ಮಾಸಿಕ ಸಂತೆ ಅಡಿಯಲ್ಲಿ ಸ್ತ್ರೀ ಸಬಲೀಕರಣಕ್ಕೆ ಮಹಿಳೆಯರ ದಾರಿದೀಪ – ಜಿ.ಎಸ್ ಪಾಟೀಲ.

ರೋಣ ಜ.16

ಎನ್.ಆರ್‌.ಎಲ್‌.ಎಂ ಸಂಜೀವಿನಿ ಯೋಜನೆಯಡಿ ಆರ್ಥಿಕ ಸೌಲಭ್ಯ ಪಡೆದಿರುವ ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯರು ಮನೆಗಳಲ್ಲಿಯೇ ವಿವಿಧ ಉತ್ಪನ್ನಗಳನ್ನು ತಯಾರಿಸುತ್ತಿದ್ದಾರೆ. ಈ ಉತ್ಪನ್ನಗಳಿಗೆ ಮಾರುಕಟ್ಟೆ ದೊರಕಿಸಿ ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣ ಗೊಳಿಸುವ ಉದ್ದೇಶದಿಂದ ಮಾಸಿಕ ಸಂತೆಯನ್ನು ಆರಂಭಿಸಲು ಸರ್ಕಾರ ಸೂಚಿಸಿದೆ. ಅದರಂತೆ ಜಿಲ್ಲೆಯಲ್ಲಿ ಮೊದಲ ಬಾರಿಗೆ ರೋಣ ಪಟ್ಟಣದಲ್ಲಿ ಈ ಸಂತೆ ಆರಂಭಿಸಲಾಗಿದೆ. ಇತಂಹ ಮಾಸಿಕ ಸಂತೆಯು ಮಹಿಳೆಯರ ಪಾಲಿಗೆ ದಾರಿ ದೀಪವಾಗುತ್ತವೆ, ಪ್ರತಿ ಗ್ರಾಮದಲ್ಲೂ ಸಹ ಇಂತಹ ಮಾಸಿಕ ಸಂತೆಯನ್ನು ಮಾಡಲು ನಮ್ಮ ಇ.ಓ ಅವರಿಗೆ ಸೂಚನೆ ನೀಡಿದ್ದೇನೆ ಇದರಿಂದ ಮಹಿಳಾ ಸಂಘಗಳು ಹಾಗೂ ಮಹಿಳೆಯರು ಆರ್ಥಿಕವಾಗಿ ಸಬಲರಾಗುತ್ತಾರೆ ಎಂದು ಮಾಸಿಕ ಸಂತೆಯನ್ನು ಉದ್ಘಾಟಿಸಿ ಜಿ.ಎಸ್ ಪಾಟೀಲ ಮಾತನಾಡಿದರು. ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಯೋಜನೆ ಸಂಜೀವಿನಿ ಯೋಜನೆಯಡಿ ಆರ್ಥಿಕ ನೆರವು ಪಡೆದಿರುವ ಮಹಿಳಾ ಸ್ವಸಹಾಯ ಗುಂಪುಗಳು ತಯಾರಿಸಿರುವ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟಕ್ಕಾಗಿ ಈ ಸಂತೆಯನ್ನ ಆಯೋಜಿಸಲಾಗುತ್ತಿದೆ. ಮೊದಲ ಮಾಸಿಕ ಸಂತೆಯನ್ನು ಪಟ್ಟಣದ ಸಂತೆಯಲ್ಲಿ ಗುರುವಾರ ನಡೆಸಲಾಯಿತು. ಗ್ರಾಮೀಣ ಭಾಗದ ಸ್ವಸಹಾಯ ಸಂಘಗಳಲ್ಲಿ ತೊಡಗಿ ಕೊಂಡಿರುವ ಮಹಿಳೆಯರು ತಯಾರಿಸಿರುವ ಉತ್ಪನ್ನಗಳನ್ನು ಮಾರಾಟ ಮಾಡಲು ವೇದಿಕೆ ಕಲ್ಪಿಸಿ, ಅವರು ಆರ್ಥಿಕವಾಗಿ ಅಭಿವೃದ್ಧಿ ಪಡಿಸಲು ಉತ್ತೇಜನ ನೀಡುವುದಕ್ಕಾಗಿ ತಾಲೂಕ ಪಂಚಾಯಿತಿಯು ‘ಮಾಸಿಕ ಸಂತೆ’ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಮೊದಲ ಬಾರಿಗೆ ರೋಣ ಪಟ್ಟಣದಲ್ಲಿ ಅನುಷ್ಠಾನ ಗೊಳಿಸಿದೆ.ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯ 13 ಮಹಿಳಾ ಸ್ವಸಹಾಯ ಸಂಘಗಳ ಸದಸ್ಯೆಯರು ತಾವು ತಯಾರಿಸಿದ ಉತ್ಪನ್ನಗಳನ್ನು ಪ್ರದರ್ಶನ ಹಾಗೂ ಮಾರಾಟಕ್ಕೆ ಇಟ್ಟಿದ್ದರು.

ಆಹಾರ ಉತ್ಪನ್ನಗಳು, ಕರಕುಶಲ ವಸ್ತುಗಳು ಲಭ್ಯವಿದ್ದವು.ಜಿಲ್ಲಾ ಪಂಚಾಯತ ಯೋಜನಾ ನಿರ್ಧಶಕರಾದ ಎಮ್. ವಿ. ಚಳಗೇರಿ ಮಾತನಾಡಿ ಸಂಜೀವಿನಿ ಸಂಘದ ಉತ್ಪನ್ನವು ಮಾರುಕಟ್ಟೆಯಲ್ಲಿ ಗುರುತಿಸಿ ಕೊಳ್ಳುವಂತೆ ಮಾಡಲು ಅದರಲ್ಲಿ ವಿಭಿನ್ನತೆಯಿರ ಬೇಕು, ಉತ್ಪನ್ನದ ಗುಣಮಟ್ಟ ಮತ್ತು ಅದನ್ನು ಗ್ರಾಹಕರಿಗೆ ನೀಡುವಾಗ ಉತ್ತಮ ಪ್ಯಾಕೆಜಿಂಗ್ ಹೊಂದಿರಬೇಕು. ಆಗ ಮಾತ್ರ ಉತ್ಪನ್ನಗಳು ಜನರನ್ನು ತಲುಪುತ್ತವೆ, ಮಾರುಕಟ್ಟೆಯಲ್ಲಿ ಸ್ಪರ್ಧಾತ್ಮಕ ಬೆಲೆಯನ್ನು ನಿಗದಿಪಡಿಸಿದಾಗ ಮಾತ್ರ ಹೆಚ್ಚಿನ ವಸ್ತುಗಳು ಮಾರಾಟವಾಗುತ್ತವೆ ಈ ನಿಟ್ಟಿನಲ್ಲಿ ನೀವು ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.ತಾಲೂಕ ಪಂಚಾಯತ ಕಾರ್ಯ ನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ.ಕಂದಕೂರ ಮಾತನಾಡಿ ಮಾನ್ಯ ಸಿ.ಇ.ಓ ಅವರ ಮಾರ್ಗದರ್ಶನದಲ್ಲಿ ಇಂತಹ ಒಂದು ಪರಿಕಲ್ಪನೆ ಮಾಡಲಾಗಿದ್ದು ಈ ಕಾರ್ಯಕ್ರಮವನ್ನು ಮಾನ್ಯ ಶಾಸಕರ ಅಧ್ಯಕ್ಷತೆಯಲ್ಲಿ ಮಾಡಲಾಗಿದೆ. ಮಾಸಿಕ ಸಂತೆಗಳಲ್ಲಿ ಹೆಚ್ಚಿನ ಸಂಘಗಳು ಪಾಲ್ಗೊಳ್ಳಬೇಕು. ಗುಣಮಟ್ಟದ ಹಾಗೂ ಪರಿಶುದ್ಧವಾದ ಉತ್ಪನ್ನ ತಯಾರಿಸಬೇಕು. ಉತ್ಪನ್ನಗಳ ಬ‌ಗ್ಗೆ ಪ್ರಚಾರವನ್ನು ಮಾಡಬೇಕು’ ಎಂದು ಸಲಹೆ ನೀಡಿದರು.ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷರಾದ ಶ್ರೀಮತಿ ಗೀತಾ ಮಾಡಲಗೇರಿ, ಉಪಾಧ್ಯಕ್ಷರಾದ ಶ್ರೀ ದುರಗಪ್ಪ ಹಿರೇಮನಿ ಗೋವಿಂದ ಯಚ್ಚರಗೌಡ ಗೋವಿಂದಗೌಡರ. ಬಸವರಾಜ ನವಲಗುಂದ. ಇಸೋಪ ಇಟಗಿ. ನಾಜಬೇಗಂ ಯಲಿಗಾರ. ಸೋಮು ನಾಗರಾಜ. ಸಂಜಯ ದೊಡಮನಿ. ತಾಲೂಕ ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಉಮಾ ಮಂತೂರ, ತಾಲೂಕಿನ ಎಲ್ಲಾ ಸ್ವ ಸಹಾಯ ಸಂಘದ ಸದಸ್ಯರು ಹಾಗೂ ಸಂಜೀವಿನಿ ಸಿಬ್ಬಂದಿಗಳು ಸೇರಿದಂತೆ ಪಟ್ಟಣದ ಜನರು ಭಾಗವಹಿಸಿದ್ದರು.

ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನೆಲ್:ಎಸ್.ವಿ ಸಂಕನಗೌಡ್ರ ರೋಣ ಗದಗ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button