“ವಿಜಯಪತಾಕೆ” ಟೀಸರ್ – ಬಿಡುಗಡೆ.
ಗಜೇಂದ್ರಗಡ ಜ.01

ಶ್ರೀ ಷಣ್ಮುಖಪ್ಪ. ಆರ್.ಎಲ್ ಅವರ ಶ್ರೀ ಬೊಮ್ಮಸಾಗರ ದುರ್ಗಾದೇವಿ ಪ್ರೊಡಕ್ಷನ್ ಚಿತ್ರ ನಿರ್ಮಾಣ ಸಂಸ್ಥೆಯ ಅಡಿಯಲ್ಲಿ ನಿರ್ಮಾಣವಾಗಿರುವ “ವಿಜಯಪತಾಕೆ” ಚಲನ ಚಿತ್ರದ ಪ್ರಥಮ ಟೀಸರ್ ಬಿಡುಗಡೆ ಕುರಿತು ಪತ್ರಿಕಾ ಗೋಷ್ಠಿ ಗಜೇಂದ್ರಗಡದ ಪ್ರವಾಸಿ ಮಂದಿರದಲ್ಲಿ ಜರುಗಿತು. ಗಜೇಂದ್ರಗಡದವನೇ ಆದ ನಾನು ಈ ಚಿತ್ರದಲ್ಲಿ ನಾಯಕನಾಗಿ ನಟಿಸಿ, ನಿರ್ದೇಶನ ಮಾಡಿದ್ದೇನೆ, ‘ವಿಜಯಪಾತಕೆ’ ಚಿತ್ರವನ್ನು ಉತ್ತರ ಕರ್ನಾಟಕದವರೇ ನಿರ್ಮಿಸಿದ್ದು, ಉತ್ತರ ಕರ್ನಾಟಕದ ಕಲಾವಿದರೇ ಹೆಚ್ಚು ಅಭಿನಯಿಸಿದ್ದು, ಧಾರವಾಡ ಜಿಲ್ಲೆಯ ನಿಗದಿ, ಬೆಣಕನಕಟ್ಟೆ, ಮುರಕಟ್ಟಿ ಮತ್ತು ಹಳಿಯಾಳ, ದಾಂಡೇಲಿ, ಗದಗ ಜಿಲ್ಲೆಯ ಗಜೇಂದ್ರಗಡ, ಭೈರಾಪೂರ ಸುತ್ತಮುತ್ತ, ಕೊಪ್ಪಳ ಜಿಲ್ಲೆಯ ಹನುಮಸಾಗರ, ಚಂದಾಲಿಂಗೇಶ್ವರ ದೇವಸ್ಥಾನ, ಮತ್ತು ಇಲಕಲ್ ತಾಲೂಕಿನ ಸುಕ್ಷೇತ್ರ ಸಿದ್ಧನಕೊಳ್ಳ, ಕರಾವಳಿ ಭಾಗಗಳಲ್ಲಿ ಚಿತ್ರೀಕರಣ ನಡೆಸಲಾಗಿದ್ದು ಚಿತ್ರ ಅತ್ಯುತ್ತಮವಾಗಿ ಮೂಡಿ ಬಂದಿದೆ. ಇದೀಗ ಉತ್ತರ ಕರ್ನಾಟಕದ ಹೆಸರಾಂತ ಜಾನಪದ ಕಲಾವಿದರಾದ ಮಾಳು ನಿಪನಾಳ ಅವರ ಸಾಮಾಜಿಕ ಜಾಲ ತಾಣವಾದ ಯೂಟ್ಯೂಬ್ ಜಾಲ ತಾಣದಲ್ಲಿ ಪ್ರಥಮ ಟೀಸರ್ ಬಿಡುಗಡೆ ಮಾಡಲಾಗುತ್ತಿದೆ. ಎಂದು ಯುವ ನಿರ್ದೇಶಕ ಆರ್. ಶೈನ್ ಹೇಳಿದರು. ಚಿತ್ರದಲ್ಲಿ ನಾಯಕಿಯಾಗಿ ವಾಣಿ ಬಿಜಾಪೂರ, ಮುಖ್ಯ ಖಳನಾಯಕರಾಗಿ ಶೋಭರಾಜ್ ಅಭಿನಯಿಸಿದ್ದಾರೆ. ಇನ್ನುಳಿದಂತೆ ಕಲಾವಿದರಾಗಿ ಹರೀಶ್ ಪತ್ತಾರ, ಆನಂದ. ಕೆ, ಸಂಗನಗೌಡ ಕುರುಡಗಿ, ರಾಜಕುಮಾರ ಪಾಟೀಲ್, ಪಾಲಾಕ್ಷ, ಹುಸೇನ್ ಪತ್ತೇಖಾನ್, ನೇತ್ರಾ, ಅನ್ನಪೂರ್ಣ, ಪ್ರಕೃತಿ, ರಮಜಾನಸಾಬ್ ಉಳ್ಳಾಗಡ್ಡಿ, ಮುಂತಾದವರು ಅಭಿನಯಿಸಿದ್ದಾರೆ. ಕಥೆ, ಚಿತ್ರಕಥೆ, ಸಂಭಾಷಣೆ, ಹಾಗೂ ನಿರ್ದೇಶನ ಆರ್. ಶೈನ್, ಸಂಗೀತ ರಾಘವ್ ಸುಭಾಸ್, ಸಾಹಿತ್ಯ ಸುಭಾಸ್ ಬೆಟಗೇರಿ, ಹಿನ್ನೆಲೆ ಗಾಯನ ಅಭೀಷೇಕ ಎಮ್ ಆರ್ (ಕಾಟೇರಾ ಚಿತ್ರ ಖ್ಯಾತಿಯ ಗಾಯಕ) ಮೇಘನಾ ಹಳಿಯಾಳ (ಗರಡಿ ಚಿತ್ರದ ಖ್ಯಾತಿಯ ಗಾಯಕಿ), ಹಾಗೂ ಸಾತ್ವಿಕ. ಛಾಯಾಗ್ರಹಣ ಗಿರೀಶ್ ಶಿರಗೇನಹಳ್ಳಿ, ಭರತ್, ಶ್ಯಾಮ್, ಸಂಕಲನ ರವಿ ರಾಠೋಡ, ಸಾಹಸ ಸಂತೋಷ ರಾಠೋಡ, ನೃತ್ಯ ಕಂಬಿ ರಾಜು, ವರ್ಣಾಲಂಕಾರ ಶ್ರೀಕಾಂತ್ ಕುಲಕರ್ಣಿ, ವಸ್ತ್ರಾಲಂಕಾರ ಸಾವಿತ್ರಿ ರಂಗ್ರೇಜಿ, ಪತ್ರಿಕಾ ಸಂಪರ್ಕ ಡಾ, ಪ್ರಭು ಗಂಜಿಹಾಳ, ಡಾ, ವೀರೇಶ ಹಂಡಿಗಿ, ಕ್ರಿಯೇಟಿವ್ ಹೆಡ್ ಸಿ.ಜಿ ವೆಂಕಟೇಶರಾವ್ ಅವರಿದ್ದಾರೆ. ಪತ್ರಿಕಾ ಗೋಷ್ಠಿಯಲ್ಲಿ ಟೀಸರ್ ನ ಪೋಸ್ಟರ್ ಕೂಡ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ನಾಯಕಿನಟಿ ವಾಣಿ ವಿಜಯಪುರ, ಪಿಆರ್.ಓ ಡಾ, ಪ್ರಭು ಗಂಜಿಹಾಳ, ಸಂಗನಗೌಡ ಕುರುಡಗಿ, ಹರೀಶ ಪತ್ತಾರ, ಜಯದೇವ ಗಂಜಿಹಾಳ ಸೇರಿದಂತೆ ಚಿತ್ರ ತಂಡದ ಕಲಾವಿದರು ಪಾಲ್ಗೊಂಡಿದ್ದರು.
*****
ವರದಿ:-
ಡಾ, ಪ್ರಭು ಗಂಜಿಹಾಳ
ಮೊ: ೯೪೪೮೭೭೫೩೪೬