ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆಗೆ ಬಸ್ ಹಾಯುವುದರಿಂದ ತಪ್ಪಿಸಲು ಹೋಗಿ – ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಗೆದ್ದಲಮರಿ ಮಾ.20

ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿ ಇಬ್ಬರಿಗೆ ಗಾಯ. ಮುದ್ದೇಬಿಹಾಳ ದಿಂದ ಬಾಗಲಕೋಟೆಗೆ ತೆರಳುತ್ತಿದ್ದ ಬಸ್ ಪಲ್ಟಿ ಆಗಿರುವ ಘಟನೆ ತಾಲೂಕಿನ ಗೆದ್ದಲಮರಿ ತಾಂಡಾ ಬಳಿ ಬುಧವಾರ ನಡೆದಿದೆ ಬಸ್ ಬಾಗಲಕೋಟ ಘಟಕಕ್ಕೆ ಸೇರಿದೆ. ಈ ಬಸ್ಸಿನಲ್ಲಿ ಐವರು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಅದರಲ್ಲಿ ದೇವುರ ಗ್ರಾಮದ ಈರಮ್ಮ ಕಂಬಾರ್ 42. ಸಂಗೀತ ಕಂಬಾರ್ 26. ಅವರಿಗೆ ಗಂಭೀರವಾದ ಗಾಯಗಳಾಗಿದ್ದು ಮುದ್ದೇಬಿಹಾಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಬಾಗಲಕೋಟ ಆಸ್ಪತ್ರೆಗೆ ಕಳಿಸಲಾಗಿದೆ. ಚಾಲಕ ನಿರ್ವಾಹಕರಿಗೂ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯ ಕುರಿತು ಮಾಹಿತಿ ನೀಡಿದ ಪಿ.ಎಸ್.ಐ ಸಂಜಯ್ ತಿಪ್ಪಾರೆಡ್ಡಿ ಸಾರಿಗೆ ಘಟಕ ವ್ಯವಸ್ಥಾಪಕ ಎ.ಎಚ್ ಮದಬಾವಿ ಬಸ್ ಚಾಲಕ ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆಗೆ ಬಸ್ ಹಾಯುವುದರಿಂದ ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ಮಾಹಿತಿ ನೀಡಿದ್ದಾರೆ ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಬಸವರಾಜ.ಸಂಕನಾಳ.ಮುದ್ದೇಬಿಹಾಳ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button