ಯುವ ಶಕ್ತಿಯ ರಹಸ್ಯ ಬ್ರಹ್ಮಚರ್ಯ ಜೀವನ – ಯತೀಶ್.ಎಂ ಸಿದ್ದಾಪುರ.

ಚಳ್ಳಕೆರೆ ಏ.24

ಯುವ ಶಕ್ತಿಯ ರಹಸ್ಯ ಬ್ರಹ್ಮಚರ್ಯ ಜೀವನ ವಾಗಿರುತ್ತದೆ ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಸ್ವಯಂ ಸೇವಕ ಯತೀಶ್.ಎಂ ಸಿದ್ದಾಪುರ ತಿಳಿಸಿದರು. ನಗರದ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದ ದೇವಸ್ಥಾನದಲ್ಲಿ ಬಾಪೂಜಿ ಆಯುರ್ವೇದ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ವ್ಯಕ್ತಿತ್ವ ನಿರ್ಮಾಣಕಾರಿ ತರಗತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು “ಪ್ರಾತಃ ಸ್ಮರಣೀಯ‌ ಬ್ರಹ್ಮ ರತ್ನಮಾಲಾ ಸ್ತೋತ್ರ” ದ ಅರ್ಥ ವಿವರಣೆಯನ್ನು ನೀಡಿದರು.

ಸುಭದ್ರ ವ್ಯಕ್ತಿತ್ವದ ನಿರ್ಮಾಣಕ್ಕೆ ಬ್ರಹ್ಮಚರ್ಯವೇ ಆಧಾರ ಸ್ತಂಭವಾಗಿದ್ದು ಇದರ ನಿತ್ಯಾನುಷ್ಠಾನದಿಂದ ಅನೇಕ ಪ್ರಯೋಜನಗಳಿದ್ದು ಇದರ ಅನುಸರಣೆ ಅಗತ್ಯ ಎಂದರು.

ಈ ಉಪನ್ಯಾಸದ ಆರಂಭದಲ್ಲಿ ಭಜನೆಯನ್ನು ಯತೀಶ್. ಎಂ ಸಿದ್ದಾಪುರ ನಡೆಸಿ ಕೊಟ್ಟರೆ, ಮಾತಾಜೀ ತ್ಯಾಗಮಯೀ ಅವರು ವಿದ್ಯಾರ್ಥಿಗಳಿಗೆ ಧ್ಯಾನಾಭ್ಯಾಸ ಮಾಡಿಸಿದರು. ಈ ಕಾರ್ಯಕ್ರಮದಲ್ಲಿ ಡಾ, ಭೂಮಿಕ, ಸಂತೋಷ್, ಅಂಬಣ್ಣ ಸೇರಿದಂತೆ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ವರದಿ:ಯತೀಶ್.ಎಂ ಸಿದ್ದಾಪುರ, ಚಳ್ಳಕೆರೆ.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button