ಜಗತ್ತಿನಲ್ಲಿ ಭಾರತೀಯ ಸನಾತನ ಸಂಸ್ಕೃತಿಗೆ ಬಹಳ ಗೌರವವಿದೆ – ಚೇತನ್ ಕುಮಾರ್.
ಚಳ್ಳಕೆರೆ ಏ.28

ಜಗತ್ತಿಲ್ಲಿ ಭಾರತೀಯ ಸನಾತನ ಸಂಸ್ಕೃತಿಗೆ ಉತ್ತಮ ಗೌರವವಿದೆ ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಸ್ವಯಂ ಸೇವಕ ಚೇತನ್ ಕುಮಾರ್ ತಿಳಿಸಿದರು. ನಗರದ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದ ದೇವಸ್ಥಾನದಲ್ಲಿ ಆಯೋಜಿಸಿದ್ದ “ವ್ಯಕ್ತಿತ್ವ ನಿರ್ಮಾಣಕಾರಿ ತರಗತಿ” ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಭಾರತೀಯ ಸಂಸ್ಕೃತಿಯ ಬಗ್ಗೆ ಉಪನ್ಯಾಸ ನೀಡಿದರು.

ಈ ಕಾರ್ಯಕ್ರಮದ ಆರಂಭದಲ್ಲಿ ಭಜನೆಯನ್ನು ಯತೀಶ್.ಎಂ ಸಿದ್ದಾಪುರ ನಡೆಸಿ ಕೊಟ್ಟರೆ, ಧ್ಯಾನಾಭ್ಯಾಸವನ್ನು ಮಾತಾಜೀ ತ್ಯಾಗಮಯೀ ಅವರು ನಡೆಸಿ ಕೊಟ್ಟರು. ಈ ಸಂದರ್ಭದಲ್ಲಿ ಶ್ರೀಶಾರದಾಶ್ರಮದ ಸದ್ಭಕ್ತರಾದ ಶ್ರೀಮತಿ ಮಂಜುಳ ಉಮೇಶ್, ನಾಗೇಶ್, ಸಂತೋಷ್, ಋತ್ವಿಕ್, ಅಂಬಣ್ಣ, ಸಂಜನ ಸೇರಿದಂತೆ ವಿದ್ಯಾರ್ಥಿಗಳು ಹಾಜರಿದ್ದರು.
ವರದಿ-ಯತೀಶ್ ಎಂ ಸಿದ್ದಾಪುರ, ಚಳ್ಳಕೆರೆ.