ವೈಭವ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿನಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ರಸ ಪ್ರಶ್ನೆ – ವಿಭಾಗದಲ್ಲಿ ಪ್ರಥಮ ಸ್ಥಾನ.
ಕೆ. ಹೊಸಹಳ್ಳಿ ಡಿ.25

ಮಂಗಳವಾರ ದಂದು ವಿಜ್ಞಾನ ಈ ಟೆಕ್ನೋ ಸ್ಕೂಲ್ ಸಿದ್ಧಿಪ್ರಿಯ ಕಲ್ಯಾಣ ಮಂಟಪ (ವಿಜಯನಗರ) ಹೊಸಪೇಟೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಹೊಸಹಳ್ಳಿಯ ವೈಭವ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿಯರಾದ ಎಂ.ಎಸ್ ಸಿಂಚನ ಹಾಗೂ ಎಮ್.ಎಸ್ ಶ್ರೀ ಗೌರಿ ರಸ ಪ್ರಶ್ನೆ ವಿಭಾಗದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಯಾಗಿದ್ದಾರೆ ಹಾಗೆ ಕಾಳಿದಾಸ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ಎಂ.ಚಿನ್ಮಯ್ ಕ್ಲೇಮಾಂಡಿಗ್ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾನೆ ಹಾಗೆ ಸೃಜನ ಕೆ.ಎಚ್ ಎಂಬ ವಿದ್ಯಾರ್ಥಿನಿ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.

ಈ ಎಲ್ಲಾ ವಿದ್ಯಾರ್ಥಿಗಳ ಸಾಧನೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಎಲ್ಲಾ ಅಧಿಕಾರಿಗಳು ಸಂಸ್ಥೆಯ ಘನ ಸಂಸ್ಥಾಪಕ ಅಧ್ಯಕ್ಷರಾದ ಶ್ರೀಯುತ ಪಿ.ಬಿ ಗಜೇಂದ್ರಗಡ್, ಕಾರ್ಯದರ್ಶಿಗಳಾದ ಶ್ರೀಯುತ ಮುರುಳಿಧರ್ ಗಜೇಂದ್ರಗಡ ಉಪಾಧ್ಯಕ್ಷರಾದ ಶ್ರೀಮತಿ ಸವಿತಾ ಮುರುಳಿಧರ್ ಹಾಗೂ ಮುಖ್ಯ ಗುರುಗಳಾದ ಶ್ರೀ ಪ್ರಕಾಶಗೌಡ ಹೆಚ್.ಜಿ ಶ್ರೀ ಮಲ್ಲೇಶಿ.ಎಚ್ ಶ್ರೀ ಜಿ.ವಿ ರಮೇಶ್ ಗೌಡ ಹಾಗೂ ಸಿಬ್ಬಂದಿ ವರ್ಗದವರು ಎಲ್ಲಾ ವಾಹನಗಳ ಚಾಲಕರು ನಿರ್ವಾಹಕರು ಪೋಷಕರು ಮಕ್ಕಳಿಗೆ ಅಭಿನಂದಿಸಿದ್ದಾರೆ.
ಹೋಬಳಿ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಕೆ.ಎಸ್.ವೀರೇಶ್.ಕೆ.ಹೊಸಹಳ್ಳಿ