ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ರವರ – ಜನ್ಮ ದಿನೋತ್ಸವ.

ನಂದವಾಡಗಿ ಜ .04

ಬಾಗಲಕೋಟೆ ಜಿಲ್ಲೆಯ ಹುನಗುಂದ/ಇಲಕಲ್ ತಾಲೂಕಿನ ಸ.ಹೆ.ಮ.ಹಿ ಪ್ರಾ ಶಾಲೆ ನಂದವಾಡಗಿಯಲ್ಲಿ ಅಕ್ಷರದವ್ವ, ಭಾರತ ದೇಶದ ಮೊದಲ ಮಹಿಳಾ ಶಿಕ್ಷಕಿ, ದಣಿವರಿಯದ ಸತ್ಯ ಶೋಧಕಿ ಸಾವಿತ್ರಿಬಾಯಿ ಫುಲೆ ರವರ ಜನ್ಮ ದಿನೋತ್ಸವ ಕಾರ್ಯಕ್ರಮವನ್ನು ಬಹಳಷ್ಟು ಅರ್ಥ ಪೂರ್ಣವಾಗಿ ಆಚರಿಸಲಾಯಿತು. ಈ ಶಾಲೆಯ ವಿದ್ಯಾರ್ಥಿನಿಯರು ಅಕ್ಷರದವ್ವನ ವೇಷಭೂಷಣ ಧರಿಸಿ ವೇದಿಕೆಯ ಮೇಲೆ ಅಲಂಕರಿಸಿದ್ದು ವಿಶೇಷವಾಗಿತ್ತು. ಶಾಲೆಯ ಮುಖ್ಯ ಗುರುಮಾತೆ ಶ್ರೀಮತಿ ವಿ.ಬಿ ಕುಂಬಾರರವರು ಸಾವಿತ್ರಿಬಾಯಿ ಫುಲೆ ರವರ ಜೀವನ ಚರಿತ್ರೆ, ಶಿಕ್ಷಣದಲ್ಲಿ ಮಾಡಿದ ಕ್ರಾಂತಿಕಾರಿ ಹೆಜ್ಜೆಗಳು, ದೇಶದ ಶಿಕ್ಷಣಕ್ಕೆ ಸಲ್ಲಿಸಿದ ಕೊಡುಗೆಗಳು, ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಮಾಡಿದ ತ್ಯಾಗಗಳನ್ನು ನೆನಪಿಸುವುದರ ಮೂಲಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಅನೇಕ ವಿದ್ಯಾರ್ಥಿನಿಯರು ತಾಯಿ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ರವರ ಬಗ್ಗೆ ಮಾತನಾಡಿ, ಕಾರ್ಯಕ್ರಮಕ್ಕೆ ಮೆರುಗು ತಂದರು. ಅಕ್ಷರದವ್ವನ ವಿಚಾರ ಧಾರೆಗಳು, ತತ್ವ, ಆದರ್ಶಗಳನ್ನು ನಾವೆಲ್ಲರೂ ಪಾಲಿಸಿ ಕೊಂಡು ಉತ್ತಮ ಶಿಕ್ಷಣ ಪಡೆದು ಭಾರತದ ಸುಂದರ ಭವಿಷ್ಯವನ್ನು ರೂಪಿಸಲು ಶ್ರಮಿಸಬೇಕು ಎಂದು ಶಿಕ್ಷಕರು ತಿಳಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಗುರುಮಾತೆ ವಿ.ಬಿ ಕುಂಬಾರ, ಸಹ ಶಿಕ್ಷಕಿಯರಾದ ಜ್ಯೋತಿ, ಜಿ.ಆರ್ ನದಾಫ್, ಸಹ ಶಿಕ್ಷಕರಾದ ಬಸವರಾಜ ಬಲಕುಂದಿ, ಡಾ, ವಿಶ್ವನಾಥ ತೋಟಿ, ಚಂದ್ರಶೇಖರ ಹುತಗಣ್ಣ, ಕು ಅಶ್ವಿನಿ ಕಪ್ಪರದ, ಸ ಉ ಕಿ ಪ್ರಾ ಶಾಲೆ ಮುಖ್ಯ ಗುರುಮಾತೆ ಗಂಗಾ, ಶಾಲಾ ಮಂತ್ರಿಮಂಡಲ, ವಿದ್ಯಾರ್ಥಿನಿಯರು, ಅಡುಗೆ ಸಿಬ್ಬಂದಿ ವರ್ಗ ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಿದರು. ಬಸವರಾಜ ಬಲಕುಂದಿ ಕಾರ್ಯಕ್ರಮ ನಿರೂಪಿಸಿದರು, ವಿಶ್ವನಾಥ ತೋಟಿ, ಚಂದ್ರಶೇಖರ ಹುತಗಣ್ಣ ಸ್ವಾಗತಿಸಿದರು, ಕು ಅಶ್ವಿನಿ ಕಪ್ಪರದ ವಂದಿಸಿದರು.

ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಪ್ರತಾಪ್.ವಾಯ್.ಕಿಳ್ಳಿ.ಇಲಕಲ್ಲ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button