ತರೀಕೆರೆ ಪಟ್ಟಣದ ಸಮಗ್ರ ಅಭಿವೃದ್ಧಿಗೆ ನನ್ನ ಸಹಕಾರ ಇದೆ-ಜಿ.ಎಚ್ ಶ್ರೀನಿವಾಸ್.

ತರೀಕೆರೆ ಸಪ್ಟೆಂಬರ್.11

ಎಲ್ಲಾ ಸದಸ್ಯರ ಒಮ್ಮತದಿಂದ ಪರಮೇಶ್ ರವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ ಎಂದು ಶಾಸಕರಾದ ಜಿ ಎಚ್ ಶ್ರೀನಿವಾಸ್ ಅವರು ಇಂದು ತರೀಕೆರೆಯ ಪುರಸಭೆ ಆವರಣದಲ್ಲಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಪರಮೇಶ್ ರವರ ಅಭಿನಂದನಾ ಸಮಾರಂಭದಲ್ಲಿ ಹೇಳಿದರು. ತರೀಕೆರೆ ಪಟ್ಟಣಕ್ಕೆ ಅನುದಾನ ಹಾಕಿ ಪಟ್ಟಣದ ಸಮಗ್ರ ಅಭಿವೃದ್ಧಿಗೆ ನನ್ನ ಸಹಕಾರ ಇದೆ. ನೂತನ ಅಧ್ಯಕ್ಷರಾದ ನಿಮ್ಮ ಅಧಿಕಾರ ಅವಧಿಯಲ್ಲಿ ಪಟ್ಟಣದ ಎಲ್ಲಾ ವಾರ್ಡ್ ಗಳಿಗೂ ಸಹ ಸಮಾನವಾಗಿ ಅಭಿವೃದ್ಧಿ ಪಡಿಸಲು ಶ್ರಮಿಸಬೇಕು, ನಿವೇಶನ ರಹಿತರಿಗೆ ನಿವೇಶನ ಕೊಡಬೇಕಾಗಿದೆ ಅದಕ್ಕೆ ಮೂಲ ಪ್ರಯತ್ನ ಮಾಡಿದ್ದೇನೆ ಎಂದು ಹೇಳಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಚ್ ಯು ಫಾರೂಕ್ ಮಾತನಾಡಿ ತರೀಕೆರೆ ಪಟ್ಟಣಕ್ಕೆ ಕ್ರೀಡಾಂಗಣದ ಅವಶ್ಯಕತೆ ಇದೆ ಮತ್ತು ವಾಕಿಂಗ್ ಟ್ರ್ಯಾಕ್ ಮಾಡಿಸಿ ವಾಯು ವಿಹಾರಕ್ಕೆ ಅನುಕೂಲವಾಗುವಂತೆ ಶಾಸಕರು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕೆಂದು ತಿಳಿಸಿದರು. ಮಾಜಿ ಪುರಸಭಾ ಅಧ್ಯಕ್ಷರಾದ ಟಿ ಆರ್ ಬಸವರಾಜ್ ಮಾತನಾಡಿ ಅಧಿಕಾರ ಮುಖ್ಯವಲ್ಲ ಅಭಿವೃದ್ಧಿ ಕೆಲಸ ಮಾಡುವುದು ಮುಖ್ಯ ರಸ್ತೆ ಅಗಲೀಕರಣ ಮಾಡಿ ಅಭಿವೃದ್ಧಿ ಕೆಲಸ ಮಾಡಿ ಎಂದು ಹೇಳಿದರು. ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ದಾದಾಪೀರ್ ಮಾತನಾಡಿ ಶೋಷಿತ ಸಮಾಜದಿಂದ ಬಂದವರು ಪರಮೇಶ್ ಅವರು ನಿವೇಶನ ರಹಿತರಿಗೆ ನಿವೇಶನ ಕೊಡಬೇಕಾಗಿದೆ,ಕುಡಿಯುವ ನೀರು, ಬೀದಿ ದೀಪದ ವ್ಯವಸ್ಥೆಗೆ ಕ್ರಮ ವಹಿಸಬೇಕು ಎಂದು ಹೇಳಿದರು.

ಮಾಜಿ ಪುರಸಭಾ ಅಧ್ಯಕ್ಷರಾದ ಪ್ರಕಾಶ್ ವರ್ಮಾ ಮಾತನಾಡಿ ತರೀಕೆರೆ ಪುರಸಭೆಯಲ್ಲಿ ಭೋವಿ ಸಮಾಜದವರಿಗೆ ಅವಕಾಶ ಶಾಸಕರು ಮಾಡಿಕೊಟ್ಟಿದ್ದು ಇದು ಇತಿಹಾಸ ದಾಖಲೆಯಾಗಿದೆ. ಎಂ ಜಿ ರಸ್ತೆ ಬಿಹೆಚ್ ರಸ್ತೆ ಅಗಲೀಕರಣ ಮಾಡಲು ಕ್ರಮ ವಹಿಸಬೇಕು ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ಎಲ್ಲಾ ಇಲಾಖೆಯಲ್ಲಿಯೂ ಸಹ ಅನುದಾನ ಹಾಕಿಸಿ ಅಭಿವೃದ್ಧಿ ಕ್ರಮ ವಹಿಸಬೇಕು ಎಂದು ಹೇಳಿದರು. ಪುರಸಭಾ ಸದಸ್ಯರಾದ ಶಶಾಂಕ್ ಮಾತನಾಡಿ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೆ ಏರಿಸಬೇಕು ಎಂದು ಹೇಳಿದರು. ಟಿ ಜಿ ಲೋಕೇಶ್ ಮಾತನಾಡಿ ಶಾಸಕರು ಮತ್ತು ನೂತನ ಅಧ್ಯಕ್ಷರು ನಾಲ್ಕನೇ ಹಂತದ ಕುಡಿಯುವ ನೀರಿನ ವ್ಯವಸ್ಥೆ ಮಾಡಿಸಬೇಕು ಎಂದು ಹೇಳಿದರು. ಅಲ್ಪಸಂಖ್ಯಾತರ ಮುಖಂಡರಾದ ಸಮಿಉಲ್ಲಾ, ಶರೀಫ್ ಮಾತನಾಡಿ ಪರಿಶಿಷ್ಟ ಜಾತಿಯ ಎಲ್ಲಾ ಉಪಜಾತಿಗಳಿಗೂ ಸಾಮಾಜಿಕ ನ್ಯಾಯ ಕೊಡಿಸುವ ಮೂಲಕ ಪರಮೇಶ್ ರವರನ್ನು ಅಧ್ಯಕ್ಷರನ್ನಾಗಿ ಮಾಡಿದ್ದಾರೆ ಎಂದು ಹೇಳಿದರು. ಕಾಂಗ್ರೆಸ್ ಪಕ್ಷದ ಮಹಿಳಾ ಘಟಕದ ಅಧ್ಯಕ್ಷರಾದ ಭಾಗ್ಯಲಕ್ಷ್ಮಿ ಕೃಷ್ಣ, ಮತ್ತು ಕೆಪಿಸಿಸಿ ಸದಸ್ಯರಾದ ವಿಶ್ವನಾಥ್ ರವರು ಮಾತನಾಡಿದರು. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಪರಮೇಶ್ ಮಾತನಾಡಿ ನಾನು ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಬಯಸಿದ್ದೆ ಆದರೆ ಅದು ಸಾಧ್ಯವಾಗಲಿಲ್ಲ ಅನಂತರ ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿರುತ್ತೇನೆ, ಆದರೆ ಮೊದಲಿನಿಂದಲೂ ಸಹ ನಾನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡಿರುತ್ತೇನೆ,

ಆದ್ದರಿಂದ ಶಾಸಕರು ಮತ್ತು ಎಲ್ಲಾ ಪುರಸಭಾ ಸದಸ್ಯರುಗಳು ಮತ್ತು ಮಾಜಿ ಪುರಸಭಾ ಅಧ್ಯಕ್ಷರುಗಳು ಕಾಂಗ್ರೆಸ್ ಪಕ್ಷದ ಎಲ್ಲಾ,ಜಿಲ್ಲಾ ಮತ್ತು ತಾಲೂಕು ಅಧ್ಯಕ್ಷರುಗಳು ಒಮ್ಮತ ನಿರ್ಣಯ ತೆಗೆದುಕೊಂಡು ನನಗೆ ಪುರಸಭಾ ಅಧ್ಯಕ್ಷರಾಗಿ ಆಯ್ಕೆ ಮಾಡಿರುತ್ತಾರೆ. ಅವರೆಲ್ಲರಿಗೂ ನನ್ನ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ನನ್ನ ಅಧಿಕಾರ ಅವಧಿಯಲ್ಲಿ ಎಲ್ಲಾ ವಾರ್ಡ್ ಗಳಿಗೂ ಶಾಸಕರ ಸಹಕಾರದೊಂದಿಗೆ ಸರ್ಕಾರದ ಅನುದಾನ ತಂದು ಅಭಿವೃದ್ಧಿ ಕೆಲಸ ಮಾಡುತ್ತೇನೆ ಎಂದು ಹೇಳಿದರು. ವೇದಿಕೆಯಲ್ಲಿ ಪುರಸಭಾ ಉಪಾಧ್ಯಕ್ಷರಾದ ರಿಹನಾ ಪರ್ವೀನ್, ಮಾಜಿ ಪುರಸಭಾ ಅಧ್ಯಕ್ಷರಾದ ಟಿಎಮ್ ರಂಗನಾಥ್, ಕಮಲಾ ರಾಜೇಂದ್ರ ಸದಸ್ಯರಾದ ಅನಿಲ್ ಕುಮಾರ್, ಯಶೋದಮ್ಮ, ಟಿ ಆರ್ ಗೀತಾ, ಆರ್ ವಸಂತ, ದಿವ್ಯ ರವಿ, ಗಿರಿಜಾ ಪ್ರಕಾಶ್, ಪಾರ್ವತಮ್ಮ ತಿಮ್ಮಯ್ಯ, ವಿಜಯ ಬಾಯಿ ಮುಂತಾದವರು ಉಪಸ್ಥಿತರಿದ್ದರು. ಚುನಾವಣಾ ಅಧಿಕಾರಿಯಾಗಿ ತಹಶೀಲ್ದರ ರಾದ ರಾಜೀವ್ ರವರು ಇವರ ಆಯ್ಕೆಯನ್ನು ಘೋಷಣೆ ಮಾಡಿದರು. ಪುರಸಭಾ ಮುಖ್ಯ ಅಧಿಕಾರಿ ಎಚ್ ಪ್ರಶಾಂತ ರವರು ಉಪಸಿತರಿದ್ದು. ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷರಾದ ಪರಶುರಾಮ್ ಸ್ವಾಗತಿಸಿ ವಂದಿಸಿದರು.

ಜಿಲ್ಲಾ ವರದಿಗಾರರು:ಎನ್.ವೆಂಕಟೇಶ್.ತರೀಕೆರೆ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.
Back to top button