ಜ, 24 ಕ್ಕೆ “ಶಿವಯೋಗಿ ಶ್ರೀಸಿದ್ದರಾಮೇಶ್ವರ” – ಚಿತ್ರ ಬಿಡುಗಡೆ.

ಹುಬ್ಬಳ್ಳಿ ಜ.21

ಓಂಕಾರ ಮೂವೀಸ್ ಬೆಂಗಳೂರ ಅವರ ಶ್ರೀಮತಿ ಸುಜಾತ ರಾಜ್ ಕುಮಾರ್ ಅರ್ಪಿಸುವ ಪುರುಷೋತ್ತಮ್ ಓಂಕಾರ್ ಸ್ವಾಮಿಯವರ ದಕ್ಷ ನಿರ್ದೇಶನದಲ್ಲಿ ಮೂಡಿ ಬಂದಿರುವಂತಹ “ಶಿವಯೋಗಿ ಶ್ರೀ ಸಿದ್ದರಾಮೇಶ್ವರ” ಚಿತ್ರದ ಪತ್ರಿಕಾ ಗೋಷ್ಟಿ ಹುಬ್ಬಳ್ಳಿಯ ಪತ್ರಿಕಾ ಭವನದಲ್ಲಿ ಜರುಗಿತು. ಈ ಚಿತ್ರದಲ್ಲಿ ನಾಯಕ ನಟರಾಗಿ ಉತ್ತರ ಕರ್ನಾಟಕದ ಬೈಲಹೊಂಗಲ ತಾಲೂಕಿನ ಯುವ ಪ್ರತಿಭೆಯಾದ ರಾವಣ ಕತ್ತಿಯವರು ಸಿದ್ದರಾಮೇಶ್ವರನಾಗಿ ಅಭಿನಯಿಸಿದ್ದಾರೆ. ಮೊದಲ ಬಾರಿಗೆ ಒಂದು ಪೌರಾಣಿಕ ಕಥೆಯನ್ನು ಈಗಿನ ಕಾಲದ ತಾಂತ್ರಿಕತೆಯೊಂದಿಗೆ ಸಿದ್ಧಪಡಿಸಲಾಗಿದ್ದು. ಸಿದ್ದರಾಮೇಶ್ವರ ಪವಾಡಗಳೊಂದಿಗೆ ಮನರಂಜನೆಯನ್ನು ಹೊಂದಿದೆ. ಈಗಿನ ಕಾಲದ ಜನರಿಗೆ ಶರಣರ ಸಂಗತಿಗಳನ್ನು ಮನರಂಜನಾತ್ಮಕವಾಗಿ ಮುಟ್ಟಿಸಲು ಎನ್.ಎಸ್ ರಾಜಕುಮಾರ್ ಅವರು ಚಿತ್ರಕ್ಕೆ ಬಂಡವಾಳವನ್ನು ಹೂಡಿಕೆ ಮಾಡಿದ್ದು ಹಾಗೂ ಸಹ ನಿರ್ಮಾಪಕರಾಗಿ. ಜೆ.ಕೆ ಸುನಿಲ್ ಕುಮಾರ್ ಕೈ ಜೋಡಿಸಿದ್ದಾರೆ. ಈ ಚಿತ್ರದಲ್ಲಿ ಎರಡು ಹಾಡುಗಳು ಹಾಗೂ 4 ವಚನಗಳಿದ್ದು. ಚಿತ್ರಕ್ಕೆ ಸಂಗೀತ ಸಂಯೋಜನೆ ರಾಜ್ ಭಾಸ್ಕರ್ ಮಾಡಿದ್ದಾರೆ. ಛಾಯಾಗ್ರಹಣ ಗೌರಿ ವೆಂಕಟೇಶ್,ಚಿತ್ರದ ಎಡಿಟಿಂಗ್ ಕಲರ್ ಕರೆಕ್ಷನ್ ಹಾಗೂ ಗ್ರಾಫಿಕ್ಸ್ ಕೆಲಸವನ್ನು ಆರ್.ಅನಿಲ್ ಕುಮಾರ್, ಪತ್ರಿಕಾ ಸಂಪರ್ಕ ಡಾ, ಪ್ರಭು ಗಂಜಿಹಾಳ, ಡಾ, ವೀರೇಶ್ ಹಂಡಗಿ ಅವರದಿದೆ. ಮುಖ್ಯ ತಾರಾಗಣದಲ್ಲಿ ರಾವಣ ಕತ್ತಿ. ಗಣೇಶ್ ರಾವ್ ಕೇಸರ ಕರ್, ನಾಗೇಂದ್ರ ಅರಸು. ಬಸವರಾಜ್ ರಕ್ಷಾಗೌಡ, ಅನ್ನಪೂರ್ಣ, ಪ್ರಮೀಳಾ ಸುಬ್ರಹ್ಮಣ್ಯ, ಬಾಲಕ ಸಿದ್ದರಾಮನಾಗಿ ಮಾ.ಸಮರ್ಥ, ಬಸವರಾಜ ಹಾಗೂ ಮುಂತಾದವರು ಅಭಿನಯಿಸಿದ್ದಾರೆ. ಈ ಚಿತ್ರವು ಇದೆ ಜ. 24 ರಂದು ರಾಜ್ಯಾದ್ಯಂತ ಚಿತ್ರ ಮಂದಿರಗಳಲ್ಲಿ ಬಿಡುಗಡೆ ಯಾಗುತ್ತಿದೆ.ಪತ್ರಿಕಾ ಮಾಧ್ಯಮ ಹಾಗೂ ಪ್ರೇಕ್ಷಕ ಪ್ರಭುಗಳು ಚಲನ ಚಿತ್ರ ವೀಕ್ಷಿಸಿ ಪ್ರೋತ್ಸಾಹ ನೀಡಬೇಕೆಂದು ನಿರ್ದೇಶಕ ಪುರುಷೋತ್ತಮ ಓಂಕಾರಸ್ವಾಮಿ ಹೇಳಿದರು.

*****

-ಡಾ.ಪ್ರಭು ಗಂಜಿಹಾಳ

ಮೊ-9448775346

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button