ಜೆಜೆಎಂ ಕಾಮಗಾರಿ ನೆಪದಲ್ಲಿ ಮಾನ್ವಿ ತಾಲೂಕಿನ – ನಕ್ಕುಂದಿ ಗ್ರಾಮದ ರಸ್ತೆ ಹಾಳು.
ನಕ್ಕುಂದಿ ಫೆ.15

ಅಂಗೈ ಹುಣ್ಣಿಗೆ ಸಾಕ್ಷೀ ಬೇಕಾ…..?
ಕೇಂದ್ರ ಹಾಗೂ ರಾಜ್ಯ ಸರಕಾರ ಗ್ರಾಮದ ಪ್ರತಿಯೊಂದು ಮನೆ ಮನೆಗೆ ನಲ್ಲಿಗಳ ಮೂಲಕ ನೀರು ತಲುಪಬೇಕೆಂದು ಜೆಜೆಎಂ ಯೋಜನೆಯನ್ನು ಜಾರಿಗೆ ತಂದಿದೆ. ಆದರೆ ಮಾನ್ವಿ ತಾಲೂಕಿನ ನಕ್ಕುಂದಿ ಗ್ರಾಮದಲ್ಲಿ 1 ಕೋಟಿ 14 ಲಕ್ಷ ರೂಪಾಯಿ ವೆಚ್ಚದಲ್ಲಿ ನಡೆದ ಜೆಜೆಎಂ ಕಾಮಗಾರಿ ಪ್ಲಾಫ್ ಆಗಿದ್ದು, ಜನರು ರೋಸಿ ಹೋಗಿದ್ದಾರೆ.
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ನಕ್ಕುಂದಿ ಗ್ರಾಮದಲ್ಲಿ ಜೆಜೆಎಂ ಕಾಮಗಾರಿ ಮಾಡಲು ಎಂ.ಸೈಯದ್ ಯಾಸಿನ್ ಗೌಡ ಗುತ್ತಿಗೆ ಪಡೆದು ನಲ್ಲಿಗಳಿಗೆ ನೀರು ಸರಬರಾಜು ಮಾಡದೆ ಬೇಕಾ ಬಿಟ್ಟಿಯಾಗಿ ರಸ್ತೆ ಅಗೆದು ತಗ್ಗು ಗುಂಡಿಗಳನ್ನು ಮುಚ್ಚದೆ ಹಾಗೆ ಬಿಟ್ಟಿದ್ದರಿಂದ ಜನರು ಬಿದ್ದು ಕೈ ಕಾಲು ಮುರಿದು ಕೊಂಡಿದ್ದಾರೆ.
ಕುಡಿಯುವ ನೀರು ಸರಬರಾಜು ಇಲಾಖೆ ಎಇಇ ಸತೀಶ್ ಕುಮಾರ್ ಹಾಗೂ ಸಹಾಯಕ ಎಂಜಿನಿಯರ್ ರವಿ ಗುತ್ತಿಗೆದಾರರ ಜೊತೆ ಶಾಮೀಲಾಗಿ ಕಾಮಗಾರಿ ಪೂರ್ಣ ಗೊಳಿಸದೆ ಗುಣಮಟ್ಟದ ರಸ್ತೆಗಳನ್ನು ಅಗೆದು ಸರಕಾರದ ಮಾನದಂಡಗಳನ್ನೇ ಉಲ್ಲಂಘನೆ ಮಾಡಿದ್ದಾರೆಂದು ಗ್ರಾಮಸ್ಥರ ಆರೋಪವಾಗಿದೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್.ಭಾಷಾ.ನಕ್ಕುಂದಿ.ಮಾನ್ವಿ