ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದ ನಾಯಿ ರಕ್ಷಿಸಿದ – ಅಗ್ನಿ ಶಾಮಕ ದಳದ ಸಿಬ್ಬಂದಿ ವರ್ಗದವರು.
ನಂದಿ ಸ.04

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗ್ರಾಮದ ರಸ್ತೆ ಪಕ್ಕದಲ್ಲಿರುವ ಸಣ್ಣಪ್ಪ ಎಂಬುವರ ಹೊಲದಲ್ಲಿಯ ಬಾವಿಯೊಂದರಲ್ಲಿ ನಾಯಿಯು ಅಂದಾಜು 60×40 ಅಡಿ ವಿಸ್ತಾರವಾದ 40 ಅಡಿ ಆಳದ ತೆರೆದ ನೀರಿರುವ ಬಾವಿಯಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ನಾಯಿ ಬಿದ್ದಿದ್ದು, ಸದರಿ ಸ್ಥಳೀಯ ನಿವಾಸಿಗಳು ಘಟನೆಯ ವಿಷಯವನ್ನು ಚಿಕ್ಕಬಳ್ಳಾಪುರ ಅಗ್ನಿಶಾಮಕ ಠಾಣೆ ನಿಯಂತ್ರಣ ಕೊಠಡಿಗೆ ದೂರವಾಣಿಗೆ ಕರೆ ಮಾಡಿ ಗಣೇಶ್ ರವರು ತಿಳಿಸಿದರು. ಕರೆ ಬಂದ ತಕ್ಷಣ ವಾಹನದೊಂದಿಗೆ ಅಗ್ನಿಶಾಮಕ ತಂಡ ಸ್ಥಳಕ್ಕೆ ದೌಡಾಯಿಸಿ ಕಾರ್ಯ ಪ್ರವೃತ್ತರಾಗಿ ಅಂಧಾಜು ಸುಮಾರು 40 ಅಡಿ ಆಳದ ಬಾವಿಯಲ್ಲಿ ಹಗ್ಗಗಳ ಸಹಾಯದಿಂದ ಕೆಳಗಿಳಿದು ಸುಮಾರು 01:00 ಒಂದು ಘಂಟೆಗಳ ಕಾಲ ಶ್ರಮ ವಹಿಸಿ ಸಿಬ್ಬಂದಿಯವರು ಕಟ್ಟಿಗೆ ಹಾಗೂ ಹಗ್ಗಗಳ ಸಹಾಯದಿಂದ ಪ್ರಾಣ ರಕ್ಷಣೆಗಾಗಿ ಕೂಗುತ್ತಿದ್ದ ನಾಯಿಯನ್ನು ಜೀವಂತವಾಗಿ ಅಗ್ನಿಶಾಮಕ ಇಲಾಖೆಯ ತಂಡ ರಕ್ಷಣೆ ಮಾಡಿರುತ್ತಾರೆ.

ಈ ಸಮಯ ಪ್ರಜ್ಞೆ ಕಾರ್ಯವನ್ನು ವೀಕ್ಷಿಸಿದ ನಂದಿ ಗ್ರಾಮದ ಸ್ಥಳೀಯ ನಿವಾಸಿಗಳು ಅಗ್ನಿಶಾಮಕ ತಂಡದ ಕಾರ್ಯ ದಕ್ಷತೆಯನ್ನು ಮೆಚ್ಚಿ ಶ್ಲಾಘಿಸಿ ಹಾಗೂ ಹಸ್ತಲಾಘವ ಮಾಡಿ ನಾಯಿಯ ಪ್ರಾಣ ರಕ್ಷಣೆ ಮಾಡಿದ್ದಕ್ಕಾಗಿ ಅಭಿನಂದನೆ ಸಲ್ಲಿಸಿದರು.ಪ್ರಮುಖ ಅಗ್ನಿಶಾಮಕ ದಳದ ಶ್ರೀನಿವಾಸ ಫಿ.ಆರ್ ರವರ ನೇತ್ರತ್ವದಲ್ಲಿ, ರವೀಂದ್ರ ಸಂಗಮ, ನಾಗಪ್ಪ ಶಿವಾಪುರ, ರವಿಚಂದ್ರ ಬಾನೋಶಿ ಮಲ್ಲಿಕಾರ್ಜುನ ಕಾಡಪ್ಪನವರ ಹಾಗೂ ಸುರೇಶ್ ನಾಯಕ್ ಭಾಗವಹಿಸಿದ್ದರು.