ಪಟ್ಟಣದ ನೇತಾಜಿ ಶಿಕ್ಷಣ ಸಂಸ್ಥೆಗೆ – ಬೆಳ್ಳಿ ಹಬ್ಬದ ಸಂಭ್ರಮ.
ಮಾನ್ವಿ ಜ.31

ಶಿಕ್ಷಣ ಅನ್ನೋದು ಜ್ಞಾನವಿದ್ದಂತೆ ಅದೆ ಜ್ಞಾನ ನಮ್ಮಲ್ಲಿ ಪರಿ ಪೂರ್ಣವಾಗಿದ್ದರೆ ಪವರ್ ಇದ್ದಂತೆ ಎಂದು ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ತಿಳಿಸಿದರು.

ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿರುವ ನೇತಾಜಿ ಶಿಕ್ಷಣ ಸಂಸ್ಥೆಯ ಬೆಳ್ಳಿ ಹಬ್ಬದ ಸಂಭ್ರಮವನ್ನು ಉದ್ಘಾಟಿಸಿ ಮಾತನಾಡಿ, ಮಾನ್ವಿ ಪಟ್ಟಣದ ನೇತಾಜಿ ಶಿಕ್ಷಣ ಸಂಸ್ಥೆಯು ಕಳೆದ 25 ವರ್ಷದಿಂದ ಸಾವಿರಾರು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿದ ಹಿನ್ನೆಲೆಯಲ್ಲಿ ಇಲ್ಲಿಯೇ ಜ್ಞಾನ ಪಡೆದಿರುವವರು ನಾನಾ ಕ್ಷೇತ್ರದಲ್ಲಿದ್ದು ಸೇವೆ ಸಲ್ಲಿಸುತ್ತಿದ್ದಾರೆಂದರೆ ಕೆ.ಈ ನರಸಿಂಹರವರ ಸಾಧನೆ ಎಂದರು.
ಈ ಸಂಸ್ಥೆಯಲ್ಲಿ ಕಲಿತು ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಮುಗಿಸಿ ಹೊರ ಹೋದ 2 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿರುವ ಸಂಭ್ರಮ ನೋಡಿದರೆ ನಾನು ಶಿಕ್ಷಣ ಪಡೆದ ಕಾಲೇಜಿನ ನೆನಪುಗಳು ಮರುಕಳಿಸುತ್ತವೆ ಎಂದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್.ಭಾಷಾ.ನಕ್ಕುಂದಿ.ಮಾನ್ವಿ