ಶಾಲಾ ಅಭಿವೃದ್ಧಿಗೆ ಪಾಲಕರ – ಪಾತ್ರ ಮುಖ್ಯ.

ಯಲಗೋಡ ಮಾ.03

ದೇವರ ಹಿಪ್ಪರಗಿ ತಾಲ್ಲೂಕಿನ ಯಲಗೋಡದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಪಾಲಕರ ಸಭೆ ನಡೆಯಿತು.ಶಾಲೆಯ ಶೈಕ್ಷಣಿಕ ಚಟುವಟಿಕೆಗಳಲ್ಲಿ ಪಾಲಕರು ಭಾಗವಹಿಸ ಬೇಕು. ಪಾಲಕರು ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕ ವಾಗಿರುವ ವಾತಾವರಣವನ್ನು ಮನೆಯಲ್ಲಿ ನಿರ್ಮಾಣ ಮಾಡಬೇಕು. ಮಕ್ಕಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವಲ್ಲಿ ಕೇವಲ ಶಿಕ್ಷಕರ ಪಾತ್ರ ದೊಂದಿಗೆ ಪೋಷಕರ ಪಾತ್ರವೂ ಅತಿ ಮಹತ್ವದ್ದಾಗಿದೆ ಎಂದು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಪಾಲಕರ ಸಭೆಯಲ್ಲಿ ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯದ ತಾಲೂಕಾ ಅಧಿಕಾರಿಗಳಾಗಿರುವ ರಮೇಶ್ ಪೂಜಾರಿಯವರು ಮುಖ್ಯ ಅತಿಥಿ ಸ್ಥಾನ ವಹಿಸಿ ಮಾತನಾಡಿದರು. ಈ ಸಭೆಯಲ್ಲಿ ಮಹಾಜನ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಯಲಗೋಡದ ಎಸ್‌ಡಿಎಂಸಿ ಅಧ್ಯಕ್ಷರಾದ ಮಾಂತೇಶ ಕೂಟನೂರ. ಮುಖ್ಯ ಗುರುಗಳಾದ ಶ್ರೀ ಮಲ್ಲಿಕಾರ್ಜುನ ಅಂಕಲಗಿ. ಬಸವರಾಜ ನಾಟಿಕಾರ. ಗಜಾನನ ನಾಟಿಕಾರ ಚಿದಾನಂದ ಶಾಸ್ತ್ರಿ ಹಾಗೂ ಎಸ್.ಡಿ.ಎಮ್‌.ಸಿ ಸದಸ್ಯರು ಹಾಗೂ ಪಾಲಕರು ಶಿಕ್ಷಕರು ಉಪಸ್ಥಿತರಿದ್ದರು. ಈ ಕಾರ್ಯಕ್ರಮವನ್ನು ಮಂಗಳ ಬಾಯಿ ಅಲ್ಮದ ಗುರು ಮಾತೆಯರು ನಿರೂಪಿಸಿ. ದಸ್ತಗಿರ್ ಬಗಲಿ ಸ್ವಾಗತಿಸಿ ಗುರುನಾಥ ರೊಟ್ಟಿ ವಂದಿಸಿದರು.

ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಭೀಮಪ್ಪ.ಹಚ್ಯಾಳ.ದೇವರ ಹಿಪ್ಪರಗಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button