ಹುಣಸಿಕಟ್ಟೆ ಗ್ರಾಮದ ಶ್ರೀ ಆಂಜನೇಯ ಸ್ವಾಮಿಯ – ಪ್ರತಿಷ್ಠಾಪನೆ ಹಾಗೂ ಅಡ್ಡಪಲ್ಲಕ್ಕಿ ಮಹೋತ್ಸವ.
ಹುಣಸಿಕಟ್ಟೆ ಏ.29

ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಹುಣಸಿಕಟ್ಟೆ ಗ್ರಾಮದಲ್ಲಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಉದ್ಘಾಟನೆ ಹಾಗೂ ನೂತನ ಮೂರ್ತಿ ಪುನರ್ ಪ್ರಾಣ ಪ್ರತಿಷ್ಠಾಪನೆ ಹಾಗೂ ಅಡ್ಡಪಲ್ಲಕ್ಕಿ ಮಹೋತ್ಸವ ದಿನಾಂಕ 29 ಏಪ್ರಿಲ್ 2025 ನೇ. ಮಂಗಳವಾರ ದಂದು ನೆರವೇರಿತು. ಮಂಗಳವಾರ ಬೆಳಿಗ್ಗೆ 5:00 ಗೆ ದೇವಸ್ಥಾನದ ಹೋಮ ಮಾಡಿ ನಂತರ ಗಂಗೆಗೆ ಹೋಗಿ ಬಂದು ಶ್ರೀ ಆಂಜನೇಯ ಸ್ವಾಮಿಯ ಪ್ರತಿಷ್ಠಾಪನೆ ಮಾಡಲಾಯಿತು.

ನಂತರ ಶ್ರೀ ಶ್ರೀ ಶ್ರೀ 1008 ಜಗದ್ಗುರು ಸಿದ್ದಲಿಂಗ ರಾಜ ದೇಸಿಕೇಂದ್ರ ಶಿವಾಚಾರ್ಯ ಭಗವತ್ಪಾದ ಮಹಾ ಸ್ವಾಮಿಗಳನ್ನು ಅಡ್ಡಪಲ್ಲಕ್ಕಿ ಮಹೋತ್ಸವವನ್ನು ವಿಜೃಂಭಣೆಯಿಂದ ಡೊಳ್ಳು ನಂದಿಕೋಲು ಸಮಳ ಡ್ರಮ್ ಸೆಟ್ ಮುಂತಾದ ಸಕಲ ವಾದ್ಯಗಳೊಂದಿಗೆ ಅದ್ದೂರಿಯಾಗಿ ಮೆರವಣಿಗೆ ಮಾಡಲಾಯಿತು. ಸುತ್ತಮುತ್ತಲಿನ ಗ್ರಾಮಸ್ಥರು ಉಪಸ್ಥಿತಿಯಲ್ಲಿ ಧರ್ಮಸಭೆ ಕುರಿತು ಶ್ರೀಮದ್ ಉಜ್ಜಿನಿ ಜಗದ್ಗುರುಗಳು ಶ್ರೀ ಆಂಜನೇಯ ಸ್ವಾಮಿಯ ಇತಿಹಾಸವನ್ನು ನೆರೆದಂತೆ ಭಕ್ತಾದಿಗಳಿಗೆ ತಿಳಿಸಿದರು.

ನಂತರ ದೇವಸ್ಥಾನಕ್ಕೆ ಆಗಮಿಸಿದ ಸನ್ಮಾನ್ಯ ಶ್ರೀ ಶ್ರೀರಾಮುಲು ಮಾಜಿ ಸಚಿವರು ಅವರ ಆಪ್ತರಾದ ಬಿಎಸ್ಆರ್ ಮೂಗಣ್ಣ ಮಂದಾರ ಮಂಜು ಕೊಟ್ಟೂರು ಉಪಸ್ಥಿತರಿದ್ದರು. ಈ ಕಾರ್ಯಕ್ರಮಗಳಿಗೆ ಹುಣಸಿಕಟ್ಟೆ ಗ್ರಾಮಸ್ಥರು ಹಾಗೂ ಗ್ರಾಮ ಪಂಚಾಯತಿಯ ಅಧ್ಯಕ್ಷರೂ ಉಪಾಧ್ಯಕ್ಷರು ಮತ್ತು ಸರ್ವ ಸದಸ್ಯರು, ಕೊಟ್ಟೂರು ಮತ್ತು ಸುತ್ತಮುತ್ತಲಿನ ಗ್ರಾಮದ ಭಕ್ತಾದಿಗಳು ಶ್ರೀ ಸ್ವಾಮಿಯ ಕೃಪೆಗೆ ಪಾತ್ರರಾದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಪ್ರದೀಪ್.ಕುಮಾರ್.ಸಿ.ಕೊಟ್ಟೂರು