ಪತ್ರಕರ್ತ ವೆಂಕಟೇಶ ಸಂಪ ಅವರಿಗೆ – “ರಾಷ್ಟ್ರೀಯ ಬಸವ ಶ್ರೀ ಪ್ರಶಸ್ತಿ” ಪ್ರಧಾನ.
ಬೆಂಗಳೂರು ಡಿ.26

ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್ (ರಿ) ಬೆಂಗಳೂರು, ಇವರು ಕೊಡುವ ರಾಷ್ಟ್ರ ಮಟ್ಟದ ಬಸವ ಶ್ರೀ ಪ್ರಶಸ್ತಿಯನ್ನು ಪತ್ರಕರ್ತ, ಸಂಪದ ಸಾಲು ಪತ್ರಿಕೆ ಸಂಪಾದಕರಾದ, ವೆಂಕಟೇಶ ಸಂಪರವರಿಗೆ 2024 ರ ಡಿಸೆಂಬರ್ 25 ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಪ್ರಧಾನ ಮಾಡಲಾಯಿತು. ಕಳೆದ 18 ವರ್ಷಗಳಿಂದ ನಿರಂತರವಾಗಿ ಸಂಪದ ಸಾಲು ಎನ್ನುವ ಧನಾತ್ಮಕ ಪತ್ರಿಕೆಯನ್ನು ನಡೆಸುತ್ತಿರುವ ವೆಂಕಟೇಶ ಸಂಪರವರ ಸಾವಿರಾರು ಲೇಖನಗಳು ರಾಜ್ಯದ ಎಲ್ಲಾ ಪತ್ರಿಕೆಗಳಲ್ಲಿ ಪ್ರಕಟವಾಗಿವೆ ಹಾಗೂ ರೇಡಿಯೋ ಟಿವಿಗಳಲ್ಲಿ ನೂರಾರು ಕಾರ್ಯಕ್ರಮಗಳನ್ನು ನಡೆಸಿ ಕೊಟ್ಟಿದ್ದಾರೆ. ಇವರು ಹಲವಾರು ಟೀವಿ ಚಾನಲ್ ಗಳ ಪ್ಯಾನಲ್ ಡಿಸ್ಕಷನ್ ಗಳಲ್ಲಿ ಭಾಗವಹಿಸುವುದರ ಜೊತೆಗೆ ಹಲವಾರು ಸಿನಿಮಾ ಧಾರವಾಹಿಗಳಲ್ಲಿ ನಟಿಸಿದ್ದಾರೆ. ರಕ್ತದಾನ, ನೇತ್ರದಾನ, ಪರಿಸರ ಜಾಗೃತಿ ಅಭಿಯಾನ, ನೀರು ಉಳಿಸಿ ಅಭಿಯಾನ ಸೇರಿದಂತೆ ಹಲವಾರು ಸಾಮಾಜಿಕ ಕಾರ್ಯದಲ್ಲಿ ತೊಡಗಿದ್ದಾರೆ. MBA ಪದವೀಧರ ಆಗಿರುವ ವೆಂಕಟೇಶ ಸಂಪ ಅವರು, ಹಲವು ಮಿಶ್ರ ಬೆಳೆಗಳನ್ನು ಬೆಳೆದು, ಸಾವಯವ ಕೃಷಿಯಲ್ಲೂ ಸಾಧನೆ ಮಾಡಿದ್ದಾರೆ. “ಸಂಪದ ಫೌಂಡೇಶನ್ ಫಾರ್ ಪಬ್ಲಿಕ್ ಅವೇರ್ನಸ್” ಸಂಸ್ಥೆ ಮೂಲಕ ಹಲವಾರು ಸಾಮಾಜಿಕ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ನಿರಂತರವಾಗಿ ನಡೆಸುತ್ತಿದ್ದಾರೆ. ಇದೆಲ್ಲವನ್ನು ಪರಿಗಣಿಸಿ “ರಾಷ್ಟ್ರೀಯ ಬಸವ ಶ್ರೀ” ಪ್ರಶಸ್ತಿಯನ್ನು ನೀಡಲಾಗಿದೆ ಎಂದು ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್ ನ ಮುಖ್ಯಸ್ಥರಾದ ಶ್ರೀ ಡಾ, ಜಿ ಶಿವಣ್ಣ ಈ ಸಂದರ್ಭದಲ್ಲಿ ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಆರೂಢ ಭಾರತೀ ಮಹಾ ಸ್ವಾಮಿಗಳು, ಖ್ಯಾತ ಚಲನ ಚಿತ್ರ ನಟಿ ಮಾಲತಿ ಶ್ರೀ ಮೈಸೂರು, ಸ್ವಾತಿ ಬಸಪ್ಪ, ರೇವಣ್ಣ, ಸಾಹಿತಿ ರಾಮಲಿಂಗೇಶ್ವರ ಸಿಸಿರಾ, ಚಂದ್ರಶೇಖರ ಮಾಡಲಗೇರಿ, ಹೇಮಾವತಿ ಶಿವಣ್ಣ, ಸುಪ್ರಿಯಾ ನಿಪ್ಪಾಣಿ, ಸುರೇಶ್ ಕೊರೆಕೊಪ್ಪ, ಮಧು ಅಕ್ಷರಿ, ಭಾಗ್ಯ ಸರ್ವನ್, ಅಶ್ವಿನಿ ನಕ್ಷತ್ರ, ಇತರರು ಹಾಜರಿದ್ದರು.
ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಎಂ.ಎಂ ಶರ್ಮಾ ಬೆಳಗಾವಿ