ದೇವಸಮುದ್ರ ಕೆಕೆಪುರ ಹಾಸ್ಟೆಲಿಗೆ ಅನಿರೀಕ್ಷಿತ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಅನ್ಯಾಯ ಆಗದಂತೆ ಜಿಲ್ಲಾ ಮಟ್ಟದ ಇಲಾಖೆಯ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡು ಖಡಕ್ ಎಚ್ಚರಿಕೆ ನೀಡಿದ ಶಾಸಕರು.
ದೆಸಮುದ್ರ ಜುಲೈ.29
ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದ ಎನ್ ವೈ ಗೋಪಾಲಕೃಷ್ಣ ಶಾಸಕರು ಇಂದಿರಾಗಾಂಧಿ ವಸತಿ ಶಾಲೆ (ಪ.ವರ್ಗ84) ದೇವಸಮುದ್ರ (ಕೆ.ಕೆ.ಪುರ) ಶಾಲೆಗೆ ಭೇಟಿ ನೀಡಿ ಆ ಬಡ ವಿದ್ಯಾರ್ಥಿಗಳ ಅಹವಾಲಗಳನ್ನು ಜನಪ್ರಿಯ ಶಾಸಕರಾದ ಶ್ರೀ ಎನ್. ವೈ ಗೋಪಾಲಕೃಷ್ಣ ರವರು ಅನಿರೀಕ್ಷಿತ ಭೇಟಿ ನೀಡಿ ಅಲ್ಲಿನ ವಾರ್ಡನ್ ಇವರಿಗೆ ಸರ್ಕಾರದಿಂದ ಬರ್ತಕ್ಕಂತ ಸೌಲಭ್ಯವನ್ನು ದುರುಪಯೋಗ ಆಗಬಾರದು ಸರ್ಕಾರ ವಿದ್ಯಾರ್ಥಿಗಳಿಗೆ ಅನುದಾನ ಬಿಡುಗಡೆ ಮಾಡಿರುತ್ತಾರೆ ಎಂದು ಮಾನ್ಯ ಅಭಿವೃದ್ಧಿ ಹರಿಕಾರರಾದ ಎನ್. ವೈ. ಗೋಪಾಲಕೃಷ್ಣ ಶಾಸಕರು ತಿಳಿಸಿದರು ಅಡಿಗೆಯವರ ಅವ್ಯವಸ್ಥೆಯ ಬಗ್ಗೆ ತಿಳಿದು ಪ್ರಾಂಶುಪಾಲರು ಹಾಗೂ ಸಂಬಂಧಪಟ್ಟ ಜಿಲ್ಲಾ ಮಟ್ಟದ ಇಲಾಖೆಯ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು ಆಗಿರುವ ಅವ್ಯವಸ್ಥೆಯನ್ನ ಒಂದು ವಾರದಲ್ಲಿ ಸರಿ ಪಡಿಸಿಕೊಳ್ಳಲು ಖಡಕ್ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ತಹಸಿಲ್ದಾರ್ ರೂಪ, ಶ್ರೀ ಜಗದೀಶ್ ಜಿಲ್ಲಾ ಉನಿರ್ದೇಶಕರು ಸಮಾಜಕಲ್ಯಾಣ ಇಲಾಖೆ, ಶಿವಕುಮಾರ್ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಎಂದು ವರದಿಯಾಗಿದೆ.
ತಾಲೂಕ ವರದಿಗಾರರು:ತಿಪ್ಪೇಸ್ವಾಮಿ.ಹೊಂಬಾಳೆ. ಮೊಳಕಾಲ್ಮೂರು