ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಳಕು ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ – ಕಾರ್ಯಕ್ರಮ ಜರಗಿತು.
ಚಿಕ್ಕಮ್ಮನಹಳ್ಳಿ ಫೆ.17

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಚಿಕ್ಕಮ್ಮನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಳಕು ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬವನ್ನು ಹಮ್ಮಿಕೊಳ್ಳಲಾಗಿತ್ತು.ಈ ಕಾರ್ಯಕ್ರಮದಲ್ಲಿ ಸಿ.ಆರ್.ಪಿ ಟಿ.ವಿ ತಿಪ್ಪೇಸ್ವಾಮಿ ರವರು ಪ್ರಾಸ್ಥಾವಿಕವಾಗಿ ಮಾತನಾಡಿ 7 ಕಾರ್ನರ್ ಗಳ ಬಗ್ಗೆ ಅತ್ಯಂತ ವಿಸ್ತಾರವಾಗಿ ತಿಳಿಸಿದರು. ನಂತರ ಚಳ್ಳಕೆರೆ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಸುರೇಶ್ ಕೆ.ಎಸ್ ರವರು ಕಲಿಕಾ ಹಬ್ಬ ಮಕ್ಕಳ ಕಲಿಕೆಗೆ ಪ್ರೇರಣೆಯಾಗಿದೆ ಇದು ಮಕ್ಕಳ ಸರ್ವೊತೊಮುಖ ಅಭಿವೃದ್ದಿಗೆ ಪೂರಕವಾಗಿದೆ ಎಂದು ಸಂತಸವನ್ನು ವ್ಯಕ್ತಪಡಿಸಿದರು.

ಮುಖ್ಯ ಶಿಕ್ಷಕರು ಆದ ಶ್ರೀ ಜಗನ್ನಾಥ.ಕೆ ಎಚ್ ರವರು ಮಾತನಾಡಿ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ಜೊತೆಗೆ ಸಹ ಪಠ್ಯ ಚಟುವಟಿಕೆಗಳಿಗೆ ಆದ್ಯತೆ ನೀಡಬೇಕು ಉತ್ತಮ ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ತುಂಬಾ ಸಹಕಾರಿ ಎಂದು ಆಶಯ ವ್ಯಕ್ತಪಡಿಸಿದರು.

ನಂತರ ಎಲ್ಲಾ ತಳಕು ಕ್ಲಸ್ಟರ್ ಮುಖ್ಯ ಶಿಕ್ಷಕರು ಹಾಗೂ ಮಕ್ಕಳು ಆಗಮಿಸಿ ಕಾರ್ಯಕ್ರಮಕ್ಕೇ ಮೆರಗು ನೀಡಿದರು, ತೀರ್ಪುಗಾರರಾಗಿ ಮಲ್ಲಮ್ಮ, ತಿಪ್ಪಿರಮ್ಮ ,ಮಮತಾ, ಲಕ್ಷ್ಮೀದೇವಿ, ತ್ರಿವೇಣಿ, ಶಶಿಕಲಾ ,ನವೀನ್ ಕುಮಾರ್, ತಿಮ್ಮಣ್ಣ, ರಾಜು ಹಾಗೂ ತಾಲೂಕು ಕ್ಲಸ್ಟರ್ ನ ಪ್ರತಿ ಶಾಲೆಯಿಂದ ಒಬ್ಬ ಶಿಕ್ಷಕರು ಬಂಜಗೆರೆ ಕ್ಲಸ್ಟರ್ ನ ಶಿಕ್ಷಕರು ಹಾಜರಿದ್ದರು.

ಈ ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ತಿಪ್ಪೇಸ್ವಾಮಿ ಸದಸ್ಯರಾದ ಪಾಲಯ್ಯ ಸುಜಾತ ಕೀರ್ತನ ಶಿಲ್ಪಮ್ಮ ಸಿದ್ದಪ್ಪ ಲಕ್ಷ್ಮೀದೇವಿ ತಿಪ್ಪೇಸ್ವಾಮಿ ಹಾಗೂ ಗ್ರಾಮ ಪಂಚಾಯತಿ ಸದಸ್ಯರು ಭಾಗ್ಯಮ್ಮ, ಗೌರಮ್ಮ ಬೋರಣ್ಣ , ಹಾಗೂ ಸಮಸ್ತ ಗ್ರಾಮಸ್ಥರು ಹಾಗೂ ಪೋಷಕರು ಹಾಗೂ ಸಮಸ್ತ ನಾಗರಿಕ ಬಂಧುಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಎಲ್ಲರ ಸಹಕಾರದೊಂದಿಗೆ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ನೆರವೇರಿಸಿದರು.
ವರದಿ:ಕೋಡಿಹಳ್ಳಿ.ಟಿ ಶಿವಮೂರ್ತಿ,ಚಿತ್ರದುರ್ಗ