2024/25 ನೇ. ಸಾಲಿನ ವಾರ್ಷಿಕ ಸ್ನೇಹ ಹಾಗೂ ಪ್ರತಿಭಾ – ಪುರಸ್ಕಾರ ಸಮಾರಂಭ ಜರುಗಿತು.
ಇಳಕಲ್ಲ ಫೆ.22

ಇಲ್ಲಿನ ಶಾಸಕರ ಸರಕಾರಿ ಮಾದರಿ ಪ್ರಾಥಮಿಕ (ಕಂಠಿಯವರ) ಶಾಲೆ ಇಳಕಲ್ಲ ಇದರ 2024-25 ನೇ. ಸಾಲಿನ ವಾರ್ಷಿಕ ಸ್ನೇಹ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಶ್ರೀ ಮ.ನಿ.ಪ್ರ.ಗುರು ಮಹಾಂತ ಸ್ವಾಮಿಗಳು ಹಾಗೂ ಶಿರೂರಿನ ಶ್ರೀ ಬಸವಲಿಂಗ ಸ್ವಾಮಿಗಳು, ದಿವ್ಯ ಸಾನಿಧ್ಯ ವಹಿಸಿದ್ದರು. ಹುನಗುಂದ ಮತ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ವಿಜಯಾನಂದ ಎಸ್ ಕಾಶಪ್ಪನವರ ಅವರು ಪಾಲ್ಗೊಂಡು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯ ಮೂರ್ತಿಗಳಾದ ಶ್ರೀ ಸಂಜೀವ ಕುಮಾರ ಹಂಚಾಟೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಜಾಸ್ಮೀನ ಕಿಲ್ಲೇದಾರ, ಶಾಲಾಭಿವೃದ್ಧಿ ಸಮಿತಿ ಸರ್ವ ಸದಸ್ಯರು, ಮತ್ತು ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷರು ಹಾಗೂ ನಗರ ಸಭೆಯ ಸದಸ್ಯರು, ಶಿಕ್ಷಕರು, ಪಾಲಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು ಎಂದು ವರದಿಯಾಗಿದೆ.
ಜಿಲ್ಲಾ ಮಟ್ಟದ ವಿಶೇಷ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಅಬ್ದುಲ್.ಗಫಾರ್.ತಹಶೀಲ್ದಾರ.ಇಲಕಲ್ಲ.ಬಾಗಲಕೋಟ