ಶಾರದಾ ದೇವಿ ಪೂಜೆ ಕಾರ್ಯಕ್ರಮ ಹಾಗೂ – ಬಿಳ್ಕೊಡುಗೆ ಸಮಾರಂಭ.
ಕೆ.ಆರ್ ಪೇಟೆ ಮಾ.18

ಪಟ್ಟಣದ ನಾಗಮಂಗಲ ರಸ್ತೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕಿಯರ ಶಾಲೆಯಲ್ಲಿ ಈ ದಿನ ತಾಯಿ ಶಾರದಾ ದೇವಿಯ ಪೂಜೆ ಹಾಗೂ ಬಿಳ್ಕೊಡುಗೆ ಸಮಾರಂಭವನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಲೋಕೇಶ್.ವಿ ರವರ ಅಧ್ಯಕ್ಷತೆಯಲ್ಲಿ ಶಾರದಾ ದೇವಿಯ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಲಾಯಿತು. ಕಾರ್ಯಕ್ರಮ ಕುರಿತು ಶಾಲಾ ಮುಖ್ಯೋಪಾಧ್ಯಾಯರಾದ ರವಿಕುಮಾರ್ ಮಾತನಾಡಿ ನಮ್ಮ ಶಾಲೆಯಲ್ಲಿ ಸುಮಾರು 9. ವರ್ಷಗಳಿಂದ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಶಾಲೆಯ ಆಗು-ಹೋಗುಗಳ ಬಗ್ಗೆ ಮುತುವರ್ಜಿ ವಹಿಸಿ ನಮಗೆ ನಮ್ಮ ಶಾಲೆಗೆ ತುಂಬಾ ಸಹಕರಿಸಿದ್ದು ನಮಗೆ ಋಷಿಯ ವಿಷಯವಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು. ನಂತರ ಶಾಲೆಯ ಮಕ್ಕಳನ್ನು ಕುರಿತು ಮಾತನಾಡಿದ ಅವರು ಈಗಾಗಲೇ ಪರೀಕ್ಷೆ ಮುಗಿಯುವ ಹಂತದಲ್ಲಿದ್ದು ಮುಂದಿನ ತಿಂಗಳು ಏಳನೇ ತರಗತಿಯ ಮಕ್ಕಳು ಉತ್ತೀರ್ಣರಾಗಿ ಮುಂದಿನ ವಿದ್ಯಾಭ್ಯಾಸಕ್ಕೆ ಹೆಜ್ಜೆ ಇಡುತ್ತಿರುವ ಮಕ್ಕಳಿಗೆ ತಿಳಿವಳಿಕೆಯನ್ನು ನೀಡಿ ಶುಭ ಹಾರೈಸಿದರು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಲೋಕೇಶ್.ವಿ ಮಾತನಾಡಿ ನಾನು ಸತತವಾಗಿ ಮೂರನೇ ಬಾರಿಗೆ ಎಸ್.ಡಿ.ಎಂ.ಸಿ ಅಧ್ಯಕ್ಷರಾಗಿ ಆಯ್ಕೆ ಯಾಗಿದ್ದು ನನಗೆ ಶಾಲೆಯಲ್ಲಿ ಸೇವೆ ಮಾಡಲು ಅವಕಾಶ ಕಲ್ಪಿಸಿ ಕೊಟ್ಟ ಗುರು- ಹಿರಿಯರಿಗೆ ಹಾಗೂ ಎಸ್.ಡಿ.ಎಂ.ಸಿ ಸದಸ್ಯರುಗಳಿಗೆ ಧನ್ಯವಾದಗಳನ್ನು ತಿಳಿಸಿ ಶಾಲೆಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ ಇದ್ದರು ಸಹ ಶಾಲೆಯ ಪರವಾಗಿ ನಾನು ಸಂಪೂರ್ಣ ಸಹಕಾರವಿದೆ ಎಂದು ತಿಳಿಸಿ ಶಾಲೆಗೆ ಮಕ್ಕಳ ದಾಖಲಾತಿಯ ಕಡೆ ಗಮನ ಹರಿಸಿ ಎಂದು ತಿಳಿಸಿದರು.ಬಿಳ್ಕೋಡುಗೆ ಸಮಾರಂಭ-ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕಿಯರ ಶಾಲೆಯಲ್ಲಿ ಆಯೋಜಿಸಿದ್ದ ಶಾರದಾ ಪೂಜೆ ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಲೋಕೇಶ್.ವಿ ಸುಮಾರು 9 ವರ್ಷಗಳಿಂದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು ತಮ್ಮ ಅವಧಿ ಶಾಲೆಯಲ್ಲಿ ಸೇವೆ ಮುಗಿದ ಹಿನ್ನಲೆಯಲ್ಲಿ ಸಲ್ಲಿಸಿದ ಹಿರಿಯ ಶಿಕ್ಷಕರು.ಆತಿಥಿ ಶಿಕ್ಷಕರು. ಅಂಗನವಾಡಿ ಶಿಕ್ಷಕರು ಹಾಗೂ ಅಡುಗೆ ಸಿಬ್ಬಂದಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಲೋಕೇಶ್.ವಿ ಶಾಲಾ ಮುಖ್ಯೋಪಾಧ್ಯಾಯರಾದ ರವಿಕುಮಾರ್, ಶಿಕ್ಷಕರಾದ ಕಾಂತಮ್ಮ, ಮಹೇಶ್, ಸುಮಲತಾ ಅಂಗನವಾಡಿ ಶಿಕ್ಷಕಿ ವರಲಕ್ಷ್ಮೀ, ಅಡುಗೆ ಸಿಬ್ಬಂದಿಗಳು ಎಸ್.ಡಿ.ಎಂ.ಸಿ ಸದಸ್ಯರು, ಪತ್ರಕರ್ತರಾದ ಎಸ್.ರವಿ ಹೊನ್ನೇನಹಳ್ಳಿ, ಮಾಕವಳ್ಳಿ ರಂಗನಾಥ್ ಸೇರಿದಂತೆ ಶಾಲೆಯ ಮಕ್ಕಳು ಭಾಗವಹಿಸಿದ್ದರು.
ತಾಲ್ಲೂಕು ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್. ಕೆ ನ್ಯೂಸ್ ಕನ್ನಡ ಚಾನಲ್: ಗೋವಿಂದರಾಜು.ಕೆ.ಕೂಡಲಕುಪ್ಪೆ ಕೆ.ಆರ್ ಪೇಟೆ