ಜನಸೇವಾ ಫೌಂಡೇಷನ್ ರಾಜ್ಯಾಧ್ಯಕ್ಷ ಜಾವಿದ್ ಖಾನ್ ರಿಂದ – ಲೋಕಾಯುಕ್ತಕ್ಕೆ ಮನವಿ.

ಮಾನ್ವಿ ಜ.27

ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳಲ್ಲಿ ಸೌಲಭ್ಯಗಳಿಲ್ಲದೆ ವಿದ್ಯಾರ್ಥಿಗಳು ವಂಚನೆಯ ನಡುವೆ‌ ಬದುಕುತ್ತಿದ್ದಾರೆ. ಇಂದಿರಾಗಾಂಧಿ ಕುರ್ಡಿ ವಸತಿ ಶಾಲೆ ಪರವಾನಗಿ ಇಲ್ಲದೆ ಕಟ್ಟಡ ಇದೆ, ಹೀಗಾಗಿ ಸರಕಾರದ ನಿಯಮಗಳೆ ಮಾನ್ವಿಯಲ್ಲಿ ಗಾಳಿಗೆ ತೂರಲಾಗಿದೆ ಎಂದು ಜನಸೇವಾ ಫೌಂಡೇಷನ್ ರಾಜ್ಯಾಧ್ಯಕ್ಷ ಜಾವಿದ್ ಖಾನ್ ಲೋಕಾಯುಕ್ತ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಮಾನ್ವಿ ತಾಲೂಕಿನ ಕುರ್ಡಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಮಕ್ಕಳಿಗೆ ಸೌಲಭ್ಯಗಳಿಲ್ಲದೆ ಒಂದೇ ಕೊಠಡಿಯಲ್ಲಿ 30 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉಳಿದು ಕೊಂಡಿದ್ದಾರೆ. ಕಟ್ಟಡ ಪರವಾನಗಿ ಇಲ್ಲದೆ ಬಿಲ್ಡಿಂಗ್ ನಿರ್ಮಾಣ ಮಾಡಲಾಗಿದೆ. ಆದರೆ ವಿದ್ಯಾರ್ಥಿಗಳಿಗೆ ಅನಾಹುತವಾದರೆ ಯಾರು ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳಲ್ಲಿ ಸೌಲಭ್ಯಗಳಿಲ್ಲದೆ ಬದುಕುತ್ತಿದ್ದಾರೆ. ಆದರೆ ತಾಲೂಕ ಅಧಿಕಾರಿ ನಟರಾಜ ಅವರ ದುರಾಡಳಿತ ಇಲ್ಲಿ ಎದ್ದು ಕಾಣುತ್ತದೆ ಎಂದು ಜಾವಿದ್ ಖಾನ್‌ ಮಾಧ್ಯಮದವರ ಮುಂದೆ ಆಕ್ರೋಶ ವ್ಯಕ್ತಪಡಿಸಿದರು.

ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್.ಭಾಷಾ.ನಕ್ಕುಂದಿ.ಮಾನ್ವಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button