿ.20

ಕೇಂದ್ರದ ಗೃಹ ಸಚಿವ ಅಮಿತ್ ಷಾ ಸಂಸತ್ ನಲ್ಲಿ ಚರ್ಚೆ ಮಾಡುತ್ತ ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಎಂಬ ಹೆಸರು ಫ್ಯಾಶನ್ ಆಗಿದೆ ಅದರ ಬದಲು ದೇವರ ಹೆಸರನ್ನು ಹೇಳುತ್ತಿದ್ದರೆ. ಏಳೇಳು ಜನ್ಮಕ್ಕೂ ನೀವು ಸ್ವರ್ಗಕ್ಕೆ ಹೋಗುತ್ತಿದ್ದೀರಿ ಎಂದು ಹೇಳಿ ಅಂಬೇಡ್ಕರ್ ರವರಿಗೆ ಅಪಮಾನ ಮಾಡಿರುವುದರಿಂದ ಕೇಂದ್ರ ಗೃಹ ಸಚಿವ ಅಮಿತ್ ಷಾ ರವರು ಕೂಡಲೇ ಸಂಸತ್ ಸ್ಥಾನಕ್ಕೆ ಮತ್ತು ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕರ್ನಾಟಕ ರಾಜ್ಯದ ರಾಜ್ಯಪಾಲರ ಮೂಲಕ ರಾಷ್ಟ್ರಪತಿಗೆ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ ಕೆ.ಪಲ್ಲತ್ತಡ್ಕ ತಾಲೂಕು ಘಟಕದ ಅಧ್ಯಕ್ಷರಾದ ಸತೀಶ್ ಬೂಡುಮಕ್ಕಿ, ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ಅಜ್ಜಾವರ ಗ್ರಾಮ ಘಟಕದ ಅಧ್ಯಕ್ಷರಾದ ಹರೀಶ್ ಮೇನಾಲ. ನಾಗೇಶ್ ಬೂಡು ಉಪಸ್ಥಿತರಿದ್ದರು ಎಂದು ವರದಿಯಾಗಿದೆ.