ನಿಧನ ವಾರ್ತೆ:ಮಾಳಗಿ ತರಕಾರಿ ನಾರಾಯಣಪ್ಪ ನಿಧನ.
ಕೂಡ್ಲಿಗಿ ಫೆ.22

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕೂಡ್ಲಿಗಿ ಪಟ್ಟಣದ 5 ನೇ ವಾರ್ಡಿನ ನಿವಾಸಿಗಳಾದ ಮಾಳಗಿ ತರಕಾರಿ ನಾರಾಯಣಪ್ಪ (68) ಫೇಬ್ರುವರಿ ಶುಕ್ರವಾರ ರಂದು ಕೊಪ್ಪಳ ಸಾರ್ವಜನಿಕ ಆಸ್ಪತ್ರೆಯಲ್ಲಿ ಅನಾರೋಗ್ಯ ದಿಂದ ಬಳಲುತ್ತಿದ್ದು ನಿನ್ನೆ ದಿನ ನಿಧನರಾಗಿದ್ದಾರೆ. ಅವರು ಕೆಲವೇ ದಿನಗಳಿಂದ, ಅನಾರೋಗ್ಯ ದಿಂದ ಬಳಲುತಿದ್ದರು. ಮೃತರಾದ ನಾರಾಯಣಪ್ಪ ಇವರಿಗೆ ಧರ್ಮ ಪತ್ನಿ ಹಾಗೂ ತಾಯಿ ಮೂರು ಜನ ಹೆಣ್ಣುಮಕ್ಕಳು ಒಬ್ಬ ಪುತ್ರನಿದ್ದು ಆರು ಜನ ಮೊಮ್ಮಕ್ಕಳು ಸೊಸೆಯಂದಿರು ಸೇರಿದಂತೆ. ಅಳಿಯಂದಿರು, ತುಂಬು ಕುಟುಂಬವನ್ನು ಅಪಾರ ಬಂಧು ಬಳಗವನ್ನು ಹೊಂದಿದವರಾಗಿದ್ದರು. ಅಂತ್ಯ ಕ್ರಿಯೆ:- ಫೆಬ್ರವರಿ -22 ರಂದು ಶನಿವಾರ ರಂದು ಸಾಯಂಕಾಲ 4:ಕ್ಕೆ ಕೂಡ್ಲಿಗಿ ಪಟ್ಟಣದ ಕಡೆಯ ಅಂಚಿನಲ್ಲಿರುವ ಶ್ರೀ ರಾಜೀವ್ ಗಾಂಧಿ ನಗರದ ಪಕ್ಕದಲ್ಲಿ ಬರುವ ರುದ್ರ ಭೂಮಿಯಲ್ಲಿ ಅಂತ್ಯ ಕ್ರಿಯೆ ನೆರವೇರಿಸಲಾಗುವುದು. ಸಂತಾಪ:- ಕೂಡ್ಲಿಗಿ, ಪಟ್ಟಣದ ವಾಲ್ಮೀಕಿ ಸಮುದಾಯದ ಮುಖಂಡರುಗಳು, ಸಂಬಂಧಿಕರು ಹಾಗೂ ವಿವಿಧ ಸಮುದಾಯದವರು ಸಮಸ್ತ ಗ್ರಾಮಸ್ಥರು. ದಲಿತ ಸಮುದಾಯದವರು ಸೇರಿದಂತೆ, ವಿವಿಧ ಸಮುದಾಯದವರು. ತಾಲೂಕಿನ ಎಲ್ಲಾ ಸಂಘಟನೆಗಳು ಸೇರಿದಂತೆ ಪತ್ರಕರ್ತರು ರೈತರು ಕಾರ್ಮಿಕರು ಮಹಿಳೆಯರ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು. ಸರ್ವ ಸದಸ್ಯರು. ಶಾಸಕರು ಮೊದಲ್ಗೊಂಡು ತಾಲೂಕಿನ ವಿವಿಧ ಜನ ಪ್ರತಿನಿಧಿಗಳು, ಹಾಗೂ ಗಣ್ಯರು. ಕೂಡ್ಲಿಗಿ ಪಟ್ಟಣದ ಪ್ರಮುಖ ನಾಗರೀಕರು, ಕೂಡ್ಲಿಗಿ ಪಟ್ಟಣ ಸೇರಿದಂತೆ ನೆರೆ ಹೊರೆ ಗ್ರಾಮಸ್ಥರು. ಇವರ ಅಗಲಿಕೆಗೆ, ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ರಾಘವೇಂದ್ರ. ಸಾಲುಮನೆ.ಕೂಡ್ಲಿಗಿ