ಪುಣ್ಯ ಕ್ಷೇತ್ರಗಳಿಗೆ ಬಸ್ ಸಂಚಾರ ಪ್ರಾರಂಭಿಸುವಂತೆ – ಜಯ ಕರ್ನಾಟಕ ರಕ್ಷಣಾ ಸೇನೆಯಿಂದ ಆಗ್ರಹ.

ಮಾನ್ವಿ ಜ.31

ಡಿಪೋದಿಂದ ಇತರೆ ಜಿಲ್ಲೆಗೆ ಹಾಗು ಪುಣ್ಯ ಕ್ಷೇತ್ರಗಳಿಗೆ ಬಸ್ ಬಿಡುವ ವ್ಯವಸ್ಥೆ ಮಾಡಬೇಕು. ಇದರಿಂದ ಪ್ರಯಾಣಿಕರಿಗೆ ಹಾಗು ಭಕ್ತರಿಗೆ ಅನುಕೂಲವಾಗಲಿದೆ ಎಂದು ಜಯ ಕರ್ನಾಟಕ ರಕ್ಷಣಾ ಸೇನೆ ಪದಾಧಿಕಾರಿಗಳು ಘಟಕ ವ್ಯವಸ್ಥಾಪಕ ಎಂ. ನಾಗರಾಜರಿಗೆ ಮನವಿ ಸಲ್ಲಿಸಿ ಆಗ್ರಹಿಸಿದರು.

ಜಯ ಕರ್ನಾಟಕ ರಕ್ಷಣಾ ಸೇನೆಯ ತಾ.ಅಧ್ಯಕ್ಷ ರಾಜಾ ವಿಜಯಕುಮಾರ ನಾಯಕ ಮಾತನಾಡಿ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಜನರಿಗೆ ಮಾನ್ವಿ ಸಾರಿಗೆ ಘಟಕದಿಂದ ನೇರವಾಗಿ ರಾಜ್ಯ ಹಾಗೂ ಅಂತರ ರಾಜ್ಯಗಳಲ್ಲಿನ ಪುಣ್ಯ ಕ್ಷೇತ್ರಗಳಾದ ಮಂತ್ರಾಲಯ, ಶ್ರೀಶೈಲ, ದೇವಲ ಗಾಣಗಾಪೂರಕ್ಕೆ ತೆರಳುವುದಕ್ಕೆ ಬಸ್ ಸಾರಿಗೆ ಇಲ್ಲದೆ ಇರುವುದರಿಂದ ತೊಂದರೆಯಾಗಿದೆ ಎಂದು ಕಿಡಿ ಕಾರಿದರು.

ತಾಲೂಕಿನ ಗ್ರಾಮಗಳಲ್ಲಿ ಬಸ್ ವ್ಯವಸ್ಥೆ ಇಲ್ಲದೆ ಕಾರಣ ಗ್ರಾಮೀಣ ಜನರ ಬದುಕಿಗೆ ಹಾಗು ವಿದ್ಯಾರ್ಥಿಗಳು ಶಿಕ್ಷಣ ಪಡೆಯುವುದಕ್ಕೆ ತೊಂದರೆಯಾಗಿದೆ. ನಮ್ಮ ಮನವಿಯನ್ನು ಆಲಿಸಿ ಬಸ್ ಬಿಡಬೇಕು ಒಂದು ವೇಳೆ ನಿರ್ಲಕ್ಷ್ಯ ತೋರಿದ್ದೇ ಆದಲ್ಲಿ ನಮ್ಮ ಸಂಘಟನೆ ವತಿಯಿಂದ ಉಗ್ರವಾಗಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್.ಭಾಷಾ.ನಕ್ಕುಂದಿ.ಮಾನ್ವಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button