ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ – ಬೃಹತ್ ಪ್ರತಿಭಟನೆ.

ಹೊಸಪೇಟೆ ಏ.13

ಕೇಂದ್ರ ಸರಕಾರ ಜಾರಿ ಗೊಳಿಸಿರುವ ವಕ್ಸ್ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಅಂಜುಮನ್ ಖಿದ್ಮತೇ ಇಸ್ಲಾಂ ಕಮಿಟಿಯ ನೇತೃತ್ವದಲ್ಲಿ ಹೊಸಪೇಟೆಯಲ್ಲಿಂದು ಬೃಹತ್‌ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು.ಸಾವಿರಾರು ಮುಸ್ಲಿಂ ನಗರದ ಈದ್ದಾ ಮೈದಾನದಿಂದ ಮೆರವಣಿಗೆ ಆರಂಭಿಸಿ ಡಾ, ಬಿ.ಆ‌ರ್ ಅಂಬೇಡ್ಕರ್ ವೃತ್ತದ ಮಾರ್ಗವಾಗಿ ತಹಶೀಲ್ದಾ‌ರ್ ಕಚೇರಿ ಮುಂದೆ ರಸ್ತೆ ತಡೆದು ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯುವಂತೆ ಆಗ್ರಹಿಸಿದರು. ಕೇಂದ್ರ ಸರ್ಕಾರ ಪ್ರಧಾನಿ ನರೇಂದ್ರಮೋದಿ, ಅಮಿತ್ ಶಾ ವಿರುದ್ಧ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು.ವಕ್ಫ್ ತಿದ್ದುಪಡಿ ಮಸೂದೆ ಭಾರತದ ಸಂವಿಧಾನದ ಮೇಲಿನ ದಾಳಿಯಾಗಿದೆ. ಇದರ ಹಿಂದೆ ಅಲ್ಪಸಂಖ್ಯಾತರನ್ನು ದಮನಿಸುವ ಅವರ ಹಕ್ಕುಗಳನ್ನು ಕಿತ್ತುಕೊಳ್ಳುವುದು ಕೇಂದ್ರ ಸರ್ಕಾರದ ಹುನ್ನಾರವಾಗಿದೆ. ಭಾರತೀಯ ಸಮಾಜವನ್ನು ವಿಭಜಿಸುವ ಗುರಿ ಹೊಂದಿರುವ ಈ ಸಂವಿಧಾನಿಕ ವಕ್ಫ್ ತಿದ್ದುಪಡಿ ಮಸೂದೆಯನ್ನು ಹಿಂಪಡೆಯ ಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಸಂವಿಧಾನದ ವಿರುದ್ಧವಾಗಿರುವ ಕಾಯ್ದೆಯನ್ನು ಬಲವಾಗಿ ಖಂಡಿಸುತ್ತೇವೆ. ಈ ಕಾಯ್ದೆಯನ್ನು ಕರ್ನಾಟಕದಲ್ಲಿ ಜಾರಿ ಯಾಗದಂತೆ ರಾಜ್ಯ ಸರಕಾರ ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ಮುಂದಿನ ದಿನ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಆಗ್ರಹಿಸಿ ಮನವಿ ಪತ್ರವನ್ನು ಜಿಲ್ಲಾಧಿಕಾರಿ ವಿಜಯನಗರ ಜಿಲ್ಲೆ ಕರ್ನಾಟಕ ಇವರ ಮುಖಾಂತರ ಭಾರತದ ಸರ್ವೋಚ್ಚ ನ್ಯಾಯಾಲಯದ ಗೌರವಾನ್ವಿತ ಮುಖ್ಯ ನ್ಯಾಯಾಧೀಶರು ನವ ದೆಹಲಿ ರವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಹೊಸಪೇಟೆ ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್‌.ಎನ್.ಎಫ್ ಇಮಾಮ್ ನಿಯಾಝಿ, ಎಚ್.ಜಿ.ಗುರುದತ್, ಡಾ, ಮೈನುದ್ದೀನ್ ದುರ್ವೇಶ್, ಅಸ್ಲಂ ಮಳಗಿ, ಟಿಂಕ‌ರ್ ರಫೀಕ್, ಬಡಾವಲಿ, ಫಿರೋಝ್ ಖಾನ್, ಸದ್ದಾಮ್ ಹುಸೇನ್, ಸಯ್ಯದ್ ಖಾದರ್ ರಫ್ತಾಯಿ, ಶಬೀರ್, ಮೆಹಬೂಬ್, ಖಾಜಾ ಮಮುಹಮ್ಮದ್ ನಿಯಾಝ್, ಮನ್ಸೂರ್, ಪ್ರಗತಿಪರ ಮುಖಂಡರುಗಳಾದ ಭಾಸ್ಕರ್ ರೆಡ್ಡಿ, ಜಂಬಯ್ಯ ನಾಯಕ, ಕರುಣಾನಿಧಿ, ರಾಮಚಂದ್ರಪ್ಪ, ಮತ್ತಿತರರು ಭಾಗವಹಿಸಿದ್ದರು.

ತಾಲೂಕು ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂಎಸ್.ಕೆ ನ್ಯೂಸ್ ಕನ್ನಡ ಚಾನಲ್: ಮಾಲತೇಶ್.ಶೆಟ್ಟರ್.ಹೊಸಪೇಟೆ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button