ಜ. 20 ರಂದು ಸಚಿವ ಶಿವಾನಂದ ಪಾಟೀಲರ ಮನೆಗೆ ರೈತರಿಂದ ಮುತ್ತಿಗೆ – ಅಹೋರಾತ್ರಿ ಧರಣಿ ಸತ್ಯಾಗ್ರಹ.
ಕಲಕೇರಿ ಜ.15

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವಿವಿಧ ಎಲ್ಲಾ ರೈತ ಬಾಂಧವರು ಸೇರಿ ಉಗ್ರವಾದ ಹೋರಾಟವನ್ನು ನಡೆಯುವುದು ಎಲ್ಲಾ ರೈತ ಬಾಂಧವರು ತಪ್ಪದೆ ಹೋರಾಟದಲ್ಲಿ ಪಾಲ್ಗೊಂಡು ಯಶಸ್ವಿ ಗೊಳಿಸಬೇಕು. ವಿಜಯಪುರದಲ್ಲಿ ಜನೆವರಿ 20 ರಂದು ಸಚಿವ ಶಿವಾನಂದ ಪಾಟೀಲರ ಮನೆಗೆ ರೈತರಿಂದ ಮುತ್ತಿಗೆ ರೈತರ ಅಳಿವು ಉಳಿವುಗಾಗಿ ಅಹೋರಾತ್ರಿ ಧರಣಿ ಸತ್ಯಾಗ್ರಹ ತಾಳಿಕೋಟಿ 20.1.2025 ರಂದು ಜವಳಿ ಸಕ್ಕರೆ ಹಾಗೂ APMC ಸಚಿವರಾದ ಶಿವಾನಂದ ಪಾಟೀಲ್ ರವರ ಮನೆಯ ಎದುರಿಗೆ ನಡೆಯಲಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಹೋರಾಟದಲ್ಲಿ ಸಾವಿರಾರು ಸಂಖ್ಯೆಯಲ್ಲಿ ರೈತರು ಭಾಗವಹಿಸಿ ಕಬ್ಬಿನ ಬೆಂಬಲ ಬೆಲೆ ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ಹಲವಾರು ರೈತರ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಹೋರಾಟ ಅನಿವಾರ್ಯವಾಗಿದೆ ಆದ್ದರಿಂದ ಜಿಲ್ಲೆಯ ಎಲ್ಲಾ ರೈತರು ಪಕ್ಷಾತೀತವಾಗಿ ಹಾಗೂ ಜ್ಯಾತ್ಯಾತೀತವಾಗಿ ಭಾಗವಹಿಸಿ ಈ ಹೋರಾಟವನ್ನು ಯಶಸ್ವಿ ಗೋಳಿಸಬೆಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವಿಜಯಪುರ ಮತ್ತು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷರಾದ ಚೂನ್ನಪ್ಪ ಪೂಜೇರಿ ಹಾಗೂ ಜಿಲ್ಲಾಧ್ಯಕ್ಷರಾದ ಸಂಗಮೇಶ ಅವರ ನೇತೃತ್ವದಲ್ಲಿ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಎಲ್ಲಾ ಸುತ್ತಮುತ್ತ ಹಳ್ಳಿಯ ಎಲ್ಲಾ ರೈತ ಬಾಂಧವರು ಪಾಲ್ಗೊಂಡು ಯಶಸ್ವಿ ಗೊಳಿಸಬೇಕು ಎಂದು ತಾಳಿಕೋಟಿ ತಾಲೂಕಾ ಅಧ್ಯಕ್ಷರಾದ ಶ್ರೀಶೈಲ್ ವಾಲಿಕಾರ ಮತ್ತು ತಾಳಿಕೋಟಿ ತಾಲೂಕಿನ ಮಹಿಳಾ ಅಧ್ಯಕ್ಷರಾದ ಸುಜಾತ ಆಂಟಿ ಮತ್ತು ಕಲಕೇರಿ ಹೋಬಳಿ ಅಧ್ಯಕ್ಷರಾದ ಮೈಬೂಬಬಾಷ ಮನಗೂಳಿ ಇವರು ಪತ್ರಿಕೆಯ ಮೂಲಕ ತಿಳಿಸಿದ್ದಾರೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಮೈಬೂಬಬಾಷ.ಮನಗೂಳಿ.ತಾಳಿಕೋಟೆ