ಕೂಡಲ ಸಂಗಮದಲ್ಲಿ ಕ್ಯಾಂಡಲ್ ಲೈಟ್ ಮೂಲಕ ಮತದಾನ ಜಾಗೃತಿ.
ಕೂಡಲ ಸಂಗಮ ಮಾರ್ಚ್.31

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲ ಸಂಗಮ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಶ್ರೀ ಕೂಡಲ ಸಂಗಮ ಸಂಜೀವಿನಿ ಒಕ್ಕೂಟದ ವ್ಯಾಪ್ತಿಯಲ್ಲಿ ಬರುವ ಮಹಿಳಾ ಸ್ವ ಸಹಾಯ ಸಂಘದ ಸದಸ್ಯರಿಗೆ ಉದ್ಯೋಗ ಖಾತ್ರಿ ದುಡಿಮೆ ಖಾತ್ರಿ ಅಭಿಯಾನ ಹಾಗೂ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಕಾರ್ಯನಿರ್ವಾಹಕ ಅಧಿಕಾರಿಗಳು ತಾರಾ ಎನ್ ಅವರು, ಕಡ್ಡಾಯ ಮತದಾನ ಹಾಗೂ ಮತದಾನ ಜಾಗೃತಿ ಕುರಿತು ಅರಿವು ಮೂಡಿಸಿದರು. ಸ್ವ ಸಹಾಯ ಸಂಘದ ಸದಸ್ಯರಿಗೆ ಜೊತೆಗೆ ಫಾರ್ಮ್ ನಂ 6 ನೀಡಿ ಕೂಲಿ ಕೆಲಸಕ್ಕೆ ಬರುವಂತೆ ತಿಳಿಸಿದರು.

ಬಳಿಕ ಸಹಾಯಕ ನಿರ್ದೇಶಕ ಮಹಾಂತೇಶ್ ಕೋಟಿ (ಗ್ರಾ.ಉ) ಅವರು ನರೇಗಾ ಕೂಲಿ ಕಾರ್ಮಿಕರಿಗೆ ಸಿಗುತ್ತಿರುವ ಸೌಲಭ್ಯಗಳು ಕುರಿತು ಮಾಹಿತಿ ನೀಡಿ, ಕಡ್ಡಾಯವಾಗಿ ಮತದಾನ ಮಾಡುವಂತೆ ಸೂಚಿಸಿದರು.ಬಳಿಕ ಗ್ರಾಮ ಪಂಚಾಯತಿಯಿಂದ ಬಸವೇಶ್ವರ ವೃತ್ತದವರೆಗೂ ಜಾಥಾ ನಡೆಯಿತು. ಬಳಿಕ ಮಾನವ ಸರಪಳಿ, ಮೇಣದ ಬತ್ತಿ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು, ಬಳಿಕ ಮಾನ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.ಈ ಸಂದರ್ಭದಲ್ಲಿ ಐಇಸಿ ಸಂಯೋಜಕ ಬಸವರಾಜ ಕೊಪ್ಪದ , ತಾಲೂಕ ಕಾರ್ಯಕ್ರಮ ವ್ಯವಸ್ಥಾಪಕ ಕೃಷ್ಣಾಜಿ ಪವಾರ್ , ಡಾಟಾ ಎಂಟ್ರಿ ಆಪರೇಟರ್ ಸುನಿಲ್ ಕುಮಾರ್ , ಬಿಲ್ ಕಲೆಕ್ಟರ್, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.