ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕ ಜನಪರ ಹೋರಾಟಗಾರ – ಡಾಲುರವಿ ಹುಟ್ಟು ಹಬ್ಬದ ಸಂಭ್ರಮ.
ಕೆ.ಆರ್ ಪೇಟೆ ಮಾ.20

ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾತೃಭೂಮಿ ವೃದ್ಧಾಶ್ರಮದಲ್ಲಿ ವೃದ್ದ ರೊಂದಿಗೆ ಹುಟ್ಟು ಹಬ್ಬ ಆಚರಣೆ ಹಾಗೂ ದೇವಾಲಯಗಳಲ್ಲಿ ಅಭಿಮಾನಿಗಳಿಂದ ವಿಶೇಷ ಪೂಜೆ, ಅಭಿನಂದನೆಯ ಮಹಾಪೂರ ಹರಿದು ಬಂದ ಅಭಿಮಾನಿ ಸಾಗರ. ಮಂಡ್ಯ ಮನ್ಮುಲ್ ನಿರ್ದೇಶಕರ ಚುನಾವಣೆಯಲ್ಲಿ ಗೆದ್ದು ಇತಿಹಾಸ ನಿರ್ಮಿಸಿರುವ ಯುವ ನಾಯಕ, ಜನಪರ ಹೋರಾಟಗಾರ ಡಾಲು ರವಿ ಅವರ ಹುಟ್ಟು ಹಬ್ಬವು ಅರ್ಥ ಪೂರ್ಣವಾಗಿ ನಡೆಯಿತು. ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಹಾಲು ಉತ್ಪಾದಕಾರ ಸಹಕಾರ ಸಂಘಗಳ ಅಧ್ಯಕ್ಷರು, ನಿರ್ದೇಶಕರು ಸೇರಿದಂತೆ ಸಾವಿರಾರು ಜನರು ಡಾಲುರವಿ ಅವರಿಗೆ ಹುಟ್ಟು ಹಬ್ಬದ ಅಂಗವಾಗಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷರಾದ ಲೋಕೇಶ್ ವಿ.ಎಸ್ ರವಿ ಹೊನ್ನೇನಹಳ್ಳಿ, ಹೊಸಹೊಳಲು ಶ್ರೀನಿವಾಸ್, ಮಾಕವಳ್ಳಿ ರಂಗನಾಥ್, ಕರ್ನಾಟಕ ರಾಜ್ಯ ರೈತೋದಯ ಹಸಿರು ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಗೋವಿಂದರಾಜು, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಕರ್ನಾಟಕ ಯುವ ರಕ್ಷಣಾ ವೇದಿಕೆ ತಾಲ್ಲೂಕು ಅಧ್ಯಕ್ಷರಾದ ಜಾವೀದ್, ನಿಸಾರ್, ಭಾಸ್ಕರ್.ಶ್ರೀನಾಥ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಗೋವಿಂದರಾಜು.ಕೆ.ಕೂಡಲಕುಪ್ಪೆ.ಕೆ.ಆರ್ ಪೇಟೆ