ಸರ್ಕಾರಿ ನೌಕರರ ಸಂಘದ ಚುನಾವಣೆ ವಿಷಯಕ್ಕೆ ಆಧಾರ ರಹಿತ ಆರೋಪ ಮಾಡಿರುವ – ದೈಹಿಕ ಶಿಕ್ಷಕ ಮಂಜುನಾಥ್ ವಿರುದ್ಧ ಶಿಸ್ತು ಕ್ರಮಕ್ಕೆ ಒತ್ತಾಯ.
ಹೊಸಪೇಟೆ ಡಿ.30

ಸರ್ಕಾರಿ ನೌಕರರ ಸಂಘದ ಚುನಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರದ ಮೇಲೆ ಆಧಾರ ರಹಿತ ಆರೋಪ ಮಾಡಿರುವ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಗಂಗಾವತಿ ಭೀಮಪ್ಪ ನವರ ಪದವಿ ಪೂರ್ವ ಕಾಲೇಜ್ ಪ್ರೌಢಾ ಶಾಲಾ ವಿಭಾಗದ ದೈಹಿಕ ಶಿಕ್ಷಕರಾದ ಎಂ.ಪಿ.ಎಂ ಮಂಜುನಾಥ ರವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳ ಬೇಕೆಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ವಿಜಯನಗರ ಜಿಲ್ಲಾ ಘಟಕವು ಒತ್ತಾಯಿಸಿದೆ. ವಿಜಯನಗರ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಿಗೆ (ಡಿಡಿಪಿಐ) ಸವಿವರವಾದ ಮನವಿ ಪತ್ರ ಸಲ್ಲಿಸಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ವಿಜಯನಗರ ಜಿಲ್ಲಾ ಘಟಕದ ಅಧ್ಯಕ್ಷ ಸೋಮಶೇಖರ್ ಬಣ್ಣದ ಮನೆ, ಮತ್ತು ಮುಖಂಡರಾದ ರವಿಕುಮಾರ್, ಸೂರ್ಯನಾರಾಯಣ, ಶಿವಕುಮಾರ್, ಮಹಾಂತೇಶ್ ಮತ್ತಿತರರು ಹಗರಿಬೊಮ್ಮನಹಳ್ಳಿ ಗಂಗಾವತಿ ಭೀಮಪ್ಪ ನವರ ಪದವಿ ಪೂರ್ವ ಕಾಲೇಜ್ ಪ್ರೌಢ ಶಾಲಾ ವಿಭಾಗದ ದೈಹಿಕ ಶಿಕ್ಷಕರು ಹಾಗೂ ಹಗರಿಬೊಮ್ಮನಹಳ್ಳಿ ತಾಲ್ಲೂಕು ಸರ್ಕಾರಿ ನೌಕರ ಎಂ.ಪಿ.ಎಂ ಮಂಜುನಾಥ್ ಸಂಘದ ಅಧ್ಯಕ್ಷರಾದ ಎಂಬುವವರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣಾ ವಿಷಯದ ಬಗ್ಗೆ ಮಾಧ್ಯಮಗಳ ಮುಂದೆ ಮಾತನಾಡುತ್ತಾ, ಸರ್ಕಾರದ ಹಣದ ಆಮಿಷ ಮತ್ತು ಒತ್ತಡಗಳ ಮಧ್ಯೆ ಷಡಕ್ಷರಿ ಅವರು ಗೆದ್ದಿದ್ದಾರೆ ಎಂದು ಆಧಾರ ರಹಿತವಾಗಿ ಕರ್ನಾಟಕ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ. ಈ ವಿಷಯದಲ್ಲಿ ಯಾರು ಯಾರಿಗೆ ಹಣದ ಆಮಿಷವನ್ನು ಸರ್ಕಾರ ಒಡ್ಡಿದೆ ಎಂಬುದನ್ನು ದೈಹಿಕ ಶಿಕ್ಷರಾದ ಎಂ.ಪಿ.ಎಂ. ಮಂಜುನಾಥ್ ರವರು ಸಾಬೀತು ಪಡಿಸಬೇಕು ಎಂದು ಒತ್ತಾಯಿಸಿರುವ ಅವರುಗಳು ದೈಹಿಕ ಶಿಕ್ಷರಾದ ಎಂ.ಪಿ.ಎಂ. ಮಂಜುನಾಥ್ ರವರು ಒಬ್ಬ ಸರ್ಕಾರಿ ನೌಕರರಾಗಿ ರಾಜಕಾರಣಿಯಂತೆ ವರ್ತಿಸುವುದು ಸರಿಯಲ್ಲ. ಸರ್ಕಾರಿ ಸೇವಾ ನಿಯಮಗಳು ಹಾಗೂ ಕರ್ನಾಟಕ ನಾಗರೀಕ ಸೇವಾ ನಿಯಮಗಳಿಗೆ ತದ್ವಿರುದ್ಧವಾಗಿ ಎಂ.ಪಿ. ಎಂ ಮಂಜುನಾಥ್ ರವರು ವರ್ತಿಸಿ ಸೇವಾ ನಿಯಮಗಳನ್ನು ಉಲ್ಲಂಘಿಸಿರುತ್ತಾರೆ. ಆದ್ದರಿಂದ ಇವರ ವಿರುದ್ಧ ರಾಜ್ಯ ಸರ್ಕಾರ ಕೂಡಲೇ ಶಿಸ್ತು ಕ್ರಮ ಕೈಗೊಳ್ಳ ಬೇಕೆಂದು ಸೋಮಶೇಖರ್ ಬಣ್ಣದ ಮನೆ ಮತ್ತಿತರರು ಆಗ್ರಹಿಸಿದ್ದಾರೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಮಾಲತೇಶ್.ಶೆಟ್ಟರ್.ಹೊಸಪೇಟೆ