ಪರೀಕ್ಷಾ ಶುಲ್ಕವನ್ನು ಕಡಿಮೆ ಮಾಡಬೇಕು ಮತ್ತು ದಿನಾಂಕವನ್ನು ಮೂಂದೂಡಲು ಎಸ್.ಎಫ್.ಐ ಒತ್ತಾಯ.
ಹೊಸಪೇಟೆ ಫೆಬ್ರುವರಿ. 24

ಹೊಸಪೇಟೆಯ ಶ್ರೀ ಶಂಕರ್ ಆನಂದ್ ಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾರತ ವಿದ್ಯಾರ್ಥಿ ಫೆಡರೇಷನ್ (SFI) ಹೊಸಪೇಟೆ ತಾಲೂಕಾ ಸಮಿತಿಯು ಕಾಲೇಜಿನ ಪ್ರಾಂಶುಪಾಲರ ಮೂಲಕ ವಿಎಸ್ ಕೆ ಯು ಬಿ ಕುಲ ಸಚಿವರಿಗೆ ಪರೀಕ್ಷಾ ಶುಲ್ಕವನ್ನು ಕಡಿಮೆ ಮಾಡಬೇಕು ಮತ್ತು ದಿನಾಂಕವನ್ನು ಮುಂದೂಡಬೇಕು ಎಂದು ಒತ್ತಾಯಿಸಿದರುಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಅಧ್ಯಕ್ಷ ದೊಡ್ಡಬಸವರಾಜರಾಜ್ಯದ ಇತರ ಭಾಗಗಳಿಗೆ ಹೋಲಿಕೆ ಮಾಡಿದರೆ ,ಕಲ್ಯಾಣ ಕರ್ನಾಟಕ ಭಾಗದಲ್ಲಿ ಉನ್ನತ ಶಿಕ್ಷಣ ಕಲಿಯುವವರ ಸಂಖ್ಯೆ ತುಂಬಾ ವಿರಳ ಇರುವ ಕಾರಣ ಏನೆಂದರೆ ಈ ಭಾಗದ ಜನರ ಆರ್ಥಿಕವಾಗಿ ತುಂಬಾ ಬಡವರು ಹಾಗೂ ಕಡುಬಡವರು ಇರುತ್ತಾರೆ ಬಡತನ ದಿಂದ ಅನೇಕ ವಿದ್ಯಾರ್ಥಿಗಳು ಪದವಿ ಕೋರ್ಸ್ನ್ನು ಅರ್ಧಕ್ಕೆ ಬಿಟ್ಟು ಬೆಂಗಳೂರು, ಮಂಗಳೂರಿನಂತಹ ನಗರಕ್ಕೆ ದುಡಿಯಲು ಹೋದ ಉದಾಹರಣೆ ಸಾಕಷ್ಟು ಇವೆ. ಇಂತಹ ಕಠಿಣ ಪರಿಸ್ಥಿತಿಯಲ್ಲಿ ಬರಗಾಲದ ಸಮಯದಲ್ಲಿ ಮನೆಯಲ್ಲಿ ಹಣ ಕೊಡದಿದ್ದರೂ ಓದುಬೇಕೆಂಬ ಹಂಬಲದಿಂದಾಗಿ ವಿದ್ಯಾರ್ಥಿಗಳಾದ ನಾವುಗಳು ಪದವಿ ದಾಖಲಾತಿ ಮಾಡಿಸಿದ್ದವೆ. ಆದರೆ ಕಳೆದ ಎರಡು ವರ್ಷದ ಹಿಂದೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ 150 ರೂಪಾಯಿ ಮತ್ತು 250 ರೂಪಾಯಿ ಮಾತ್ರ ಇದ್ದ ಪರೀಕ್ಷೆ ಶುಲ್ಕ ಆದರೆ ಎರಡು ವರ್ಷದಲ್ಲಿ ದಿಢೀರನೇ 12,00 ಹಾಗೂ ರೂಪಾಯಿ ಆಗಲು ಹೇಗೆ ಸಾಧ್ಯ? ಪರೀಕ್ಷೆ ಶುಲ್ಕ ಹಣ ಹೆಚ್ಚಳ ಮಾಡಿರವುದನ್ನು ಕೂಡಲೇ ವಾಪಾಸ್ ಪಡೆದು ನೇರವಾಗಿ ಸಮಾಜ ಕಲ್ಯಾಣ ಇಲಾಖೆ, BCM ಇಲಾಖೆಯಿಂದ ಬರಿಸಿಕೊಳ್ಳಬೇಕು ಎಂದರು. SFI ರಾಜ್ಯ ಸಮಿತಿ ಸದ್ಯಸರದಾ, ಶಿವರೆಡ್ಡಿ ಅವರು ಮಾತನಾಡಿ, ಕಳೆದ ಎರಡು ವರ್ಷದ ಹಿಂದೆ ಎಷ್ಟು ಶುಲ್ಕ ಇತ್ತು ಅಷ್ಟು ಮಾತ್ರ ತೆಗೆದು ಕೊಳ್ಳಬೇಕು. ಎಂದು ವಿದ್ಯಾರ್ಥಿಗಳ ಪರವಾಗಿ ಒತ್ತಾಯಿಸಿದರು , ಹಳೆಯ ಶುಲ್ಕವನ್ನು ಮುಂದುವರಿಸದೇ ಇದ್ದ ಸಂದರ್ಭದಲ್ಲಿ ನೂರಾರು ವಿದ್ಯಾರ್ಥಿಗಳು ವಿಶ್ವವಿದ್ಯಾಲಯಕ್ಕೆ ಮುತ್ತಿಗೆ ಹಾಕುವ ಸಂದರ್ಭವನ್ನು ಸೃಷ್ಟಿಸ ಬಾರದೆಂದು ಈ ಮೂಲಕ ಒತ್ತಾಯಿಸಿದರು.ಈ ಸಂದರ್ಭದಲ್ಲಿ ತಾಲೂಕು ಪದಾಧಿಕಾರಿಗಳಾದ ಲೋಕೇಶ್ ತಾಲೂಕು ಸದಸ್ಯರಾದ ಅರ್ಜುನ್, ನವೀನ್, ಲಕ್ಷೀಮಿ, ಗಂಗಮ್ಮ, ಕವಿತ, ರಾಜೀವ, ಉದಯ್, ಸೇರಿದಂತೆ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ತಾಲೂಕ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಮಾಲತೇಶ್.ಶೆಟ್ಟರ್.ಹೊಸಪೇಟೆ