ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ – ಡಿ.ಎಸ್.ಸ್ ಸಂಪೂರ್ಣ ಬೆಂಬಲ.
ನರಸಿಂಹರಾಜಪುರ ಫೆ.17

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆಗಳು ಮತ್ತು ಬೇಡಿಕೆಗಳ ಈಡೇರಿಕೆಗಾಗಿ ದಿನಾಂಕ 10-2-2025 ರಿಂದ ಎರಡನೇ ಹಂತದ ಅನಿರ್ದಿಷ್ಟಾವಧಿ ಮುಷ್ಕರವನ್ನು ನರಸಿಂಹರಾಜಪುರ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರೊ ಬಿ ಕೃಷ್ಣಪ್ಪ ಸ್ಥಾಪಿತ ಸಂಘಟನೆ ಮತ್ತು ಕರ್ನಾಟಕ ದಲಿತ ಮಹಿಳಾ ಒಕ್ಕೂಟ ಸಂಘಟನೆ ಬೆಂಬಲವನ್ನು ಸೂಚಿಸಿದ್ದು.
ರಾಜ್ಯ ಸಂಘಟನಾ ಸಂಚಾಲಕರಾದ ತರೀಕೆರೆ ಎನ್ ವೆಂಕಟೇಶ್, ಜಿಲ್ಲಾ ಸಂಚಾಲಕರಾದ ರಾಜೇಶ್, ಮಹಿಳಾ ಒಕ್ಕೂಟದ ರಾಜ್ಯ ಸಂಘಟನಾ ಸಂಚಾಲಕಿ ಆದ ಶ್ರೀಮತಿ ಎಂ.ವಿ ಭವಾನಿ, ಜಿಲ್ಲಾ ಸಂಘಟನಾ ಸಂಚಾಲಕರಾದ ಅಬ್ದುಲ್ ರಹಮಾನ್ ತಾಲೂಕು ಸಂಘಟನಾ ಸಂಚಾಲಕರಾದ ಸಿದ್ದಪ್ಪ, ರಾಜು ಮೃತ್ಯುಂಜಯ, ಸಿಜು, ಜೈರಾಮ್, ಮಂಜು, ಹೇಮಾವತಿ ಮುಂತಾದವರು ಧರಣಿ ಸ್ಥಳಕ್ಕೆ ತೆರಳಿ ಬೆಂಬಲ ಸೂಚಿಸಿದ್ದು ಗ್ರಾಮ ಲೆಕ್ಕಾಧಿಕಾರಿಗಳ ಬೇಡಿಕೆಗಳ ಕುರಿತು ಸರ್ಕಾರದ ಗಮನಕ್ಕೆ ತರುವುದಾಗಿ ತಿಳಿಸಿದರು. ಇ- ಪೌತಿ ಖಾತೆ ಆಂದೋಲನನ್ನು ಕೈಬಿಡ ಬೇಕೆಂದು ಒತ್ತಾಯಿಸಿ, ಗ್ರಾಮ ಆಡಳಿತ ಅಧಿಕಾರಿಗಳ ವಾರ್ಷಿಕ ವೇತನ ಭತ್ಯೆಯನ್ನು ನೀಡಬೇಕು, ಅಂತರ್ ಜಿಲ್ಲೆ ವರ್ಗಾವಣೆ ನೀಡಬೇಕು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳಿಗೆ ಪ್ರತ್ಯೇಕ ಕಚೇರಿಗಳನ್ನು ನೀಡಬೇಕು, ಲ್ಯಾಪ್ಟಾಪ್, ಪ್ರಿಂಟರ್ಗಳನ್ನು ನೀಡಬೇಕು ಮತ್ತು ಇವರ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಕೊಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿ ಧರಣಿ ಸತ್ಯಾಗ್ರಹ ಮುಂದುವರಿಸಿದ್ದು, ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಕಾರ್ಯದರ್ಶಿಯಾದ ನವೀನ್ ರವರು ಪತ್ರಿಕಾ ಮಾಧ್ಯಮ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್ ಗೆ ತಿಳಿಸಿದ್ದಾರೆ.
ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಎನ್. ವೆಂಕಟೇಶ್.ತರೀಕೆರೆ.ಚಿಕ್ಕಮಗಳೂರು