ಪಕ್ಷ ಅವಕಾಶ ಕೊಟ್ಟರೆ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿಯಾಗಲು ಸಿದ್ದ – ಪ್ರಮೋದ್ ಮಧ್ವರಾಜ್.
ತರೀಕೆರೆ ಆಗಷ್ಟ.14

ಕೋವಿಡ್ ಸಂದರ್ಭದಲ್ಲಿ ದೇಶವನ್ನು ರಕ್ಷಣೆ ಮಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ರವರ ನಾಯಕತ್ವವನ್ನು ಒಪ್ಪಿ ನಾನು ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಯಾಗಿದ್ದೇನೆ ಎಂದು ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ ಇಂದು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಪಕ್ಷ ಯಾವುದೇ ಜವಾಬ್ದಾರಿ ಕೊಟ್ಟರು ಚಾಚು ತಪ್ಪದೇ ನಿಭಾಯಿಸುತ್ತೇನೆ. 13 ವಿಧಾನಸಭಾ ಕ್ಷೇತ್ರಗಳಲ್ಲಿ ನಾನು ಪಕ್ಷದ ಪರವಾಗಿ ಕೆಲಸ ಮಾಡಿದ್ದೇನೆ ನರೇಂದ್ರ ಮೋದಿ ಮೂರನೇ ಬಾರಿಗೆ ಈ ದೇಶದ ಪ್ರಧಾನಿಯಾಗಿ ಮಾಡಬೇಕಾಗಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಅವಕಾಶ ಕೊಟ್ಟರೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಅಭ್ಯರ್ಥಿಯಾಗಲು ಸಿದ್ಧನಿದ್ದೇನೆ.
ಆದರೆ ಬೇರೆ ಯಾರೇ ಅಭ್ಯರ್ಥಿಯಾದರು ಕಾಯ ವಾಚ ಮನಸಾ, ಅಭ್ಯರ್ಥಿಯ ಪರವಾಗಿ ಕೆಲಸ ಮಾಡುತ್ತೇನೆ. ಹಾಗೂ ಕೊನೆ ಉಸಿರು ಇರುವವರೆಗೂ ಬಿಜೆಪಿಯಲ್ಲಿಯೇ ಮುಂದುವರಿಯಬೇಕೆಂದು ತೀರ್ಮಾನ ಮಾಡಿಕೊಂಡಿದ್ದೇನೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಹಲವಾರು ಸಮಸ್ಯೆಗಳಿವೆ ಕಾಫಿ, ಟೀ, ಅಡಿಕೆ, ಮೆಣಸು, ಬೆಳೆಗಾರರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಅಗತ್ಯವಿದೆ. ಕಸ್ತೂರಿರಂಗನ್ ವರದಿ ಅನುಷ್ಠಾನದಿಂದ ಆಗುವ ಅನುಕೂಲ, ಅನಾನುಕೂಲಗಳ ಬಗ್ಗೆ ಚಿಂತಿಸಬೇಕಾಗಿದೆ. ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚು ಪ್ರಾತಿನಿಧ್ಯ ನೀಡಬೇಕಾಗಿದೆ ಏಕೆಂದರೆ ಪ್ರಪಂಚದ, ದೇಶದ, ರಾಜ್ಯದ ಪ್ರವಾಸಿಗರು ಚಿಕ್ಕಮಗಳೂರಿಗೆ ಬಂದಾಗ ಅವರಿಗೆ ಎಲ್ಲಾ ಸೌಲಭ್ಯಗಳು ಸಿಗಬೇಕು ಪ್ರವಾಸೋದ್ಯಮ ಬೆಳೆಯಬೇಕು, ಉತ್ತಮವಾದ ಉದ್ಯೋಗ ಸೃಷ್ಟಿಸಬೇಕಾಗಿದೆ.
ನಿರೀಕ್ಷಿತ ಪ್ರಮಾಣದಲ್ಲಿ ಜಿಲ್ಲೆಯ ಕೆಲವು ತಾಲೂಕುಗಳು ಅಭಿವೃದ್ಧಿ ಹೊಂದಿಲ್ಲ, ನನಗೆ ಅವಕಾಶ ಕೊಟ್ಟರೆ ಜನರ ನಿರೀಕ್ಷೆಗೆ ಸ್ಪಂದಿಸಿ ಕೆಲಸ ಮಾಡುತ್ತೇನೆ ಯಾವುದೇ ವಿಚಾರದಲ್ಲಿ ತಾರತಮ್ಯವಿಲ್ಲದೆ ಸಮಾನವಾಗಿ ಕಾಣುತ್ತೇನೆ. ಎಲ್ಲಾ ತಾಲೂಕುಗಳಿಗೆ ಅನುದಾನವನ್ನು ಸರಿಸಮವಾಗಿ ನೀಡುತ್ತೇನೆ. ಪ್ರತಿಯೊಂದು ಸಮಸ್ಯೆಗಳಿಗೂ ಸ್ಪಂದಿಸಿ ಕೆಲಸ ಮಾಡುತ್ತೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ತರೀಕೆರೆಯ ಬಾಬು, ಅಜ್ಜಂಪುರ ದೇವರಾಜ್, ಉಡುಪಿಯ ಯುವ ಬಿಜೆಪಿ ಮುಖಂಡರಾದ ಪ್ರಣವ್ ಉಪಸಿದ್ಧರಿದ್ದರು. .
ಜಿಲ್ಲಾ ವರದಿಗಾರರು: ಎನ್.ವೆಂಕಟೇಶ್.ತರೀಕೆರೆ