ಶ್ರೀ ಪೂರಾ ನಾಯ್ಕ್ ಆಂಗ್ಲ ಮಾಧ್ಯಮ ಶಾಲೆಯ ಕಡದರಲ್ ದಲ್ಲಿ ಸೇವಾಲಾಲ್ ಮಹಾ ರಾಜರ 286 ನೇ. ಜಯಂತೋತ್ಸವ ಆಚರಣೆ.

ಗೆದ್ದಲಮರಿ ಫೆ.15

ಶ್ರೀ ಪೂರಾ ನಾಯ್ಕ್ ಆಂಗ್ಲ ಮಾಧ್ಯಮ ಶಾಲೆಯ ಕಡದರಲ್ ಕ್ರಾಸ್ ಗೆದ್ದಲಮರಿಯಲ್ಲಿ ಬಂಜಾರ ಸಮುದಾಯದವರ ಏಳಿಗೆಗಾಗಿ ತಮ್ಮ ಇಡೀ ಜೀವನವನ್ನೇ ಮೀಸಲಿಟ್ಟಿದ್ದ ಸಂತ ಸೇವಾಲಾಲ್ ಮಹಾರಾಜರ 286 ನೇ. ಜಯಂತೋತ್ಸವ ದಂದು ಅವರಿಗೆ ಗೌರವ ಪೂರ್ವಕ ನಮನಗಳನ್ನು ಸಲ್ಲಿಸುತ್ತಾ. 18 ನೇ. ಶತಮಾನದಲ್ಲಿ ಬಂಜಾರ ಸಮುದಾಯವನ್ನು ಸಂಘಟಿಸಿ, ಅದಕ್ಕೆ ಸಾಮಾಜಿಕ, ಆರ್ಥಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಸ್ವರೂಪ ನೀಡಿ ಶ್ರಮಿಸಿದ ಸೇವಾಲಾಲರ ತತ್ವಾದರ್ಶಗಳು ಇಂದಿಗೂ ನಮ್ಮೆಲ್ಲರಿಗೆ ಮಾದರಿಯಾಗಿವೆ. ಹಾಗೂ ಭರತ ಖಂಡದ ಧಾರ್ಮಿಕ ರಾಯಭಾರಿ ಎಂದು ಹೆಸರಾದ ಸಂತ ಸೇವಾಲಾಲ್ ಮಹಾರಾಜರು ಹಲವು ಪವಾಡಗಳ ಮೂಲಕ ಜನರ ಮನ ಗೆದ್ದವರು. ತಮ್ಮ ಲೀಲೆಗಳನ್ನು ಪ್ರದರ್ಶನ ಮಾಡುತ್ತಾ ಜನದಂಬೆಯ ಆರಾಧಕರಾಗಿ ಇಡೀ ಜೀವ ಮಾನದುದ್ದಕ್ಕೂ ಬ್ರಹ್ಮಚರ್ಯವನ್ನೇ ಪಾಲನೆ ಮಾಡಿದ ಸಂತ ಸೇವಾಲಾಲ್ ಇಂದಿಗೂ ಜನ ಮಾನಸದಲ್ಲಿ ಗುರುವಿನ ಸ್ಥಾನವನ್ನು ಪಡೆದಿದ್ದಾರೆ ಎಂದು ಶಾಲೆಯ ಅಧ್ಯಕ್ಷರಾದ ನಾಗೇಶ್ ನಾಯ್ಕ ವಿದ್ಯಾರ್ಥಿಗಳಿಗೆ ತಿಳಿಸಿದರು.

ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಲಗಪ್ಪ. ನಂದಪ್ಪ.ಹರಿಜನ.ರಾಜವಳ.ಹುಣಸಗಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button