ಭೀಮಾ ಕೋರೆಗಾಂವ್ ವಿಜಯೋತ್ಸವ ದಿನ – ಸ್ವಾಭಿಮಾನದ ದಿನ.

ಬಳ್ಳಾರಿ ಜ.01

ಛಲವಾದಿ ಮಹಾಸಭಾ ಜಿಲ್ಲಾ ಸಮಿತಿ ಬಳ್ಳಾರಿ ನಗರದ ಬಿ ಗೋನಾಳ್ 17 ನೇ. ವಾರ್ಡ್ ಭೀಮಾ ಕೋರೆಗಾಂವ್ ವಿಜಯೋತ್ಸವದ ಕಾರ್ಯಕ್ರಮವನ್ನು ದಿನಾಂಕ 01.01.2025 ರಂದು ಭೀಮಾ ಕೋರೆಗಾಂವ್ ಸ್ಥಂಭದ ಭಾವ ಚಿತ್ರಕ್ಕೆ ಕಾರ್ಯಕ್ರಮದಲ್ಲಿ ಸೇರಿದಂತೆ ಎಲ್ಲರೂ, ಹೂಮಾಲೆ ಅರ್ಪಿಸಿದ ನಂತರ ಈ ಕಾರ್ಯಕ್ರಮವನ್ನು ಉದ್ದೇಶಿಸಿ ಸಿ.ಶಿವಕುಮಾರ್ ಜಿಲ್ಲಾ ಅಧ್ಯಕ್ಷರು ಛಲವಾದಿ ಮಹಾಸಭಾ ಜನವರಿ 1, ಜಗತ್ತಿಗೆ ಹೊಸ ವರ್ಷದ ಸಂಭ್ರಮಾಚಾರಣೆಯಾದರೆ ಶೋಷಿತರ ಪಾಲಿಗೆ ಇದು ಅಸ್ಪೃಶ್ಯತೆಯ ವಿರುದ್ಧ ಬಂಡೆದ್ದು ವಿಜಯ ಸಾಧಿಸಿದ ಮಹಾರ್ ಯೋಧರ ಶೌರ್ಯದ ದಿನ ಡಾ, ಬಾಬಾ ಸಾಹೇಬ್ ಅಂಬೇಡ್ಕರ್ ರವರ ಬದುಕಿನಲ್ಲಿ ಮುಖ್ಯ ಪ್ರೇರಣೆ ನೀಡಿದ ಈ ದಿನವು ನಮ್ಮೆಲ್ಲರ ಪಾಲಿಗೆ ವಿಜಯೋತ್ಸವದ ದಿನವಾಗಿದೆ. ಕ್ರಿಶ. 1800 ರ ಸಂದರ್ಭದಲ್ಲಿ ಮಹಾರಾಷ್ಟ್ರದಲ್ಲಿ ಆಡಳಿತ ನಡೆಸುತ್ತಿದ್ದ ಪೇಶ್ವಗಳು ಮನು ಸಂವಿಧಾನವನ್ನು ಜಾರಿಗೆ ತರುವ ಮೂಲಕ ಅಸ್ಪೃಶ್ಯತೆ ಜೀವನವನ್ನು ಕಠೋರ ವಾಗಿಸಿದ್ದರು. ಸಾರ್ವಜನಿಕ ಸ್ಥಳಗಳಲ್ಲಿ ಅಸ್ಪೃಶ್ಯರಿಗೆ ಪ್ರವೇಶ ನಿಷೇಧಿಸಲಾಗಿತ್ತು. ಊರೊಳಗೆ ಸತ್ತ ದನಗಳನ್ನು ಹೊತ್ತುಕೊಂಡು ಹೋಗಿ ಮಾಂಸವನ್ನು ತಿನ್ನಬೇಕಾಗಿತ್ತು, ಅವರಿಗೆ ವಿದ್ಯೆ ಕಲಿಯುವ ಹಕ್ಕನ್ನು ಸಂಪೂರ್ಣವಾಗಿ ನಿಷೇಧಿಸಲಾಗಿತ್ತು. ಚಿನ್ನ ಅಥವಾ ಬೆಳ್ಳಿಯ ಆಭರಣ ತೊಡುವಂತಿರಲಿಲ್ಲ. ಅಸ್ಪಷ್ಟ ಹೆಣ್ಣು ಮಕ್ಕಳ ಮೇಲೆ ನಿರಂತರ ಅತ್ಯಾಚಾರಗಳನ್ನು ನಡೆಸಲಾಗುತ್ತಿತ್ತು. ಸಾರ್ವಜನಿಕ ಕೆರೆಗಳನ್ನು ಬಳಸದಂತೆ ನಿರ್ಬಂಧ ಹೇರಲಾಗಿತ್ತು.ತಮ್ಮ ಮೇಲೆ ಈ ರೀತಿಯ ಅಮಾನುಷ ಕೃತ್ಯಗಳನ್ನು ನಡೆಸುತ್ತಿದ್ದ ಪೇಶ್ವಗಳ ದೌರ್ಜನ್ಯ ದಬ್ಬಾಳಿಕೆಯಿಂದ ರೋಸಿ ಹೋಗಿದ್ದ ಅಸ್ಪೃಶ್ಯತೆ ತಮ್ಮ ಜನಾಂಗದ ಮುಕ್ತಿಗಾಗಿ ಹಾತೊರೆಯುತ್ತಿದ್ದರು ಎಂದು ಹೇಳಿದರು. ಅದೇ ರೀತಿಯಾಗಿ ಕೆ.ಶಂಕರ್ ನಂದಿಹಾಳ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕರ್ನಾಟಕ ದಲಿತ ರಕ್ಷಣಾ ವೇದಿಕೆ ಇದೇ ಸಂದರ್ಭದಲ್ಲಿ ಉತ್ತರ ಭಾರತದಲ್ಲಿ ಅಧಿಪತ್ಯ ಸ್ಥಾಪಿಸಿದ್ದ ಬ್ರಿಟಿಷರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ಮಹಾರ್ ವೀರ ಸಿದ್ಧನಾಕನ ನೇತೃತ್ವದಲ್ಲಿ ಮಾತುಕತೆ ನಡೆಸಿ ತಮ್ಮನ್ನು ಬೆಂಬಲಿಸಿದರೆ ಅಸ್ಪೃಶ್ಯತೆ ಎಲ್ಲಾ ದೌರ್ಜನ್ಯ ದಬ್ಬಾಳಿಕೆಗೆ ಅಂತ್ಯ ಹಾಡುತ್ತೇವೆ ಹಾಗೂ ಮಕ್ಕಳಿಗೆ ವಿದ್ಯಾಭ್ಯಾಸ ಕಲ್ಪಿಸುವ ಭರವಸೆ ನೀಡಿದರು. ಅಸ್ಪೃಶ್ಯತೆ ಆಚರಣೆಯಿಂದ ನೊಂದು ಬೆಂದಿದ್ದ ವೀರ ಮಹಾರ್ ಜನಾಂಜದ 500 ಜನ ಯುವ ಯೋಧರು ಯುದ್ಧ ತರಬೇತಿಯೊಂದಿಗೆ 1818 ರ ಜನವರಿ 1 ರಂದು ಬ್ರಿಟೀಷ್ ಕ್ಯಾಪ್ಟನ್ ಎಸ್.ಎಸ್ ಸಂಡನ್ ನೇತೃತ್ವದಲ್ಲಿ ಭೀಮಾ ನದಿಯ ತೀರದಲ್ಲಿ ಕೋರೆಗಾವ್ ಎಂಬ ಸ್ಥಳದಲ್ಲಿ ಸುಮಾರು 28,000 ಸೈನಿಕರಿದ್ದ ಬ್ರಾಹ್ಮಣ ಪೇಶ್ವಗಳ ಮೇಲೆ ಯುದ್ಧ ಸಾರಿ ಸುಮಾರು 13/14 ಸಾವಿರಕ್ಕೂ ಹೆಚ್ಚಿನ ಪೇಶ್ವಗಳ ಸೈನಿಕರನ್ನು ಕೊಂದು ಹಾಕಿ ಆಡಳಿತವನ್ನು ವಶ ಪಡಿಸಿಕೊಳ್ಳುವ ಮೂಲಕ ತನ್ನ ಮೇಲಿನ ಅಸ್ಪೃಶ್ಯತಾ ಆಚರಣೆಗೆ ಅಂತ್ಯ ಹಾಡಿದರು. ಈ ಸಂದರ್ಭದಲ್ಲಿ ಸುಮಾರು 22/ 25 ಜನ ವೀರ ಮಹಾರ್ ಯೋಧರು ಬಲಿದಾನ ವಾಗುವ ಮೂಲಕ ನಮ್ಮ ಸಮುದಾಯವೇ ತಲೆ ಎತ್ತಿ ನಿಲ್ಲುವಂತೆ ಮಾಡಿದ್ದಾರೆ. ವೀರ ಯೋಧರ ಗೌರವಾರ್ಥ ಯುದ್ಧ ನಡೆದ ಜಾಗದಲ್ಲಿ 65 ಅಡಿಯ ಎತ್ತರದ ಭವ್ಯ “ವಿಜಯ ಸ್ಥಂಭ” ನಿರ್ಮಿಸಿ ಆ ಸ್ಥಂಭದ ಮೇಲೆ ಅಮರ ವೀರರ ಹೆಸರನ್ನು ಕೆತ್ತಿಸಿದ್ದಾರೆ. ಅಸ್ಪೃಶ್ಯರ ಸ್ವಾಭಿಮಾನದ ಸಂಕೇತವಾದ ಈ ಘಟನೆಯು ನಮ್ಮೆಲ್ಲರಿಗೂ ಆತ್ಮ ಗೌರವನ್ನು ಎತ್ತಿ ಹಿಡಿಯುವ ದಿನವಾಗಿದೆ.ಇಂತಹ ಸ್ವಾಭಿಮಾನದ, ಆತ್ಮಗೌರವದ ದಿನವನ್ನು ಶೋಷಿತ ಸಮುದಾಯ ದವರು ನೆನಪಿಸಿಕೊಂಡು ಅಮರ ವೀರರ ಕೆಚ್ಚೆದೆಯ ಸ್ವಾಭಿಮಾನವನ್ನು ಮೈಗೂಡಿಸಿ ಕೊಳ್ಳ ಬೇಕಾಗಿದೆ. ಅವರ ತ್ಯಾಗ ಬಲಿದಾನದಿಂದ ಮನು ಸಂವಿಧಾನಕ್ಕೆ ಪೆಟ್ಟು ಬಿದ್ದು ಅಸ್ಪೃಶ್ಯರಿಗೆ ವಿದ್ಯಾಭ್ಯಾಸ ನೀಡಲು, ಸೈನ್ಯಕ್ಕೆ ಸೇರಲು, ಸಾಮಾಜಿಕವಾಗಿ ಅಲ್ಪ ಪ್ರಮಾಣದಲ್ಲಿ ನಾಗರೀಕ ಬದುಕು ಕಾಣಲು ಸಾಧ್ಯವಾಗಿದೆ. ಅಂದು ಅಸ್ಪೃಶ್ಯತೆ ಬ್ರಿಟೀಷರ ಪರವಾಗಿ ಯುದ್ಧ ಮಾಡಿದ್ದು ಅಭಿಮಾನ ಪಡುವ ಸಂಗತಿಯಲ್ಲದಿದ್ದರೂ ಜನಾಂಗಕ್ಕೆ ತಮ್ಮ ಮಕ್ಕಳು ಮುಂದಿನ ಭವಿಷ್ಯ, ಹೊಟ್ಟೆಗೆ ಅನ್ನ ದೊರಕಿಸಿ ಕೊಳ್ಳುವ ಸ್ವಾಭಿಮಾನದಿಂದ ಬದುಕುವ ಉದ್ದೇಶಕ್ಕೆ ತಮ್ಮ ಅಮೂಲ್ಯ ಜೀವವನ್ನು ಅರ್ಪಣೆ ಮಾಡಿದ ನಮ್ಮ ಹುತಾತ್ಮ ಬೇರ ಯೋಧರಿಗೆ ನಾವೆಲ್ಲ ಗೌರವಿಸ ಬೇಕಾಗಿದೆ ಎಂದು ಹೇಳಿದರು. ಹಾಗೂ ಹೊಸ ವರ್ಷದ ಕ್ಯಾಲೆಂಡರ್ ಅನ್ನು ಬಿಡುಗಡೆ ಮಾಡಿ ಸಾರ್ವಜನಿಕರಿಗೆ ವಿತರಿಸಲಾಯಿತು. ದಲಿತ ಮುಖಂಡ ಒನ್ನೇಶ್.ಬಿ ಗೋನಾಳ್ ಆಹಿಂದ ಜಿಲ್ಲಾಧ್ಯಕ್ಷರಾದ ತಿಮ್ಮಪ್ಪ ಬಿ.ಗೋನಾಳ ಮಾನಯ್ಯ ಜಿಲ್ಲಾ ಉಪಾಧ್ಯಕ್ಷರು ಛಲವಾದಿ ಮಹಾಸಭಾ ಸಿ.ಹನುಮೇಶ್ ಕಟ್ಟಿಮನಿ ಜಿಲ್ಲಾ ಕಾರ್ಯಧ್ಯಕ್ಷರು ಕರ್ನಾಟಕ ದಲಿತ ರಕ್ಷಣಾ ವೇದಿಕೆ ಲೋಕೇಶ್ ಕಪಗಲ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಛಲವಾದಿ ಮಹಾಸಭಾ ವೆಂಕಟೇಶ್ ಜಿಲ್ಲಾ ಜಂಟಿ ಕಾರ್ಯದರ್ಶಿ ಛಲವಾದಿ ಮಹಾಸಭಾ ಡಿ ರಾಮಕೃಷ್ಣ ಜಿಲ್ಲಾ ಕಾರ್ಯದರ್ಶಿ ಛಲವಾದಿ ಮಹಾಸಭಾ ಮಲ್ಲಿಕಾರ್ಜುನ ಬಿ ಗೋನಾಳ ದಲಿತ ಮುಖಂಡರು ಯಲ್ಲಪ್ಪ ಕುಡಿತಿನಿ ದಲಿತ ಮುಖಂಡರು ಮಧುರಾಜ್ ಬಿ ಗೋನಾಳ್ ದಲಿತ ಯುವ ಮುಖಂಡರು ಈ ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯ ಮುಖಂಡರು ಹಾಗೂ ಯುವ ಮುಖಂಡರು ಸಾರ್ವಜನಿಕರು ಭಾಗವಹಿಸಿದ್ದರು.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button