ವಿದ್ಯಾರ್ಥಿಗಳು ಸಾಧನೆ ಮಾಡುವ ಛಲ ಬೆಳೆಸಿ ಕೊಳ್ಳಲಿ.

ಅಥಣಿ ಜನೇವರಿ.19

ವಿದ್ಯಾರ್ಥಿ ಜೀವನ ಬಹಳ ಮಹತ್ವದ್ದು. ಆದ್ದರಿಂದ ವಿದ್ಯಾರ್ಥಿಗಳು ಸಾಧನೆ ಮಾಡುವ ಗುರಿ ಹೊಂದಿರ ಬೇಕು. ಆ ಗುರಿ ಮುಟ್ಟಲು ನಿರಂತರವಾಗಿ ಶ್ರಮ ಪಟ್ಟರೆ ತಾವು ಅಂದು ಕೊಂಡದ್ದನ್ನು ಸಾಧಿಸಲು ಸಾಧ್ಯವಿದೆ ಎಂದು ಕಾಂಗ್ರೆಸ್ ಪಕ್ಷದ ಯುವ ನಾಯಕರಾದ ಶ್ರೀ ಚಿದಾನಂದ ಲ. ಸವದಿ ಹೇಳಿದರು.ತಾಲೂಕಿನ ತೆಲಸಂಗ ಗ್ರಾಮದಲ್ಲಿ ದಿ. 19-1-24ರಂದು ಆಯೋಜಿಸಿದ್ದ ಎಸ್.ಎಮ್.ವಾಯ್.ಕೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಹಾಗೂ 2023-24.ನೇ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ, ಕ್ರೀಡಾ, ಎನ್.ಎಸ್.ಎಸ್., ರೆಡ್‌ಕ್ರಾಸ್ ಮತ್ತು ವಿವಿಧ ಚಟುವಟಿಕೆಗಳ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳು ಶಿಕ್ಷಣ ಕಲಿಕೆ ಹಂತದಲ್ಲಿ ಕಾಲಹರಣ ಮಾಡದೇ ಹೆಚ್ಚು ವಿದ್ಯಾಭ್ಯಾಸದಲ್ಲಿ ತೊಡಗ ಬೇಕು. ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನು ಪಡೆದು ಉನ್ನತ ಸ್ಥಾನಮಾನ ಪಡೆಯಬೇಕು. ಈ ಮೂಲಕ ಶಿಕ್ಷಣ ಕಲಿಸಿದ ಗುರುಗಳು, ತಂದೆ ತಾಯಿಗಳಿಗೆ ಕೀರ್ತಿ ತರಬೇಕು ಎಂದು ಹೇಳಿದರು. ದೈಹಿಕ ಸದೃಢತೆಗೆ ಕ್ರೀಡಾ ಚಟುವಟಿಕೆಗಳು ಪೂರಕವಾಗಿವೆ. ಕ್ರೀಡೆ ಸೇರಿದಂತೆ ಕಾಲೇಜಿನ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆ ಪ್ರದರ್ಶಿಸ ಬೇಕು ಎಂದು ಚಿದಾನಂದ ಲ. ಸವದಿ ಹೇಳಿದರು. ಮುಖಂಡರಾದ ಶಿವಾನಂದ ಗುಡ್ಡಾಪುರ, ಶ್ರೀಶೈಲ ಶೆಲ್ಲೆಪ್ಪಗೋಳ, ಕಾಲೇಜು ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕರಾದ ಎಸ್.ಬಿ. ದೇಗೌಡ, ತೆಲಸಂಗ ಗ್ರಾ.ಪಂ. ಅಧ್ಯಕ್ಷೆ ಅನಿತಾ ಪರಶುರಾಮ ಕಂದಾರೆ, ಕಾಲೇಜಿನ ಪ್ರಾಂಶುಪಾಲರಾದ ಶಿವಾನಂದ ಹಾಲೊಳ್ಳಿ, ಪ್ರೊ. ಮಠಪತಿ ಸೇರಿದಂತೆ ಮತ್ತಿತರ ಗಣ್ಯರು ವೇದಿಕೆ ಮೇಲೆ ಉಪಸ್ಥಿತರಿದ್ದರು. ತೆಲಸಂಗ ಗ್ರಾಮದ ಮುಖಂಡರು, ಗ್ರಾಮಸ್ಥರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಜಿಲ್ಲಾ ವರದಿಗಾರರು:ಎಂ.ಎಂ.ಶರ್ಮಾ.ಬೆಳಗಾವಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button