ಮತದಾನ ಜಾಗೃತಿಗೆ ಸಹಿ ಸಂಗ್ರಹ ಅಭಿಯಾನ.
ಕೂಡ್ಲಿಗಿ ಏಪ್ರಿಲ್.03

ಉತ್ತಮ ಸಮಾಜಕ್ಕಾಗಿ ಯುವ ಮತದಾರರು ಕಡ್ಡಾಯವಾಗಿ ಮತ ಚಲಾಯಿಸುವುದನ್ನು ಮರೆಯಬಾರದು ಎಂದು ತಾಲೂಕು ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ವೈ ರವಿಕುಮಾರ್ ಹೇಳಿದರು. ಸಮೀಪದ ಆಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾನಾಮಡಗು ಗ್ರಾಮದ ಶ್ರೀ ಶರಣ ಬಸವೇಶ್ವರ ಶಿಕ್ಷಣ ತರಬೇತಿ ಸಂಸ್ಥೆಯದಲ್ಲಿ ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿ ತಾಲೂಕು ಸ್ವೀಪ್ ಸಮಿತಿ ಆಶ್ರಯದಲ್ಲಿ ಲೋಕಸಭಾ ಚುನಾವಣೆ ಪ್ರಯುಕ್ತ ಹಮ್ಮಿಕೊಂಡಿದ್ದ ಮತದಾರರ ಸಹಿ ಸಂಗ್ರಹಣಾ ಅಭಿಯಾನ ಹಾಗೂ ಮತದಾನ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕರ್ನಾಟಕ ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಮೇ 7 ರಂದು ನಡೆಯುವ ಚುನಾವಣೆಗಳಲ್ಲಿ ಮತದಾರರ ಪಟ್ಟಿಯಲ್ಲಿರುವ ಎಲ್ಲ ಮತದಾರರು ತಮ್ಮ ಮತ ಚಲಾಯಿಸಬೇಕು. ಯಾವುದೇ ಮತದಾರ ತನ್ನ ಮತ ಚಲಾವಣೆಯಿಂದ ಹೊರಗುಳಿಯ ಬಾರದು. ಮತದಾನ ಪ್ರತಿಯೊಬ್ಬ ಭಾರತಿಯನ ಸಂವಿಧಾನಾತ್ಮಕ ಹಕ್ಕು ಅದನ್ನು ಚಲಾಯಿಸುವಂತೆ ಮತದಾರರಲ್ಲಿ ಜಾಗೃತಿಯನ್ನು ಮೂಡಿಸಿದರು. ಈ ಸಂದರ್ಭದಲ್ಲಿ ಆಲೂರು ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಮಂಜುನಾಥ, ಐಇಸಿ ಸಂಯೋಜಕ ಬಿ.ವಿನಯಕುಮಾರ್, ಬಿಲ್ ಕಲೆಕ್ಟರ್ ಕೆ.ಜಿ.ನಾಗರಾಜ, ಶಶಿಕುಮಾರ್, ಅನಂತ ಸೇರಿದಂತೆ ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಗ್ರಾಮ ಪಂಚಾಯಿತಿಯ ಸದಸ್ಯರು ಉಪನ್ಯಾಸಕರು ಉಪಸ್ಥಿತರಿದ್ದರು.
ಹೋಬಳಿ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಕೆ.ಎಸ್.ವೀರೇಶ್.ಕಾನಾ ಹೊಸಹಳ್ಳಿ.