ಸಂಗನ ಗೌಡರಿಗೆ “ಸಂಗಮ ಸಿರಿ” ಪ್ರಶಸ್ತಿ.
ಹುಬ್ಬಳ್ಳಿ ಅಕ್ಟೋಬರ್.21

ಡಾ.ಸಂಗಮೇಶ ಹಂಡಿಗಿ ಸಾಹಿತ್ಯ ಪ್ರತಿಷ್ಠಾನದಿಂದ ನೀಡುವ “ಸಂಗಮ ಸಿರಿ”- 23ರ ಪ್ರಶಸ್ತಿಯು ವಚನ ರಚನೆ ವಿಭಾಗದಲ್ಲಿ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಸರೂರ್ ಗ್ರಾಮದ ಶ್ರೀ ಸಿದ್ದನಗೌಡ ಬಿಜ್ಜೂರ ಅವರ ರಚಿಸಿದ” ಮೃದು ವಚನ” ಆಧುನಿಕ ವಚನ ಸಂಕಲನಕ್ಕೆ ನೀಡಲಾಗಿದೆ.ಪ್ರಶಸ್ತಿಯು 10 ಸಾವಿರ ರೂ.ಹಾಗೂ ಫಲಕವನ್ನು ಒಳಗೊಂಡಿದೆ. ಈ ಕುರಿತು ಪ್ರತಿಷ್ಠಾನದ ಅಧ್ಯಕ್ಷ ಜಿ.ಬಿ.ಗೌಡಪ್ಪಗೊಳ ಅಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ನಿರ್ಧರಿಸಲಾಯಿತು.ಕಳೆದ ವರ್ಷ ಸಂಶೋಧನ ಕ್ಷೇತ್ರದಲ್ಲಿ ಡಾ.ದಂಡೆ ದಂಪತಿಗೆ ನೀಡಲಾಗಿತ್ತು.ಆಯ್ಕೆ ಸಮಿತಿ ಸಭೆಯಲ್ಲಿಗೌರವಾಧ್ಯಕ್ಷ ಗಣಪತಿ ಗಂಗೊಳ್ಳಿ ,ಪ್ರಧಾನ ಕಾರ್ಯದರ್ಶಿ ಡಾ. ವೀರೇಶ್ ಹಂಡಗಿ ಆಯ್ಕೆ ಸಮಿತಿಯ ಮುಖ್ಯಸ್ಥರಾದ ಸಾಹಿತಿ ಮಹಾಂತಪ್ಪ ನಂದೂರು, ಸುಶೀಲೇಂದ್ರ ಕುಂದರಗಿ, ಜಿ.ಎಸ್. ಅಂಗಡಿ,ಡಾ. ಬಿ. ಎಸ್. ಮಾಳವಾಡ, ಕಸಾಪ ಜಿಲ್ಲಾಧ್ಯಕ್ಷ ಡಾ. ಲಿಂಗರಾಜ್ ಅಂಗಡಿ, ಕಾರ್ಯದರ್ಶಿ ರವೀಂದ್ರ ರಾಮದುರ್ಗಕರ್ ಇತರರು ಪಾಲ್ಗೊಂಡಿದ್ದರು. ನವೆಂಬರ್ ನಲ್ಲಿ ನಡೆಯುವ ಸಮಾರಂಭದಲ್ಲಿ ಈ ಪ್ರಶಸ್ತಿ ನೀಡಲಾಗುವುದು. ಕವಿ ಪರಿಚಯ: ಸಿದ್ದನಗೌಡ ಬಿಜ್ಜುರ್ ಅವರು ವೃತ್ತಿಯಿಂದ ಶಿಕ್ಷಕರಾಗಿ ಸದ್ಯ ಮುದ್ದೇಬಿಹಾಳ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಕ್ಷೇತ್ರ ಸಂಪನ್ಮೂಲ ವ್ಯಕ್ತಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮಕ್ಕಳ ಸಾಹಿತಿಯಾಗಿ ಗುರುತಿಸಿಕೊಂಡ ಸಿದ್ದನಗೌಡರು ವಚನ ಸಾಹಿತ್ಯದಲ್ಲಿಯೂ ಸಹಿತ ತಮ್ಮನ್ನು ತಾವು ಬರವಣಿಗೆಯಲ್ಲಿ ತೊಡಗಿಸಿಕೊಂಡು ವಿಜಯಪುರ ಜಿಲ್ಲೆಯಲ್ಲಿ ಗುರುತಿಸಿಕೊಂಡಿದ್ದಾರೆ.
–
ವರದಿ-ಪ್ರಭು ಗಂಜಿಹಾಳ
ಮೊ.9448775346