ಯುಗಾದಿ ಹಬ್ಬ ಹಿಂದೂಗಳಿಗೆ ಹೊಸ ವರ್ಷದ ಆರಂಭ – ಶ್ರೀಮತಿ ಯಶೋಧಾ ಪ್ರಕಾಶ್ ಅವರ ಅಭಿಪ್ರಾಯ.

ಚಳ್ಳಕೆರೆ ಮಾ.28

ಯುಗಾದಿ ಹಬ್ಬವು ಹಿಂದೂಗಳಿಗೆ ಹೊಸ ವರ್ಷದ ಆರಂಭವಾಗಿದೆ ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಸದ್ಭಕ್ತರಾದ ಶ್ರೀಮತಿ ಯಶೋಧಾ ಪ್ರಕಾಶ್ ಅಭಿಪ್ರಾಯ ಪಟ್ಟರು. ಶಿವನಗರದ ತಮ್ಮ ಜಿ‌.ವಿ.ಎಸ್ ನಿವಾಸದಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ಆಯೋಜಿಸಿದ್ದ ವಿಶೇಷ ಸತ್ಸಂಗ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು “ಯುಗಾದಿ ಹಬ್ಬದ ಹಿರಿಮೆ-ಗರಿಮೆ” ಯ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು. ವಸಂತ ಋತುವಿನಲ್ಲಿ ಬರುವ ಯುಗಾದಿ ಹಬ್ಬವು ಹಿಂದೂಗಳ ಪಾಲಿಗೆ ಪವಿತ್ರ ಪರ್ವವಾಗಿದ್ದು ಹಬ್ಬದ ಪ್ರಯುಕ್ತ ಆಚರಿಸಲಾಗುವ ಧಾರ್ಮಿಕ ಕಾರ್ಯಗಳ ಹಿಂದೆ ವೈಜ್ಞಾನಿಕ ಮತ್ತು ಆರೋಗ್ಯದ ಒಳಗುಟ್ಟಿದೆ ಎಂದು ತಿಳಿಸಿದರು.

ಈ ಸತ್ಸಂಗದ ಪ್ರಯುಕ್ತ ಶ್ರೀಶಾರದಾಶ್ರಮದ ಸದ್ಭಕ್ತರಿಂದ ಸಾಮೂಹಿಕ ಶ್ರೀಲಲಿತಾ ಸಹಸ್ರನಾಮ ಪಠಣ, ವಿಶೇಷ ಭಜನೆ ಮತ್ತು “ಶ್ರೀಶಾರದಾದೇವಿ ಜೀವನಗಂಗಾ” ಗ್ರಂಥ ಪಾರಾಯಣ ಕಾರ್ಯಕ್ರಮ ನಡೆಯಿತು. ಈ ಸತ್ಸಂಗ ಸಭೆಯಲ್ಲಿ ಶ್ರೀಶಾರದಾಶ್ರಮದ ಸದ್ಭಕ್ತರಾದ ಶ್ರೀಮತಿ ಭಾಗ್ಯಲಕ್ಷ್ಮೀ, ರಶ್ಮಿ ರಮೇಶ್, ಮಂಗಳ, ಶಾಂತಮ್ಮ, ಯತೀಶ್ ಎಂ ಸಿದ್ದಾಪುರ, ಮಾಣಿಕ್ಯ ಸತ್ಯನಾರಾಯಣ, ವಿಜಯಲಕ್ಷ್ಮಿ, ಗೀತಾಲಕ್ಷ್ಮೀ, ದ್ರಾಕ್ಷಾಯಣಿ, ವೀರಮ್ಮ, ಕೆ.ಎಸ್ ವೀಣಾ, ಶೈಲಜ, ಕೃಷ್ಣವೇಣಿ, ನಾಗರತ್ನಮ್ಮ, ಶಾರದಮ್ಮ, ಸೌಮ್ಯ, ಭ್ರಮರಂಭಾ ಇದ್ದರು.

ವರದಿ-ಯತೀಶ್ ಎಂ ಸಿದ್ದಾಪುರ, ಚಳ್ಳಕೆರೆ.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button