ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚು ಗಮನ ಕೊಡುತ್ತಿದ್ದೇವೆ – ಹರಿಕೃಷ್ಣ.
ಲಕ್ಕವಳ್ಳಿ ಜ .13

ಜನ ಸಾಮಾನ್ಯರ ಸಮಸ್ಯೆಗಳನ್ನು ಅರಿತು ಅಭಿವೃದ್ಧಿ ಕೆಲಸಗಳಲ್ಲಿ ಹೆಚ್ಚು ಗಮನ ಕೊಡುತ್ತಿದ್ದೇವೆ ಎಂದು ಕೆಂಚಿಕೊಪ್ಪ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರಾದ ಬಿ.ಓ ಹರಿಕೃಷ್ಣ ರವರು ಹೇಳಿದರು. ಅವರು ಪತ್ರಿಕೆ ಯೊಂದಿಗೆ ಮಾತನಾಡಿ ಕೂಲಿಗಾಗಿ ಕಾಳು ಯೋಜನೆ ಯಡಿಯಲ್ಲಿ ಉದ್ಯೋಗ ಕಾರ್ಡ್ ಹೊಂದಿದವರಿಗೆ ಕೆಲಸ ಕೊಡುತ್ತಿದ್ದೇವೆ, ಕುಡಿಯುವ ನೀರಿನ ಸೌಕರ್ಯದ ಬಗ್ಗೆ ಕ್ರಮ ವಹಿಸಿದ್ದೇವೆ, ಜಲ ಜೀವನ್ ಮಿಷನ್ ಯೋಜನೆ ಅಡಿಯಲ್ಲಿ ಪ್ರತಿ ಮನೆ ಮನೆಗೂ ಸಹ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಕೆಂಚಿಕೊಪ್ಪ, ಮಾಲಿಕೊಪ್ಪ ಗ್ರಾಮಸ್ಥರು ಸಾರ್ವಜನಿಕರು ನಲ್ಲಿ ಕಂದಾಯ ಮತ್ತು ಮನಗಂದಾಯ ಪಾವತಿಸಿ ಪಂಚಾಯಿತಿಯ ಆರ್ಥಿಕ ಸಂಕಷ್ಟ ನೀಗಿಸ ಬೇಕಾಗಿದೆ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು. ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯರಾದ ಸುರೇಶ್ ಶೆಟ್ಟಿ ಈ ಸಂದರ್ಭದಲ್ಲಿ ಉಪಸಿತರಿದ್ದರು.
ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಎನ್.ವೆಂಕಟೇಶ್. ತರೀಕೆರೆ .ಚಿಕ್ಕಮಗಳೂರು