ನೀರಿನ ಸಮಸ್ಯೆ ಆಗದಂತೆ ನೋಡಿ ಕೊಳ್ಳಬೇಕೆಂದು -ಸಚಿವ ಬೋಸರಾಜು ಸೂಚನೆ.
ಮಾನ್ವಿ ಮಾ.25

ಮಾನ್ವಿ ಹಾಗೂ ಸಿರವಾರ ತಾಲೂಕಲ್ಲಿ ಕುಡಿಯುವ ನೀರಿನ ಸಮಸ್ಯೆ ಯಾಗದಂತೆ ನೋಡಿ ಕೊಳ್ಳಬೇಕು ಎಂದು ಸಣ್ಣ ನೀರಾವರಿ ಹಾಗು ವಿಜ್ಞಾನ ತಂತ್ರಜ್ಞಾನ ಸಚಿವ ಎನ್.ಎಸ್ ಬೋಸರಾಜು ಅಧಿಕಾರಿಗಳಿಗೆ ಸೂಚಿಸಿದರು.
ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.
ಸಿರವಾರ ತಾಲೂಕ ವ್ಯಾಪ್ತಿಯ ಕುಡಿಯುವ ನೀರಿನ ಸಂಬಂಧ ಪಟ್ಟಂತೆ ಕೆರೆಗಳ ನೀರಿನ ಮಟ್ಟದ ವಿವರವನ್ನು ಪಡೆದು, ಬೇಸಿಗೆ ಕಾಲದಲ್ಲಿ ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದ ರೀತಿಯಲ್ಲಿ ನೋಡಿ ಕೊಳ್ಳಬೇಕು ಎಂದರು.
ಬೇಸಿಗೆ ಆವರಿಸಿದ್ದು, ಗ್ರಾಮೀಣ ಭಾಗದಲ್ಲಿ ಪಿ.ಡಿ.ಓ ಅವರು ನೀರಿನ ಸಮಸ್ಯೆ ಯಾಗದಂತೆ ನೋಡಿ ಕೊಳ್ಳಬೇಕು, ಮಾನ್ವಿ ಪುರಸಭೆ ವ್ಯಾಪ್ತಿಯಲ್ಲಿ ಪುರಸಭೆ ಅಧಿಕಾರಿಗಳು ಹಾಗೂ ಸದಸ್ಯರು ನಿಗಾ ವಹಿಸಬೇಕು ಎಂದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್.ಭಾಷಾ.ನಕ್ಕುಂದಿ.ಮಾನ್ವಿ